Homeಕರ್ನಾಟಕಚನ್ನಪಟ್ಟಣ ಉಪಕದನ | ರೋಚಕ ಘಟ್ಟ ತಲುಪಿದ ಮೈತ್ರಿ ಜಟಾಪಟಿ : ಕಾದು ನೋಡುವ ತಂತ್ರದಲ್ಲಿ...

ಚನ್ನಪಟ್ಟಣ ಉಪಕದನ | ರೋಚಕ ಘಟ್ಟ ತಲುಪಿದ ಮೈತ್ರಿ ಜಟಾಪಟಿ : ಕಾದು ನೋಡುವ ತಂತ್ರದಲ್ಲಿ ಯೋಗೇಶ್ವರ್

- Advertisement -
- Advertisement -

ಚನ್ನಪಟ್ಟಣ ಉಪಚುನಾವಣೆಯ ಕಣ ರಂಗೇರಿದೆ. ಮೈತ್ರಿ ಪಕ್ಷಗಳ ಟಿಕೆಟ್ ಹಗ್ಗ ಜಗ್ಗಾಟ ರೋಚಕ ಘಟ್ಟ ತಲುಪಿದೆ. ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿರುವ ಸಿ.ಪಿ ಯೋಗೇಶ್ವರ್, ಇನ್ನೂ ಎರಡು ದಿನ ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದಾರೆ.

“ಗುರುವಾರ (ಅ.24) ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧಿಸುವುದಾಗಿ ಮಂಗಳವಾರ ಸಂಜೆ ತಿಳಿಸುತ್ತೇನೆ” ಎಂದು ಯೋಗೇಶ್ವರ್ ಹೇಳಿದ್ದರು. ಆದರೆ, ಮಂಗಳವಾರ ತಮ್ಮ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ ಯೋಗೇಶ್ವರ್, ಕಾದು ನೋಡುವ ನಿರ್ಧಾರಕ್ಕೆ ತೆಗೆದುಕೊಂಡಿದ್ದಾರೆ.

ದೆಹಲಿಯಿಂದ ಕರೆ : ಯೋಗೇಶ್ವರ್‌ಗೆ ದೆಹಲಿಯ ಬಿಜೆಪಿ ವರಿಷ್ಠರಿಂದ ಕರೆ ಬಂದಿದ್ದು, ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಯೋಗೇಶ್ವರ್ ಅವರನ್ನೇ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ, ಇದಕ್ಕೆ ಕುಮಾರಸ್ವಾಮಿ ಒಪ್ಪುತ್ತಾರಾ? ಎನ್ನುವ ಪ್ರಶ್ನೆ ಎದ್ದಿದೆ.

ಮಂಗಳವಾರ ಬೆಂಬಲಿಗರ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗೇಶ್ವರ್, “ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡುವುದಾದರೆ ನೀಡಲಿ. ಇಲ್ಲದಿದ್ದರೆ, ಬೆಂಬಲಿಗರ ಅಭಿಪ್ರಾಯದಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳುವೆ” ಎಂದಿದ್ದಾರೆ.

“ನಾನು ಮೈತ್ರಿ ಅಭ್ಯರ್ಥಿಯಾಗಲು ಒಪ್ಪಿರುವ ಜೆಡಿಎಸ್ ನಾಯಕರು, ಜೆಡಿಎಸ್‌ನಿಂದಲೇ ಕಣಕ್ಕಿಳಿಯಲು ಷರತ್ತು ಏಕೆ ಹಾಕಬೇಕು? ಜೆಡಿಎಸ್‌ನಿಂದ ಸ್ಪರ್ಧಿಸಲು ನನ್ನ ಬೆಂಬಲಿಗರ ವಿರೋಧವಿದೆ. ಮಾತ್ರವಲ್ಲ ಇದರಿಂದ ಪಕ್ಷದೊಳಗೆ ಹಿರಿತನಕ್ಕೂ ಧಕ್ಕೆಯಾಗಲಿದೆ. ಹಾಗಾಗಿ, ನಾನು 15 ವರ್ಷಗಳಿಂದ ಇರುವ ಬಿಜೆಪಿ ಪಕ್ಷದಿಂದಲೇ ಸ್ಪರ್ಧಿಸಲು ಅವಕಾಶ ನೀಡಲಿ” ಎಂದು ಯೋಗೇಶ್ವರ್ ಹೇಳಿದ್ದಾರೆ.

“ಇನ್ನೂ ಎಲ್ಲಿಯವರೆಗೆ ಬಗ್ಗಲಿ”? ಕುಮಾರಸ್ವಾಮಿ

ಅತ್ತ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಸ್ಪರ್ಧಿಸಲು ಅವಕಾಶ ನೀಡಲಿ, ಇಲ್ಲದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಹೇಳುತ್ತಿದ್ದರೆ, ಇತ್ತ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಿ ಅಥವಾ ಮೈತ್ರಿ ಅಭ್ಯರ್ಥಿ ಜೆಡಿಎಸ್‌ನಿಂದಲೇ ಕಣಕ್ಕಿಳಿಯಲಿ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ.

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಬಿಜೆಪಿ ನಾಯಕರ ವಿರುದ್ದ ಹರಿಹಾಯ್ದಿರುವ ಅವರು, “ಮೈತ್ರಿ ಧರ್ಮ ಪಾಲನೆಗಾಗಿ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ? ನನ್ನ ತಾಳ್ಮೆಗೂ ಮಿತಿ ಇದೆ” ಎಂದಿದ್ದಾರೆ.

ಮಂಗಳವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲ. ಈ ದೇಶದಲ್ಲಿ ಕಾಂಗ್ರೆಸ್ ತೊಲಗಿಸಬೇಕು ಎನ್ನುವ ಪ್ರಧಾನಿ ಮೋದಿಯವರ ಸಂಕಲ್ಪಕ್ಕಾಗಿ. ಅವರು ದೇವೇಗೌಡರಿಗೆ ಕೊಡುವ ಗೌರವಕ್ಕಾಗಿ. ಕೆಲವರ ಸ್ವಾರ್ಥಕ್ಕಾಗಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಂತಹ ನಾಯಕರ ಜೊತೆಗಿನ ಸಂಬಂಧ ಕಡಿದುಕೊಳ್ಳಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಕಂಬಳದ ವಿರುದ್ಧ ಪಿಐಎಲ್‌ : ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...