Homeಕರ್ನಾಟಕನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

- Advertisement -
- Advertisement -

ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಡೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಶರಣಾಗತರಾಗಲಿದ್ದಾರೆ.

ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಇಂದು ಮಧ್ಯಾಹ್ನವೇ ಶರಣಾಗರಾಗಲಿದ್ದಾರೆ.

ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ. ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು.

“ನನ್ನ ಸಮ್ಮುಖದಲ್ಲೇ ಶರಣಾಗತಿ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗತಾನೇ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ, ಆರು ಜನ ನಕ್ಸಲ್ ಕಾರ್ಯಕರ್ತರನ್ನು ಪೊಲೀಸರ ಜೊತೆ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದೇವೆ” ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಹೇಳಿದರು.

ಇವರ ಜೊತೆಗೆ ನಕ್ಸಲ್ ಕಾರ್ಯಕರ್ತರ ಕುಟುಂಬದ ಸದಸ್ಯರನ್ನು ಪೊಲೀಸರ ಜೊತೆಯಲ್ಲಿಯೇ ಕರೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಂಡಗಾರು ಲತಾ ಸೇರಿದಂತೆ ಉಳಿದ 5 ನಕ್ಸಲರು ಬಂದೂಕುಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ” ಎಂದು ಸರ್ಕಾರ ತಿಳಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ.

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದರು. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಕಾನೂನು ಪ್ರಕಾರ ಕ್ರಮ ಆಗಲಿದೆ: ಪರಮೇಶ್ವರ್

ನಕ್ಸಲರ ಶರಣಾಗತಿಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, “”ಶರಣಾಗುವ ನಕ್ಸಲರ ವಿರುದ್ಧ ಹಲವು ಪ್ರಕರಣಗಳಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

“ವಿಕ್ರಂಗೌಡ ಎನ್‌ಕೌಂಟರ್ ವೇಳೆ ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿತ್ತು. ಕಾಡಿನಲ್ಲಿದ್ದು ಈ ರೀತಿ ಜೀವನ ಏಕೆ ಮಾಡುತ್ತಿದ್ದೀರಿ, ಸಮಾಜದ ಮುಖ್ಯ ವಾಹಿನಿಗೆ ಬನ್ನಿ ಅಂತ ಹೇಳಿದ್ದೇವೆ. ನಕ್ಸಲರ ವಿರುದ್ಧ ಹಲವು ಪ್ರಕರಣಗಳಿವೆ ನಿಜ, ಪ್ರಕರಣಗಳ ವಿಚಾರದಲ್ಲಿ ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದರು.

ನಕ್ಸಲ್ ನಾಯಕರ ನಡೆ ಸ್ವಾಗತಿಸಿದ ಸಚಿವ ದಿನೇಶ್

“ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳುತ್ತಿರುವ ಆರು ಜನ ನಕ್ಸಲೀಯರ ನಿರ್ಧಾರವನ್ನು ಸ್ವಾಗತ್ತಿಸುತ್ತೇನೆ‌. ನಕ್ಸಲರ ಶರಣಾಗತಿಯಿಂದ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಲಿದೆ. ಹಿಂಸೆ ಮತ್ತು ಕ್ರೌರ್ಯದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂಬ ಸತ್ಯ ನಕ್ಸಲ್ ಚಳವಳಿಯಲ್ಲಿ ತೊಡಗಿದ್ದವರಿಗೆ ಅರಿವಾಗಿದೆ. ಹಿಂಸಾಮಾರ್ಗವನ್ನು ತ್ಯಜಿಸುವ ಮೂಲಕ ಎಲ್ಲರೊಂದಿಗೆ ಘನತೆಯಿಂದ ಬದುಕುವ ಆಯ್ಕೆ ಮಾಡಿಕೊಂಡ ನಕ್ಸಲ್ ಚಳವಳಿಗಾರರಿಗೆ ಶುಭವಾಗಲಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಮಧ್ಯಸ್ಥಿಕೆ ವಹಿಸಿದ ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಶರಣಾದ ನಕ್ಸಲರ ಬದುಕು ರೂಪಿಸುವಲ್ಲಿ ನಮ್ಮ ಸರ್ಕಾರ ಕೂಡ ರಚನಾತ್ಮವಾಗಿ ಕ್ರಮ ವಹಿಸುವ ಜೊತೆಗೆ ನಕ್ಸಲರ ಕೆಲ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಲಿದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ‘ಶಾಂತಿಗಾಗಿ ನಾಗರಿಕ ವೇದಿಕೆ’ ನೇತೃತ್ವದಲ್ಲಿ ನಕ್ಸಲ್ ನಾಯಕರ ಶರಣಾಗತಿಗೆ ಕ್ಷಣಗಣನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...