Homeಕರ್ನಾಟಕಚನ್ನಪಟ್ಟಣ ಉಪಚುನಾವಣೆ | ಮುನಿರತ್ನ ಕುಕೃತ್ಯ ಎನ್‌ಡಿಎ ಮೈತ್ರಿಗೆ ಹೊಡೆತ ಬೀಳಲಿದೆಯೇ?

ಚನ್ನಪಟ್ಟಣ ಉಪಚುನಾವಣೆ | ಮುನಿರತ್ನ ಕುಕೃತ್ಯ ಎನ್‌ಡಿಎ ಮೈತ್ರಿಗೆ ಹೊಡೆತ ಬೀಳಲಿದೆಯೇ?

- Advertisement -
- Advertisement -

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಗಳು ಉಲ್ಲೇಖಿಸಿದ್ದು, ಚುನಾವಣೆ ಪ್ರಚಾರದ ವೇಳೆ ಈ ವಿಚಾರಗಳು ಸದ್ದು ಮಾಡಲಿವೆ. ಆದರೆ ಬಿಜೆಪಿ ಈ ಚುನಾವಣೆಯಲ್ಲಿ ಮಂಡ್ಯದ ನಾಗಮಂಗಲ ಹಿಂಸಾಚಾರ ವಿಚಾರವನ್ನು ಬಳಸಿಕೊಳ್ಳಲಿದೆ.ಚನ್ನಪಟ್ಟಣ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ತಿರುಗೇಟು ನೀಡಲು ಪ್ರಯತ್ನಿಸುತ್ತಿದ್ದು, ಅದರ ಭಾಗವಾಗಿಯೆ ರಾಜ್ಯ ಜೆಡಿಎಸ್‌ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮುನಿರತ್ನ ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಆರೋಪಿಸಿದ್ದಾರೆ.

ಇದನ್ನೂಓದಿ: ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ಮುನಿರತ್ನ ವಿರುದ್ಧ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ದಲಿತ ಧಾರ್ಮಿಕ ಮುಖಂಡರು ಪ್ರತಿಭಟನೆಗೆ ಮನವಿ ಮಾಡಿದ್ದಾರೆ.

ಅಲ್ಲದೆ, ಒಕ್ಕಲಿಗರು ಮತ್ತು ದಲಿತರ ಒಂದು ವಿಭಾಗವು ಮುನಿರತ್ನ ಅವರನ್ನು ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಇದೇ ವೇಳೆ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುನಿರತ್ನ ಹೇಳಿಕೆಯನ್ನು ಕ್ಷಮಿಸಲಾಗದು ಎಂದು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯವರೆಗೂ ಕಾಂಗ್ರೆಸ್ ಈ ಬಿಸಿಯನ್ನು ಹಾಗೆ ಉಳಿಸಿಕೊಳ್ಳಲು ಬಯಸಿದ್ದು, ಈ ವಿಚಾರವು ಒಕ್ಕಲಿಗರು ಮತ್ತು ದಲಿತರ ಪರ ಧ್ರುವೀಕರಣಕ್ಕೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾಗಿ TNIE ವರದಿ ಹೇಳಿದೆ. “ಮುನಿರತ್ನ ವಿಚಾರವು ದೊಡ್ಡ ಪರಿಣಾಮ ಬೀರಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಅದಾಗ್ಯೂ, ಬೆಂಗಳೂರು ನಗರದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಮುನಿರತ್ನ ಪ್ರಭಾವ ಸೀಮಿತವಾಗಿರುವುದರಿಂದ ಮುನಿರತ್ನ ಅವರು ಪಕ್ಷದ ಮುಖವಲ್ಲದ ಕಾರಣ ಈ ಚುನವಣೆಯಲ್ಲಿ ಅವರ ಕೃತ್ಯಗಳು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಪರ ವ್ಯಕ್ತಿಗಳು ಪ್ರತಿಪಾದಿಸುತ್ತಿದ್ದಾರೆ. ನಾಗಮಂಗಲದ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಈ ವಿಷಯವನ್ನು ಗಾಳಿಗೆ ತೂರುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಉಪ ಚುನಾವಣೆಗೆ ಯಾರು ಸ್ಪರ್ಧಿಸಬಹುದು ಎಂದು ಕಾಂಗ್ರೆಸ್ ಒಳಗೆ ಹೆಸರುಗಳು ಮುನ್ನಲೆಗೆ ಬರುತ್ತಿವೆಯಾದರೂ ಇನ್ನೂ ಅಂತಿಮವಾಗಿಲ್ಲ. ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಆದರೆ ಬಿಜೆಪಿಯಲ್ಲಿ ಹಲವಾರು ಹೆಸರುಗಳು ಮುನ್ನಲೆಯಲ್ಲಿದೆ. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಈ ಸೀಟು ತಮ್ಮ ಪಕ್ಷಕ್ಕೆ ಬರುವಂತೆ ಎನ್‌ಡಿಎ ಮೈತ್ರಿಯಲ್ಲಿ ಲಾಭಿ ಮಾಡಿಕೊಳ್ಳುತ್ತಿದ್ದಾರೆ. ಭಾಗಶಃ ಈ ಕ್ಷೇತ್ರ ಜೆಡಿಎಸ್ ಕೈಗೆ ಹೋಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಒಂದು ವೇಳೆ ಬಿಜೆಪಿ ತನ್ನ ಪಕ್ಷ ಮೈತ್ರಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟುಕೊಟ್ಟರೆ ಸಿಪಿ ಯೋಗೇಶ್ವರ್ ಅವರ ಬಂಡಾಯವನ್ನು ಪಕ್ಷವು ಎದುರಿಸಬೇಕಾಗುತ್ತದೆ. ಜೊತೆಗೆ ಸಿಪಿ ಯೋಗೇಶ್ವರ್ ಅವರ ಬಂಡಾಯ ಜೆಡಿಎಸ್‌ಗೂ ದುಬಾರಿಯಾಗಿ ಪರಿಣಮಿಸಲಿದ್ದು, ಕಾಂಗ್ರೆಸ್ ಇಲ್ಲಿ ಅನಾಯಸವಾಗಿ ಗೆಲ್ಲುತ್ತದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಬಿಜೆಪಿಯಿಂದ ಟಿಕೆಟ್ ತಪ್ಪಿದರೆ ಸಿಪಿ ಯೋಗೇಶ್ವರ್ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ನಡುವೆ ಅವರು ಬಿಎಸ್‌ಪಿಯಿಂದ ಸ್ಪರ್ಧಿಸುತ್ತಾರೆ ಎಂದು ಕೂಡಾ ಊಹಾಪೋಹ ಹರಿದಾಡಿತ್ತು. ಅಲ್ಲದೆ ಕಾಂಗ್ರೆಸ್ ಕೂಡಾ ಅವರನ್ನು ಸೆಳೆಯುವ ಸಾಧ್ಯತೆ ಇದೆ.

ವಿಡಿಯೊ ನೋಡಿ: ಮಾಮರದ ತಂಪಿಗೆ ಕೂತಿರುವ ಗಿಳಿಗಳೆ ಹಾಡು mamarada tampige kootiruva giligale

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...