Homeಕರ್ನಾಟಕಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಲಾಲ್‌ಬಾಗ್ ಪುಷ್ಪೋದ್ಯಾನಕ್ಕೆ ಸಾವರ್ಕರ್ ಪುಷ್ಪ ಕಾಶಿ ಎಂದು ಹೆಸರಿಡಲು ಹೇಸುವವರಲ್ಲ...

- Advertisement -
- Advertisement -

ಊರುಗಳ ಹೆಸರು ತಿರುಚುವ ಹಿಂದಿನ ಬ್ರಾಹ್ಮಣ್ಯಶಾಹಿ ಹುನ್ನಾರ. ಭಾಗ -1

  • ನಿಖಿಲ್ ಕೋಲ್ಪೆ

    ಊರ ಹೆಸರುಗಳಿಗೆ ಒಂದು ಹಿನ್ನೆಲೆಯಿರುತ್ತದೆ. ಅದು ಐತಿಹಾಸಿಕ, ಭೌಗೋಳಿಕ, ಸಾಂಸ್ಕೃತಿಕ ಮತ್ತು ಭಾಷಾಸಂಬಂಧಿ ಅಂಶಗಳನ್ನು ಹೊಂದಿರಬಹುದು. ಜನರ ಬಾಯಿಯಲ್ಲಿ ಕಾಲಕ್ರಮೇಣ ಹಲವು ಬದಲಾವಣೆಗಳನ್ನು ಕಂಡಿರಬಹುದು. ಆದರೆ, ಏಕಾಏಕಿಯಾಗಿ ಮತೀಯ ಸ್ಥಳಪುರಾಣಗಳನ್ನು ಹುಟ್ಟುಹಾಕಿ, ಸಂಸ್ಕೃತಮಯ, ಧರ್ಮಸಂಬಂಧಿ ಹೆಸರುಗಳನ್ನು ಶೋಧಿಸುವ ಮೂಲಕ ಸೂಕ್ಷ್ಮವಾಗಿ ಸ್ಥಳೀಯ ಸಂಸ್ಕೃತಿಗಳ ಮೇಲೆ ನಡೆಸಲಾಗುತ್ತಿರುವ ಆಕ್ರಮಣ ಅಪಾಯಕಾರಿ.

ಕೆಲದಿನಗಳ ಹಿಂದೆ ವಾಟ್ಸಾಪ್ ಯುನಿವರ್ಸಿಟಿಯ ವಿಧ್ವಂಸಕ ವಿದ್ವಾಂಸರೊಬ್ಬರು ಮದ್ದೂರಿನ ಹೆಸರು ಅರ್ಜುನಪುರಿ ಎಂಬ ಭಯಾನಕ ಸಂಶೋಧನೆಯನ್ನು ಫೇಸ್‌ಬುಕ್‌ನಲ್ಲಿ ಹರಿಯಬಿಟ್ಟಿದ್ದರು. ಉತ್ತರದ ಅರ್ಜುನನೆಲ್ಲಿ! ದಕ್ಷಿಣದ ಮದ್ದೂರು ಎಲ್ಲಿ? ಈ ಹಿನ್ನೆಲೆಯಲ್ಲಿ ಊರಿನ ಹೆಸರುಗಳ ಹೆಸರಿನಲ್ಲಿ ನಡೆಸಲಾಗುವ ಸೂಕ್ಷ್ಮ ಸಾಂಸ್ಕೃತಿಕ ಆಕ್ರಮಣಗಳನ್ನು ಇಲ್ಲಿ ಆಳವಾಗಿ ಅಲ್ಲವಾದರೂ, ಸ್ಥೂಲವಾಗಿ ನೋಡೋಣ. ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿರುವ ಟಿಪ್ಪು ಸುಲ್ತಾನ್ ಹೆಸರನ್ನು ಪಠ್ಯಗಳಿಂದ ತೆಗೆದುಹಾಕುವ ಕೋಮುವಾದಿ ಮನಸ್ಸುಗಳಲ್ಲಿ ಅಡಗಿರುವ ಪಿತೂರಿಗಳನ್ನು ಗುರುತಿಸಲು ಇದು ಸಹಕಾರಿಯಾಗಬಲ್ಲದು.

ಹಿಂದೆ ರಾಜರುಗಳು, ಸುಲ್ತಾನರು ತಾವು ಕಟ್ಟಿದ ನಗರಗಳಿಗೆ, ಕಟ್ಟಡಗಳಿಗೆ, ಸ್ಮಾರಕಗಳಿಗೆ ತಮಗೆ ಇಷ್ಟಬಂದ ಹೆಸರುಗಳನ್ನು ಇಟ್ಟಿದ್ದರು. ಪ್ರಜಾಪ್ರಭುತ್ವವಿಲ್ಲದ ರಾಜಪ್ರಭುತ್ವದಲ್ಲಿ ಅದು ಅಸಹಜವೇನಲ್ಲ. ಇದನ್ನೇ ಬ್ರಿಟಿಷರೂ ಮುಂದುವರಿಸಿದರು. ಜೊತೆಗೆ, ಅವರು ಮತ್ತು ಇತರ ವಿದೇಶೀಯರು ದೇಶೀಯ ಹೆಸರುಗಳನ್ನು ತಮ್ಮ ಉಚ್ಛಾರಣೆಗೆ ತಕ್ಕಂತೆ ಬದಲಾಯಿಸಿದರು. ನಾವು ನಮ್ಮ ಗುಲಾಮಿ ಬುದ್ದಿಗೆ ತಕ್ಕಂತೆ ಈ ಅಪಭ್ರಂಶಗೊಂಡ ಹೆಸರುಗಳನ್ನೇ ಹೆಮ್ಮೆಯಿಂದ ಉಚ್ಛರಿಸುತ್ತಾ ಖಾಯಂಗೊಳಿಸಿದೆವು. ಉದಾಹರಣೆಗೆ ಡೆಲ್ಲಿ, ಬಾಂಬೆ, ಮಡ್ರಾಸ್, ಬ್ಯಾಂಗಲೋರ್, ಕ್ಯಾಲಿಕಟ್ ಇತ್ಯಾದಿ ಹೆಸರುಗಳು.

ಇಂತಹಾ ಹೆಸರುಗಳನ್ನು ನಾವೀಗ ಒಂದು ಹಂತಕ್ಕೆ ಮೂಲ ಎನಿಸಬಲ್ಲ(?) ಹೆಸರುಗಳಿಗೆ ಬದಲಿಸಿದ್ದೇವೆ. ಇದರಲ್ಲಿ ತಪ್ಪೇನೂ ಇಲ್ಲ. ಅವು ಅಪಭ್ರಂಶಗೊಂಡ ನಮ್ಮದೇ ಹೆಸರುಗಳು. ಆದರೆ, ರಾಜರಿರಲಿ, ಸುಲ್ತಾನರಿರಲಿ, ಬ್ರಿಟಿಷರೇ ಇರಲಿ- ಅವರೇ ಕಟ್ಟಿದ ನಗರ ಮತ್ತು ನಿರ್ಮಾಣಗಳಿಗೆ ಇಟ್ಟ ಐತಿಹಾಸಿಕ ಹೆಸರುಗಳನ್ನು ಬದಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಏಳುತ್ತದೆ. ಅವರೇನು ತಮ್ಮ ಹಣದಿಂದ ಕಟ್ಟಿಲ್ಲ; ಜನರ, ದೇಶದ ಹಣದಿಂದ ಕಟ್ಟಿದರು ಎಂದು ವಾದಿಸಬಹುದು. ಇದನ್ನು ಒಪ್ಪಬಹುದಾದರೆ, ಇದು ಮುಸ್ಲಿಂ ದೊರೆಗಳು ಮತ್ತು ಬ್ರಿಟಿಷರಿಗೆ ಮಾತ್ರ ಅನ್ವಯವಾಗಿ ಹಿಂದೂ ರಾಜರಿಗೆ ಅನ್ವಯವಾಗದಿರುವುದು ಹೇಗೆ? ಆಗ ಬರಬಹುದಾದ ಉತ್ತರವೆಂದರೆ, ಹಿಂದೂ ರಾಜರು ನಮ್ಮವರು; ಉಳಿದವರು ಹೊರಗಿನವರು ಎಂಬುದು. ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರು ಎಂದು ಸೂಕ್ಷ್ಮವಾಗಿ ಸೂಚಿಸಿ, ಪ್ರತ್ಯೇಕಿಸುವ ಹುನ್ನಾರವೇ ಈ ಹೆಸರಿನ ರಾಜಕೀಯದಲ್ಲಿ ಅಡಗಿರುವುದು. ಇಲ್ಲಿ ಹೇಳಲಾದ ‘ಹಿಂದೂ’ಗಳು ಯಾರೆಂಬುದನ್ನು ಮುಂದೆ ಪರಿಶೀಲಿಸೋಣ.

ಇತ್ತೀಚೆಗೆ ಹೆಸರುಗಳನ್ನು ಕೋಮುವಾದಿ ಕಾರಣಗಳಿಗಾಗಿ ಬದಲಿಸುವ ಪರಿಪಾಠ ಹೆಚ್ಚಾಗುತ್ತಿದೆ. ಫಿರೋಜ್ ಶಾ ಕೋಟ್ಲಾ ಮೈದಾನವನ್ನು ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಬದಲಿಸಲಾಯಿತು. ಇದೇ ರೀತಿ ಹಲವಾರು ಇಸ್ಲಾಮಿಕ್ ಹೆಸರುಗಳನ್ನು ಬದಲಾಯಿಸಲಾಯಿತು. ಇನ್ನೂ ಹಲವಾರು ನಗರ ಪಟ್ಟಣಗಳು ಪಟ್ಟಿಯಲ್ಲಿವೆ. ಟಿಪ್ಪು ಸುಲ್ತಾನ್ ಹೆಸರನ್ನು ಪಠ್ಯಗಳಿಂದ ತೆಗೆಯಲು ಹೊರಟವರು, ಆತ ನಿರ್ಮಿಸಿದ ಬೆಂಗಳೂರಿನ ಲಾಲ್‌ಬಾಗ್ ಪುಷ್ಪೋದ್ಯಾನಕ್ಕೆ ಸಾವರ್ಕರ್ ಪುಷ್ಪ ಕಾಶಿ ಎಂದು ಹೆಸರಿಡಲು ಹೇಸುವವರಲ್ಲ. ಇದರ ಹಿಂದೆ ಅಡಗಿರುವುದು ಸಾರಾಸಗಟು ಮುಸ್ಲಿಂ ದ್ವೇಷ. ಅವರು ಈ ದೇಶದವರಲ್ಲ; ಹೊರಗಿನವರು ಎಂಬ ಸೂಕ್ಷ್ಮ ಮನಶ್ಶಾಸ್ತ್ರೀಯ ಸೂಚನೆ (Psychological suggestion) ನೀಡಿ, ಜನರನ್ನು ಒಡೆಯುವ ತಂತ್ರದ ಭಾಗವಿದು. ಇಂತಹ ಪ್ರಯತ್ನಗಳು ಹುಟ್ಟು ಹಾಕುವ ವಿವಾದಗಳು ಕೂಡಾ ಕೋಮುವಾದೀಕರಣದಲ್ಲಿ ನೆರವಾಗುತ್ತದೆ.

ಅದರಲ್ಲೂ ಇವರು ಪ್ರತಿಪಾದಿಸುವ ‘ಹಿಂದೂ’ ಹೆಸರುಗಳು ಯಾವುವು? ಕೆಲಸಮಯದ ಹಿಂದೆ ಗುರ್ಗಾಂವ್ (ಗುರುಗಾಂವ್) ಹೆಸರನ್ನು ಗುರುಗ್ರಾಮ್ ಎಂದು ಬದಲಿಸಲಾಯಿತು. ಎರಡರ ನಡುವೆ ಇದ್ದಂತಹಾ ಮಹಾನ್ ವ್ಯತ್ಯಾಸ ಏನು? ಗಾಂವ್ ಎಂದರೆ ಹಿಂದಿ, ಹರ್ಯಾಣ್ವಿ ಮತ್ತು ಪಂಜಾಬಿಯಲ್ಲೂ ಗ್ರಾಮವೇ. ಹಾಗಿದ್ದರೂ, ಈ ಬದಲಾವಣೆಗೆ ಪ್ರೇರಣೆ ಎಂದರೆ ಗುರು ಗ್ರಾಮ್ ಎಂಬುದು ಸಂಸ್ಕೃತ! ‘ಹಿಂದೂ’ ಹೆಸರಿನಲ್ಲಿ ಅದೇ ಧರ್ಮ ಅನುಸರಿಸುವ ಬ್ರಾಹ್ಮಣೇತರರ ಸಂಸ್ಕೃತಿ ಭಾಷೆಗಳ ಮೇಲೆ ತಮ್ಮ ಸಂಸ್ಕೃತಿ, ಸಂಸ್ಕೃತವನ್ನು ಹೇರುವ ಯತ್ನವಿದು. ಇದು ದೇಶದಾದ್ಯಂತ ನಡೆಯುತ್ತಲೇ ಬಂದಿದೆ. ಈಗ ಹೆಚ್ಚಾಗಿದೆ ಅಷ್ಟೇ.

ಇನ್ನೊಂದು ಹಳೆಯ ಚಾಳಿ ಎಂದರೆ, ಒಂದು ಧಾರ್ಮಿಕ ಅಥವಾ ಮತೀಯವಾದ ಸ್ಥಳ ಪುರಾಣ ಎಂಬ ಕಟ್ಟುಕತೆಯನ್ನು ಕಟ್ಟಿ, ಊರಿನ ಒಂದು ದೇವಸ್ಥಾನಕ್ಕೆ ಊರಿನ ಹೆಸರಿನ ಜೊತೆ ಸಂಬಂಧ ಕಲ್ಪಿಸಿ, ಅದನ್ನು ಊರ ದೇವಸ್ಥಾನ ಎಂದು ನಂಬಿಸಿ ಲಾಭ ಮಾಡಿಕೊಳ್ಳುವುದು; ಶೂದ್ರ ದಲಿತರು ಹಿಂದಿನಿಂದಲೂ ಆರಾಧಿಸಿಕೊಂಡು ಬರುತ್ತಿರುವ ಗ್ರಾಮೀಣ ದೇವತೆಗಳಿಗೆ ಪೌರಾಣಿಕ ಬಣ್ಣಹಚ್ಚಿ, ಅವರ ಗುಡಿದೇಗುಲಗಳ ಪಾರುಪತ್ಯ ವಹಿಸಿಕೊಳ್ಳುವುದು; ಆ ಗ್ರಾಮೀಣ ದೇವತೆಗಳಿಗೆ ಸಂಬಂಧಿಸಿದಂತೆ ಇರುವ ಗ್ರಾಮಗಳ ಹೆಸರುಗಳನ್ನು ಸಂಸ್ಕೃತಮಯ ಗೊಳಿಸಿ ಬದಲಿಸುವುದು. ಈ ಪುರಾಣಗಳನ್ನು ನೋಡಿದರೆ, ರಾಮ, ಲಕ್ಷ್ಮಣ, ಸೀತೆ, ಹನುಮಂತ, ಭೀಮಾರ್ಜುನರಾದಿ ಪಾಂಡವರು ‘ಭೇಟಿ’ ನೀಡದ ಊರುಗಳೇ ಭಾರತದಲ್ಲಿಲ್ಲ!

ಆ ದೇವಾಲಯದಿಂದ ಈ ಹೆಸರು ಬಂದಿದೆ; ಈ ದೇವರಿಂದ ಆ ಊರಿಗೆ ಈ ಹೆಸರು ಬಂದಿದೆ ಎಂದು ಹೇಳುವವರು ಒಂದು ತರ್ಕವನ್ನು ಮರೆತುಬಿಡುತ್ತಾರೆ. ಅದೆಂದರೆ, ಊರಿದ್ದರೆ ತಾನೇ ದೇವಾಲಯ! ಊರು ಮೊದಲು ಹುಟ್ಟುತ್ತದೋ, ದೇವಾಲಯವೊ?!

ಕೆಲವರ್ಷಗಳಿಂದ ಇನ್ನೊಂದು ಚಾಳಿ ಬೆಳೆದುಬಂದಿದೆ. ಊರಿನ ಹಳೆಯ ಹೆಸರುಗಳನ್ನು ಕಡೆಗಣಿಸಿ ಶ್ರೀರಾಮ ನಗರ, ಅಯೋಧ್ಯಾ ನಗರ, ದ್ವಾರಕಾ ನಗರ ಎಂದು ಅನಧಿಕೃತವಾಗಿ ಹೆಸರಿಡುವುದು. ಗತಿಸಿದ ಪ್ರಸಿದ್ಧ ವ್ಯಕ್ತಿಗಳು ಅಥವಾ ಯಾವುದೇ ಜಾತ್ಯತೀತವಾದ ಹೆಸರಿಡುವುದು ದಶಕಗಳಿಂದ ನಡೆದುಕೊಂಡುಬಂದಿದೆ. ಉದಾಹರಣೆಗೆ ಕುವೆಂಪು ನಗರ, ವಿವೇಕಾನಂದ ನಗರ, ಶಾಂತಿ ನಗರ ಇತ್ಯಾದಿ. ಇವುಗಳಲ್ಲಿ ಜಾತಿ ಧರ್ಮಗಳ ಹಂಗಿಲ್ಲ. ಆದರೆ, ಇದಕ್ಕೆ ಪ್ರತಿಕ್ರಿಯೆಯೋ ಎಂಬಂತೆ ಮುಸ್ಲಿಮರಾಗಲೀ, ಕ್ರೈಸ್ತರಾಗಲೀ, ದಲಿತರಾಗಲೀ ತಮ್ಮ ಬಾಹುಳ್ಯದ ಪ್ರದೇಶಗಳಿಗೆ ಟಿಪ್ಪುನಗರ, ಹಿದಾಯತ್ ನಗರ, ಸೆಬಾಸ್ಟಿಯನ್ ನಗರ, ಅಂಬೇಡ್ಕರ್ ನಗರ, ಭೀಮ ನಗರ ಎಂದು ಹೆಸರಿಟ್ಟರೆ, ಅದು ಕೋಮುವಾದಿ ಅನಿಸಿಕೊಳ್ಳುವುದು ವಿಪರ್ಯಾಸ. ಇವು ಕೂಡಾ ಅಷ್ಟೇ ಜಾತ್ಯತೀತ ಹೆಸರುಗಳು!

ಯಾವುದೇ ಊರಿನ ಹೆಸರು ಬದಲಿಸಬೇಕೆಂದರೆ, ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ನಿರ್ಣಯವಾಗಿ ಸರಕಾರಿ ಪ್ರಕಟಣೆ ಹೊರಡಬೇಕು. ಆದರೆ, ಈಗ ಮನ ಬಂದಂತೆ ಹೆಸರಿನ ಫಲಕಗಳನ್ನು ಹಾಕಲಾಗುತ್ತಿದೆ. ಹತ್ತಿರ ಹತ್ತಿರವೇ ಮೂರ್ನಾಲ್ಕು ಒಂದೇ ಹೆಸರಿನ ‘ನಗರ’ಗಳು ಕಾಣಸಿಗುತ್ತವೆ. ಅಂಚೆಯವರು ಕೂಡಾ ಪತ್ರದಲ್ಲಿ ಊರಿನ ಮೂಲ ಹೆಸರು ಬರೆಯದೇ ಇದ್ದರೆ, ಯಾವ ಊರಿನ ‘ನಗರ’ವಿದು ಎಂದು ತಲೆ ಕೆರೆದುಕೊಳ್ಳಬೇಕಾದ ಪರಿಸ್ಥಿತಿ!

ಯಾರು ಯಾವ ಊರಿನ ಹೆಸರನ್ನು ಏನೆಂದು ಬೇಕಾದರೂ ಬದಲಿಸಲಿ, ಸಾಮಾನ್ಯ ಜನರು ಮಾತ್ರ ಹಳೆಯ ಹೆಸರುಗಳನ್ನೇ ಬಳಸುತ್ತಾರೆ. ಉದಾಹರಣೆಗೆ ಮಂಗಳೂರು ವಿಶ್ವದಾಖಲೆ ಎನಿಸಬಹುದಾದಷ್ಟು ಹೆಸರುಗಳನ್ನು ಹೊಂದಿದೆ. ಮಂಗಳಾದೇವಿ ದೇವಸ್ಥಾನ ಇರುವುದರಿಂದ ಮಂಗಳೂರು ಎಂಬ ಹೆಸರು ಬಂತೆಂದು ಹೇಳಲಾಗುತ್ತಿದೆ, ನಂಬಲಾಗುತ್ತಿದೆ. ಇದು ಎಷ್ಟು ನಿಜವಿರಬಹುದು? ಏಕೆಂದರೆ, ಬಹುಸಂಖ್ಯಾತರಾಗಿರುವ ತುಳುವರು ಅದನ್ನು ಕುಡಲ ಅಥವಾ ಕುಡ್ಲ ಎಂದು ಇಂದಿಗೂ ಕರೆಯುತ್ತಾರೆ. ಅದೇ ರೀತಿ ಗೌಡ ಸಾರಸ್ವತ ಕೊಂಕಣಿಗರು ಕೊಡಿಯಾಲ, ಕ್ರೈಸ್ತರು ಮಂಗ್ಲೂರು, ಬ್ಯಾರಿ ಭಾಷೆ ಮಾತಾಡುವ ಮುಸ್ಲಿಮರು ಮೈಕಾಲ, ಮಲಯಾಳಿಗಳು ಮಂಗಳಾಪುರಂ ಎಂದು ಇಂದಿಗೂ ಕರೆಯುತ್ತಾರೆ. ಬ್ರಿಟಿಷರು ಇದನ್ನು ಮ್ಯಾಂಗಲೋರ್ ಮಾಡಿದರು. ಇಂಗ್ಲಿಷ್ ಕಲಿತವರೂ ಹಾಗೆಯೇ ಕರೆಯುತ್ತಿದ್ದರು, ಹಾಗೆಯೇ ಕರೆಯುತ್ತಿದ್ದಾರೆ. ಪೋರ್ಚುಗೀಸರು ಮಂಜರೂನ್ ಎಂದರು. ಹಾಗಾದರೆ, ಹೆಸರಿಗೂ, ಭಾಷೆಗೂ, ಸಂಸ್ಕೃತಿಗೂ, ಮಣ್ಣಿಗೂ ಸಂಬಂಧವಿದೆ ಎಂದಾಯಿತು. ಏಕಾಏಕಿ ಊರುಗಳ ಹೆಸರುಗಳನ್ನು ಬದಲಿಸಲು ಅವುಗಳೇನು ಬಣ್ಣ ಬದಲಿಸುವ ಗೋಸುಂಬೆಗಳೆ?

ಇಲ್ಲಿ ಇನ್ನೊಂದು ಗಂಭೀರ ವಿಷಯವನ್ನು ಗಮನಿಸಬೇಕು. ತನ್ನ ಬಹು ಹೆಸರುಗಳ ಮೂಲಕವೇ ಬಹುಭಾಷೆ, ಬಹುಧರ್ಮ, ಬಹುಸಂಸ್ಕೃತಿಗಳನ್ನು ಸಾಕಿಕೊಂಡುಬಂದ ಊರು ತಾನೆಂದು ಸೂಚಿಸುವ ಮಂಗಳೂರೇ ಇಂದು ಏಕಭಾಷೆ, ಏಕ ಸಂಸ್ಕೃತಿ, ಏಕಧರ್ಮವನ್ನು ಪ್ರತಿಪಾದಿಸುವ ಆದರೆ ಮಾನವರೆಲ್ಲರೂ ಏಕ ಜಾತಿ ಎಂದು ಎಂದೆಂದಿಗೂ ಒಪ್ಪದ ವಿಭಜನಕಾರಿ ಕೋಮುವಾದಿಗಳ ಪ್ರಯೋಗಶಾಲೆಯಾಗಿರುವುದು ದುರಂತ! ಇದೇ ಕರಾವಳಿಯನ್ನು ಹಿನ್ನೆಲೆಯಲ್ಲಿ ಇಟ್ಟುಕೊಂಡು ಇನ್ನಷ್ಟು ವಿಷಯಗಳನ್ನು ಮುಂದಿನ ಭಾಗದಲ್ಲಿ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...