Homeಕರ್ನಾಟಕಚನ್ನಪಟ್ಟಣ ಉಪಚುನಾವಣೆ | ಮುನಿರತ್ನ ಕುಕೃತ್ಯ ಎನ್‌ಡಿಎ ಮೈತ್ರಿಗೆ ಹೊಡೆತ ಬೀಳಲಿದೆಯೇ?

ಚನ್ನಪಟ್ಟಣ ಉಪಚುನಾವಣೆ | ಮುನಿರತ್ನ ಕುಕೃತ್ಯ ಎನ್‌ಡಿಎ ಮೈತ್ರಿಗೆ ಹೊಡೆತ ಬೀಳಲಿದೆಯೇ?

- Advertisement -
- Advertisement -

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಗಳು ಉಲ್ಲೇಖಿಸಿದ್ದು, ಚುನಾವಣೆ ಪ್ರಚಾರದ ವೇಳೆ ಈ ವಿಚಾರಗಳು ಸದ್ದು ಮಾಡಲಿವೆ. ಆದರೆ ಬಿಜೆಪಿ ಈ ಚುನಾವಣೆಯಲ್ಲಿ ಮಂಡ್ಯದ ನಾಗಮಂಗಲ ಹಿಂಸಾಚಾರ ವಿಚಾರವನ್ನು ಬಳಸಿಕೊಳ್ಳಲಿದೆ.ಚನ್ನಪಟ್ಟಣ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ತಿರುಗೇಟು ನೀಡಲು ಪ್ರಯತ್ನಿಸುತ್ತಿದ್ದು, ಅದರ ಭಾಗವಾಗಿಯೆ ರಾಜ್ಯ ಜೆಡಿಎಸ್‌ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮುನಿರತ್ನ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಆರೋಪಿಸಿದ್ದಾರೆ.

ಇದನ್ನೂಓದಿ: ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ಮುನಿರತ್ನ ವಿರುದ್ಧ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ದಲಿತ ಧಾರ್ಮಿಕ ಮುಖಂಡರು ಪ್ರತಿಭಟನೆಗೆ ಮನವಿ ಮಾಡಿದ್ದಾರೆ.

ಅಲ್ಲದೆ, ಒಕ್ಕಲಿಗರು ಮತ್ತು ದಲಿತರ ಒಂದು ವಿಭಾಗವು ಮುನಿರತ್ನ ಅವರನ್ನು ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇದೇ ವೇಳೆ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುನಿರತ್ನ ಹೇಳಿಕೆಯನ್ನು ಕ್ಷಮಿಸಲಾಗದು ಎಂದು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯವರೆಗೂ ಕಾಂಗ್ರೆಸ್ ಈ ಬಿಸಿಯನ್ನು ಹಾಗೆ ಉಳಿಸಿಕೊಳ್ಳಲು ಬಯಸಿದ್ದು, ಈ ವಿಚಾರವು ಒಕ್ಕಲಿಗರು ಮತ್ತು ದಲಿತರ ಪರ ಧ್ರುವೀಕರಣಕ್ಕೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾಗಿ TNIE ವರದಿ ಹೇಳಿದೆ. “ಮುನಿರತ್ನ ವಿಚಾರವು ದೊಡ್ಡ ಪರಿಣಾಮ ಬೀರಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಅದಾಗ್ಯೂ, ಬೆಂಗಳೂರು ನಗರದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಮುನಿರತ್ನ ಪ್ರಭಾವ ಸೀಮಿತವಾಗಿರುವುದರಿಂದ ಮುನಿರತ್ನ ಅವರು ಪಕ್ಷದ ಮುಖವಲ್ಲದ ಕಾರಣ ಈ ಚುನವಣೆಯಲ್ಲಿ ಅವರ ಕೃತ್ಯಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಪರ ವ್ಯಕ್ತಿಗಳು ಪ್ರತಿಪಾದಿಸುತ್ತಿದ್ದಾರೆ. ನಾಗಮಂಗಲದ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಈ ವಿಷಯವನ್ನು ಗಾಳಿಗೆ ತೂರುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಉಪ ಚುನಾವಣೆಗೆ ಯಾರು ಸ್ಪರ್ಧಿಸಬಹುದು ಎಂದು ಕಾಂಗ್ರೆಸ್ ಒಳಗೆ ಹೆಸರುಗಳು ಮುನ್ನಲೆಗೆ ಬರುತ್ತಿವೆಯಾದರೂ ಇನ್ನೂ ಅಂತಿಮವಾಗಿಲ್ಲ. ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಆದರೆ ಬಿಜೆಪಿಯಲ್ಲಿ ಹಲವಾರು ಹೆಸರುಗಳು ಮುನ್ನಲೆಯಲ್ಲಿದೆ. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಈ ಸೀಟು ತಮ್ಮ ಪಕ್ಷಕ್ಕೆ ಬರುವಂತೆ ಎನ್‌ಡಿಎ ಮೈತ್ರಿಯಲ್ಲಿ ಲಾಭಿ ಮಾಡಿಕೊಳ್ಳುತ್ತಿದ್ದಾರೆ. ಭಾಗಶಃ ಈ ಕ್ಷೇತ್ರ ಜೆಡಿಎಸ್ ಕೈಗೆ ಹೋಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಒಂದು ವೇಳೆ ಬಿಜೆಪಿ ತನ್ನ ಪಕ್ಷ ಮೈತ್ರಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟುಕೊಟ್ಟರೆ ಸಿಪಿ ಯೋಗೇಶ್ವರ್ ಅವರ ಬಂಡಾಯವನ್ನು ಪಕ್ಷವು ಎದುರಿಸಬೇಕಾಗುತ್ತದೆ. ಜೊತೆಗೆ ಸಿಪಿ ಯೋಗೇಶ್ವರ್ ಅವರ ಬಂಡಾಯ ಜೆಡಿಎಸ್‌ಗೂ ದುಬಾರಿಯಾಗಿ ಪರಿಣಮಿಸಲಿದ್ದು, ಕಾಂಗ್ರೆಸ್ ಇಲ್ಲಿ ಅನಾಯಸವಾಗಿ ಗೆಲ್ಲುತ್ತದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಬಿಜೆಪಿಯಿಂದ ಟಿಕೆಟ್ ತಪ್ಪಿದರೆ ಸಿಪಿ ಯೋಗೇಶ್ವರ್ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ನಡುವೆ ಅವರು ಬಿಎಸ್‌ಪಿಯಿಂದ ಸ್ಪರ್ಧಿಸುತ್ತಾರೆ ಎಂದು ಕೂಡಾ ಊಹಾಪೋಹ ಹರಿದಾಡಿತ್ತು. ಅಲ್ಲದೆ ಕಾಂಗ್ರೆಸ್ ಕೂಡಾ ಅವರನ್ನು ಸೆಳೆಯುವ ಸಾಧ್ಯತೆ ಇದೆ.

ವಿಡಿಯೊ ನೋಡಿ: ಮಾಮರದ ತಂಪಿಗೆ ಕೂತಿರುವ ಗಿಳಿಗಳೆ ಹಾಡು mamarada tampige kootiruva giligale

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...