Homeಕರ್ನಾಟಕನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

- Advertisement -
- Advertisement -

ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಡೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಶರಣಾಗತರಾಗಲಿದ್ದಾರೆ.

ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಇಂದು ಮಧ್ಯಾಹ್ನವೇ ಶರಣಾಗರಾಗಲಿದ್ದಾರೆ.

ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ. ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು.

“ನನ್ನ ಸಮ್ಮುಖದಲ್ಲೇ ಶರಣಾಗತಿ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗತಾನೇ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ, ಆರು ಜನ ನಕ್ಸಲ್ ಕಾರ್ಯಕರ್ತರನ್ನು ಪೊಲೀಸರ ಜೊತೆ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದೇವೆ” ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಹೇಳಿದರು.

ಇವರ ಜೊತೆಗೆ ನಕ್ಸಲ್ ಕಾರ್ಯಕರ್ತರ ಕುಟುಂಬದ ಸದಸ್ಯರನ್ನು ಪೊಲೀಸರ ಜೊತೆಯಲ್ಲಿಯೇ ಕರೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಂಡಗಾರು ಲತಾ ಸೇರಿದಂತೆ ಉಳಿದ 5 ನಕ್ಸಲರು ಬಂದೂಕುಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ” ಎಂದು ಸರ್ಕಾರ ತಿಳಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ.

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದರು. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಕಾನೂನು ಪ್ರಕಾರ ಕ್ರಮ ಆಗಲಿದೆ: ಪರಮೇಶ್ವರ್

ನಕ್ಸಲರ ಶರಣಾಗತಿಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, “”ಶರಣಾಗುವ ನಕ್ಸಲರ ವಿರುದ್ಧ ಹಲವು ಪ್ರಕರಣಗಳಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

“ವಿಕ್ರಂಗೌಡ ಎನ್‌ಕೌಂಟರ್ ವೇಳೆ ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿತ್ತು. ಕಾಡಿನಲ್ಲಿದ್ದು ಈ ರೀತಿ ಜೀವನ ಏಕೆ ಮಾಡುತ್ತಿದ್ದೀರಿ, ಸಮಾಜದ ಮುಖ್ಯ ವಾಹಿನಿಗೆ ಬನ್ನಿ ಅಂತ ಹೇಳಿದ್ದೇವೆ. ನಕ್ಸಲರ ವಿರುದ್ಧ ಹಲವು ಪ್ರಕರಣಗಳಿವೆ ನಿಜ, ಪ್ರಕರಣಗಳ ವಿಚಾರದಲ್ಲಿ ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದರು.

ನಕ್ಸಲ್ ನಾಯಕರ ನಡೆ ಸ್ವಾಗತಿಸಿದ ಸಚಿವ ದಿನೇಶ್

“ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳುತ್ತಿರುವ ಆರು ಜನ ನಕ್ಸಲೀಯರ ನಿರ್ಧಾರವನ್ನು ಸ್ವಾಗತ್ತಿಸುತ್ತೇನೆ‌. ನಕ್ಸಲರ ಶರಣಾಗತಿಯಿಂದ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಲಿದೆ. ಹಿಂಸೆ ಮತ್ತು ಕ್ರೌರ್ಯದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂಬ ಸತ್ಯ ನಕ್ಸಲ್ ಚಳವಳಿಯಲ್ಲಿ ತೊಡಗಿದ್ದವರಿಗೆ ಅರಿವಾಗಿದೆ. ಹಿಂಸಾಮಾರ್ಗವನ್ನು ತ್ಯಜಿಸುವ ಮೂಲಕ ಎಲ್ಲರೊಂದಿಗೆ ಘನತೆಯಿಂದ ಬದುಕುವ ಆಯ್ಕೆ ಮಾಡಿಕೊಂಡ ನಕ್ಸಲ್ ಚಳವಳಿಗಾರರಿಗೆ ಶುಭವಾಗಲಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಮಧ್ಯಸ್ಥಿಕೆ ವಹಿಸಿದ ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಶರಣಾದ ನಕ್ಸಲರ ಬದುಕು ರೂಪಿಸುವಲ್ಲಿ ನಮ್ಮ ಸರ್ಕಾರ ಕೂಡ ರಚನಾತ್ಮವಾಗಿ ಕ್ರಮ ವಹಿಸುವ ಜೊತೆಗೆ ನಕ್ಸಲರ ಕೆಲ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಲಿದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ‘ಶಾಂತಿಗಾಗಿ ನಾಗರಿಕ ವೇದಿಕೆ’ ನೇತೃತ್ವದಲ್ಲಿ ನಕ್ಸಲ್ ನಾಯಕರ ಶರಣಾಗತಿಗೆ ಕ್ಷಣಗಣನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....