Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ಈ ನಡುವೆ ಚಿತ್ರನಟಿ ರಮ್ಯಾ ದಿವ್ಯಸ್ಪಂದನ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

- Advertisement -
- Advertisement -

ಉತ್ತಮ ಶಿಕ್ಷಣಕ್ಕೆ, ಸ್ವಾಭಿಮಾನಕ್ಕೆ ಹೆಸರುವಾಸಿಯಾದ ಊರು ಚನ್ನಪಟ್ಟಣ. ಮಂಡ್ಯದಲ್ಲಿ ಹಲವು ವಿದ್ಯಾಸಂಸ್ಥೆಗಳನ್ನು ಕಟ್ಟಿದ ಶಂಕರೇಗೌಡರು, ವೀರಣ್ಣಗೌಡರಂತ ಮಹನೀಯರು ಓದಿದ್ದು ಇಲ್ಲಿಯೇ. ಕರ್ನಾಟಕದ ಮೊದಲ ಶಿಕ್ಷಣ ಮಂತ್ರಿ ವಿ. ವೆಂಕಟಪ್ಪನವರು ಇದೇ ಊರಿನವರಾಗಿದ್ದು ಚನ್ನಪಟ್ಟಣ ಶೈಕ್ಷಣಿಕವಾಗಿ ಮುಂದುವರೆಯಲು ಕಾರಣವಿರಬಹುದು. ಚನ್ನಪಟ್ಟಣದ ಮರದ ಬೊಂಬೆಗಳು, ಕರಕುಶಲ ವಸ್ತುಗಳು ವಿಶ್ವದೆಲ್ಲೆಡೆ ಹೆಸರುವಾಸಿ. ಗಂಗರ ಕಾಲದಲ್ಲಿ ಚನ್ನಪಟ್ಟಣದ ’ಮಂಕುಂದ’ವು ಅವರ ಎರಡನೇ ರಾಜಧಾನಿಯಾಗಿತ್ತು. ಬೆಂಗಳೂರು-ಮೈಸೂರಿನ ನಡುವೆ ಸಮಾನ ಅಂತರದಲ್ಲಿರುವ ಚನ್ನಪಟ್ಟಣವು ರೇಷ್ಮೆ ಸೀರೆಗಳಿಗೂ ಸಹ ಖ್ಯಾತಿ ಪಡೆದಿದೆ.

ಇಂತಹ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪ್ರಜ್ಞೆಯ ಕೊರತೆಯಿಂದಾಗಿ ಹೊಸ ನಾಯಕತ್ವ ಹುಟ್ಟಿ ಬರುತ್ತಿಲ್ಲ ಎಂಬ ಕೊರಗು ಇದೆ. ಒಕ್ಕಲಿಗ ಮತ ಬಾಹುಳ್ಯದ ಈ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಎರಡನೇ ಸ್ಥಾನದಲ್ಲಿದ್ದರೆ ದಲಿತರು ಮೂರನೇ ಸ್ಥಾನದಲ್ಲಿದ್ದು ನಿರ್ಣಾಯಕ ಮತಗಳೆನಿಸಿಕೊಂಡಿವೆ. ಉಳಿದ ಸಮುದಾಯದ ಮತಗಳು ಹರಿದು ಹಂಚಿಹೋಗಿವೆ. ವಿದ್ಯಾವಂತರು, ಪ್ರಜ್ಞಾವಂತರು ಇರುವ ತಾಲ್ಲೂಕು ಎಂದು ಖ್ಯಾತಿ ಪಡೆದ ಚನ್ನಪಟ್ಟಣದಲ್ಲಿ ಪ್ರತಿ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗುತ್ತದೆ.

ಅಂದಾಜು ಮತಗಳು

ಒಟ್ಟು ಮತದಾರರು: 2,30,000

ಒಕ್ಕಲಿಗ: 1,05,000

ಎಸ್‌ಸಿ: 40,000

ಮುಸ್ಲಿಂ; 35,000

ಲಿಂಗಾಯಿತ: 11,000

ಕುರುಬರು: 8,000

ಇತರೆ: 31,000

ಲೀಲಾಜಾಲವಾಗಿ ಪಕ್ಷಾಂತರ ಮಾಡುವ ಸಿ.ಪಿ ಯೋಗಿಶ್ವರ್

ಚಿತ್ರನಟರಾಗಿದ್ದ ಸಿ.ಪಿ ಯೋಗಿಶ್ವರ್ ಚನ್ನಪಟ್ಟಣದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಅವರು ನಂತರ ಕಾಂಗ್ರೆಸ್ ಸೇರಿ 2004 ಮತ್ತು 2008ರ ಚುನಾವಣೆಗಳಲ್ಲಿ ಗೆಲುವು ಪಡೆದರು. ಆದರೆ ಆಪರೇಷನ್ ಕಮಲದ ಬಲೆಗೆ ಬಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ 2009ರಲ್ಲಿ ಉಪಚುನಾವಣೆ ಎದುರಿಸಿ ಜೆಡಿಎಸ್‌ನ ಅಶ್ವಥ್ ಎಂ.ಸಿ ಎದುರು ಕೇವಲ 2 ಸಾವಿರ ಮತಗಳಿಂದ ಸೋಲು ಅನುಭವಿಸಿದರು. ಆದರೆ ಅಷ್ಟಕ್ಕೆ ಸುಮ್ಮನಾಗದೆ ಶತಗತಾಯ ಗೆಲ್ಲಬೇಕೆಂದು ಹಠತೊಟ್ಟಿದ್ದರು. ಅಷ್ಟರಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಅಶ್ವಥ್‌ರವರು ಸಹ ಆಪರೇಷನ್ ಕಮಲದ ಬಲೆಗೆ ಬಿದ್ದಾಗ ಚನ್ನಪಟ್ಟಣಕ್ಕೆ 2011ರಲ್ಲಿ ಮತ್ತೆ ಉಪಚುನಾವಣೆ ಎದುರಾಯಿತು. ಆಗ ಬಿಜೆಪಿಯಿಂದ ಸಿ.ಪಿ ಯೋಗಿಶ್ವರ್ ಕಣಕ್ಕಿಳಿದರೆ, ಚುನಾವಣೆಗೆ ಕೇವಲ 9 ದಿನ ಇರುವಾಗ ಜೆಡಿಎಸ್‌ನಿಂದ ಎಸ್.ಎಲ್ ನಾಗರಾಜುರವರನ್ನು ಅಭ್ಯರ್ಥಿ ಎಂದು ಘೋಷಿಸಲಾಯಿತು. ಹಾಗಾಗಿ ಯೋಗಿಶ್ವರ್ ಗೆಲುವು ಸಾಧಿಸಿ ಮಂತ್ರಿಯಾದರು. ಆದರೆ ಅವರ ಪಕ್ಷಾಂತರ ಪರ್ವ ಮಾತ್ರ ನಿಲ್ಲಲಿಲ್ಲ. ಎರಡೇ ವರ್ಷದಲ್ಲಿ ಬಿಜೆಪಿ ತೊರೆದ ಅವರು 2013ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿಯವರನ್ನು ಸೋಲಿಸಿದರು. ನಂತರ ಮತ್ತೆ ಬಿಜೆಪಿ ಸೇರಿ 2018ರಲ್ಲಿ ಎಚ್.ಡಿ ಕುಮಾರಸ್ವಾಮಿ ಎದುರು ಸೋತರು. 2019ರಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಕೆಲಸ ಮಾಡಿದ್ದಕ್ಕಾಗಿ ಎಂಎಲ್‌ಸಿಯಾದ ಅವರು ಮತ್ತೊಮ್ಮೆ ಮಂತ್ರಿ ಸಹ ಆದರು. ಆದರೆ ಮಂತ್ರಿಗಿರಿ ಬಹಳ ದಿನ ಉಳಿಯಲಿಲ್ಲ. ಈಗ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಅವರು ಮತ್ತೆ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕುಮಾರಸ್ವಾಮಿ ಕೈಗೆ ಸಿಕ್ಕ ಕ್ಷೇತ್ರ

2004ರಿಂದ ಜೆಡಿಎಸ್ ಈ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸುತ್ತಿತ್ತು. ಆದರೆ ಆಗ ಕಾಂಗ್ರೆಸ್‌ನಲ್ಲಿದ್ದ ಸಿ.ಪಿ ಯೋಗಿಶ್ವರ್ ಅದಕ್ಕೆ ಅವಕಾಶ ನೀಡಿರಲಿಲ್ಲ. ಆದರೆ 2009ರಲ್ಲಿ ಯೋಗಿಶ್ವರ್ ಬಿಜೆಪಿಗೆ ಪಕ್ಷಾಂತರ ಮಾಡಿದಾಗ ಜೆಡಿಎಸ್‌ನ ಅಶ್ವಥ್‌ಗೆ ಶಾಸಕ ಸ್ಥಾನ ದಕ್ಕಿತು. ಆದರೆ ನಂತರ ಎರಡೇ ವರ್ಷದಲ್ಲಿ ಅವರು ಸಹ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಸೇರಿದರು. ನಂತರದ ಉಪಚುನಾವಣೆಯಲ್ಲಿ ಜೆಡಿಎಸ್‌ನ ಎಸ್.ಎಲ್ ನಾಗರಾಜು ಸೋಲು ಅನುಭವಿಸಿದರು. ಆ ನಂತರ ಅವರಿಗೆ ಟಿಕೆಟ್ ನಿರಾಕರಿಸಲಾಯಿತು. ಒಂದು ವೇಳೆ ಅವರು ಗೆದ್ದರೆ ಮತ್ತೆ ಆ ಸೀಟನ್ನು ನಾಗರಾಜು ಬಿಟ್ಟು ತಮಗೆ ಬೇಕಾದವರಿಗೆ ಕೊಡಲು ಸಾಧ್ಯವಿಲ್ಲ ಎಂಬುದು ಕುಮಾರಸ್ವಾಮಿಯವರ ಇಂಗಿತವಾಗಿತ್ತು ಎಂಬ ಆರೋಪ ಸಹ ಇದೆ. 2013ರಲ್ಲಿ ಜೆಡಿಎಸ್‌ನಿಂದ ಅನಿತಾ ಕುಮಾರಸ್ವಾಮಿಯವರೆ ಕಣಕ್ಕಿಳಿದರೂ ಸಹ ಗೆಲುವು ಕೈಗೆ ಸಿಗಲಿಲ್ಲ. ಅವರ ಎದುರು 6,464 ಮತಗಳಿಂದ ಸಿ.ಪಿ ಯೋಗಿಶ್ವರ್ ಗೆಲುವು ಸಾಧಿಸಿದರು. ಈ ಕ್ಷೇತ್ರವನ್ನು ಹೇಗಾದರೂ ಮಾಡಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ಎಚ್.ಡಿ.ಕೆ 2018ರ ಚುನಾವಣೆಯಲ್ಲಿ ರಾಮನಗರದ ಜೊತೆಗೆ ಚನ್ನಪಟ್ಟಣದಿಂದಲೂ ಸಹ ಕಣಕ್ಕಿಳಿದರು ಮತ್ತು ಎರಡೂ ಕಡೆ ಗೆಲುವು ಸಾಧಿಸಿದರು. ಕೊನೆಗೂ ಚನ್ನಪಟ್ಟಣ ಜೆಡಿಎಸ್ ಫ್ಯಾಮಿಲಿಯ ವಶವಾಯಿತು. ಮುಂಬರುವ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಇಲ್ಲಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ. ಅದಕ್ಕಾಗಿಯೇ ರಾಮನಗರಕ್ಕೆ ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿಯವರನ್ನು ತಂದಿದ್ದಾರೆ.

ಅನಿತಾ ಕುಮಾರಸ್ವಾಮಿ

ಕಾಂಗ್ರೆಸ್ ಕಾರ್ಯತಂತ್ರವೇನು?

ಚನ್ನಪಟ್ಟಣ ಕಾಂಗ್ರೆಸ್ ಹಿಡಿತದಲ್ಲಿದ್ದ ಕ್ಷೇತ್ರ. 1952ರಿಂದ ಇಲ್ಲಿ 7 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೆ ಯಾವಾಗ 2008ರಲ್ಲಿ ಯೋಗಿಶ್ವರ್ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದರೋ ಆಗಿನಿಂದ ಇಲ್ಲಿ ಕಾಂಗ್ರೆಸ್ ಮಂಕಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇಲ್ಲಿ ಕಾಂಗ್ರೆಸ್ ಮುಖಗಳಿಲ್ಲ. 2018ರ ಕೊನೆಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಚ್.ಎಂ ರೇವಣ್ಣನವರು ಪಡೆದ ಮತಗಳು ಕೇವಲ 30,208. ಕನಕಪುರದಲ್ಲಿ ಪಾರಮ್ಯ ಸಾಧಿಸಿರುವ ಡಿ.ಕೆ ಸಹೋದರರು, ರಾಮನಗರ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುವುದಕ್ಕೋಸ್ಕರ, ಚನ್ನಪಟ್ಟಣವನ್ನು ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ಹೆಣೆಯುತ್ತಿದ್ದಾರೆ. ಅದರ ಭಾಗವಾಗಿಯೇ, ಕಾಂಗ್ರೆಸ್ ತೊರೆದುಹೋಗಿ ಇತ್ತೀಚೆಗೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಹಲವರನ್ನು ಕಾಂಗ್ರೆಸ್‌ಗೆ ವಾಪಸ್ ಕರೆತರುವ ಬಗ್ಗೆ ಒಳಗೊಳಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಆ ಭಾಗವಾಗಿ ಸಿ.ಇ ಯೋಗಿಶ್ವರ್ ಕೂಡ ಕಾಂಗ್ರೆಸ್‌ಗೆ ಬರುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಯೋಗಿಶ್ವರ್‌ರವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಅದೆಲ್ಲವೂ ಅವರು ಬಿಜೆಪಿ ಬಿಡುತ್ತಾರೆ ಎನ್ನುವ ಸೂಚನೆಯಾಗಿದೆ. ಆದರೆ ಯೋಗಿಶ್ವರ್ – ಡಿ.ಕೆ ಸಹೋದರರು ಒಮ್ಮೊಮ್ಮೆ ಹಾವು – ಮುಂಗುಸಿಯಂತೆಯೂ ಆಡುತ್ತಾರೆ. ಒಮ್ಮೊಮ್ಮೆ ಚೆನ್ನಾಗಿರುತ್ತಾರೆ. ಹಾಗಾಗಿ ಯಾವುದನ್ನು ಈಗಲೇ ಹೇಳಲು ಸಾಧ್ಯವಾಗುತ್ತಿಲ್ಲ.

ಈ ನಡುವೆ ಚಿತ್ರನಟಿ ರಮ್ಯಾ ದಿವ್ಯಸ್ಪಂದನ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಕೋಲಾರದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಲು ನಿರ್ಧರಿಸಿರುವ ಎಚ್.ಡಿ ಕುಮಾರಸ್ವಾಮಿಯವರಿಗೆ ಟಕ್ಕರ್ ಕೊಡಲು ಇಲ್ಲಿ ರಮ್ಯಾರನ್ನು ಕಣಕ್ಕಿಳಿಸಲಾಗುತ್ತಿದೆ. ಹೋರಾಟ ಕೊಟ್ಟ ಸೋತರೂ ಕೂಡ ಅವರನ್ನು ಎಂಎಲ್‌ಸಿ ಮಾಡಲಾಗುತ್ತದೆ ಎಂಬುದಾಗಿ ಮಾಧ್ಯಮಗಳು ಬರೆದವು. ಆದರೆ ಡಿ.ಕೆ ಸುರೇಶ್ ಆ ವರದಿಗಳನ್ನು ನಿರಾಕರಿಸಿದ್ದಾರೆ. ಇನ್ನು ಹೆಚ್.ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ರಮ್ಯಾರವರು ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಪ್ರಸನ್ನಗೌಡರವರು ಸೇರಿದಂತೆ ಚನ್ನಪಟ್ಟಣದ ಕಾಂಗ್ರೆಸ್ ಟಿಕೆಟ್‌ಗಾಗಿ 8 ಜನ ಅರ್ಜಿ ಸಲ್ಲಿಸಿದ್ದು, ತಯಾರಿ ನಡೆಸಿದ್ದಾರೆ. ಬೋರ್‌ವೆಲ್ ರಂಗನಾಥ್, ಡಿ.ಕೆ ಕಾಂತರಾಜು, ಭಗತ್ ರಾಮ್, ಕರುಣಾಕರ್, ಚಂದ್ರ ಸಾಗರ್ ಅರ್ಜಿ ಸಲ್ಲಿಸಿದ ಪ್ರಮುಖರಾಗಿದ್ದಾರೆ.

ಬಿಜೆಪಿ ಪರಿಸ್ಥಿತಿ

ಬಿಜೆಪಿ ಪಕ್ಷವು ಇಲ್ಲಿ ಜಯ ಗಳಿಸಿರುವುದು ಕೇವಲ ಒಮ್ಮೆ ಮಾತ್ರ. ಅದು 2011ರ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಗೆದ್ದದ್ದು. ಎರಡು ವರ್ಷಗಳಲ್ಲಿಯೇ ಅವರು ಪಕ್ಷ ಬಿಟ್ಟು ಸಮಾಜವಾದಿ ಪಕ್ಷ ಸೇರಿದ್ದರು. ಆ ನಂತರ 2017ರಲ್ಲಿ ಅವರು ಮತ್ತೆ ಬಿಜೆಪಿಗೆ ಬಂದರಾದರೂ 2018ರಲ್ಲಿ ಸೋಲು ಕಂಡಿದ್ದಾರೆ. ಹಾಗಾಗಿ ಇಲ್ಲಿ ಒಂದು ಪಕ್ಷವಾಗಿ ಬಿಜೆಪಿ ಗೆದ್ದಿದೆ ಎನ್ನುವುದಕ್ಕಿಂತ ಸಿ.ಪಿ ಯೋಗೇಶ್ವರ್‌ರವರ ವರ್ಚಿಸ್ಸಿನಿಂದ ಗೆಲ್ಲಲಾಗಿತ್ತು ಎನ್ನುವುದು ಸೂಕ್ತ. ಈಗಾಗಲೇ ಹೇಳಿದಂತೆ ಅವರು ಜೆಡಿಎಸ್ ಬಿಟ್ಟು ಉಳಿದೆಲ್ಲ ಪಕ್ಷಗಳಿಗೆ ಹೋಗಿ ಚುನಾವಣೆಗೆ ನಿಂತು ಗೆದ್ದಿದ್ದಾರೆ ಮತ್ತು ಸೋತಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿಗೆ ಯೋಗಿಶ್ವರ್ ಹೊರತುಪಡಿಸಿ ಮತ್ತೆ ಯಾರೂ ಗಟ್ಟಿ ನಾಯಕರೂ ಕಾಣುತ್ತಿಲ್ಲ. ಈ ನಡುವೆ ಯೋಗೇಶ್ವರ್ ಸಹ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರು. ಇಡೀ ರಾಮನಗರ ಜಿಲ್ಲೆಯಲ್ಲಿಯೇ ಬಿಜೆಪಿ ಫೈಟ್ ಮಾಡಬಹುದಾದ ಕ್ಷೇತ್ರ ಚನ್ನಪಟ್ಟಣವಾಗಿದೆ. ಆದರೆ ಬಿಜೆಪಿಯಿಂದ ಯೋಗೀಶ್ವರ್‌ಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗುತ್ತಿದೆ.

ಇನ್ನು ಡಿ.ಕೆ ಸಹೋದರರ ಭಾವ ಸಿ.ಪಿ ಶರತ್ ಚಂದ್ರರವರು ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರಿದ್ದು, ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಚನ್ನಪಟ್ಟಣ ಸಮೀಕ್ಷೆಯ ವಿಡಿಯೋ ನೋಡಿ

ನಗರಸಭೆ ಫಲಿತಾಂಶ

ಕಳೆದ ವರ್ಷ ನಡೆದ ಚನ್ನಪಟ್ಟಣ ನಗರಸಭೆ ಚುನಾವಣೆಯಲ್ಲಿ 31 ವಾರ್ಡ್‌ಗಳ ಪೈಕಿ ಜೆಡಿಎಸ್ 16 ವಾರ್ಡ್‌ಗಳಲ್ಲಿ ಗೆದ್ದು ಅಧಿಕಾರ ಹಿಡಿದಿದೆ. ಕಾಂಗ್ರೆಸ್ 7 ಮತ್ತು ಬಿಜೆಪಿ 7 ವಾರ್ಡ್‌ಗಳಿಗೆ ಸೀಮಿತವಾಗಿವೆ. 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ. ಈ ಫಲಿತಾಂಶ ಜೆಡಿಎಸ್ ಪರವಾಗಿರುವಂತೆ ಕಾಣುತ್ತಿದೆ.

ಸದ್ಯಕ್ಕೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಪಿ ಯೋಗೇಶ್ವರ್ ನಡುವೆ ನೇರ ಹಣಾಹಣಿಯಂತೆ ಕಂಡುಬರುತ್ತಿದೆ. ಎಚ್.ಡಿ ಕುಮಾರಸ್ವಾಮಿಯವರು ಬಹಳ ಆತ್ಮವಿಶ್ವಾಸದಿಂದ ಕಣಕ್ಕಿಳಿದಿದ್ದಾರೆ. ಇನ್ನು ಯೋಗೇಶ್ವರ್ ಶತಾಯ ಗತಾಯ ಗೆಲ್ಲಲೇಬೇಕೆಂದು ನಿರ್ಧರಿಸಿದ್ದಾರೆ. ಇವರಿಬ್ಬರ ಫೈಟ್ ನಡುವೆ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಆದರೆ ಡಿ.ಕೆ ಸಹೋದರರು ಹೆಚ್.ಡಿ ಕುಮಾರಸ್ವಾಮಿಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆಯೇ ಅಥವಾ ವಿರೋಚಿತ ಹೋರಾಟ ನೀಡುತ್ತಾರೆಯೇ ಕಾದು ನೋಡಬೇಕಿದೆ.

ನೀರಾವರಿ ಮತ್ತು ಕೆರೆ ತುಂಬಿಸುವಿಕೆ

ಹಲವು ವರ್ಷಗಳಿಂದ, ಚನ್ನಪಟ್ಟಣದಲ್ಲಿ ಆಗಿರುವ ಅಭಿವೃದ್ದಿ ಏನು ಎಂದು ಯಾರನ್ನಾದರೂ ಕೇಳಿದರೆ ಮೊದಲು ಹೇಳುವ ಉತ್ತರ ಕೆರೆಗಳಿಗೆ ನೀರು ತುಂಬಿಸಿದ್ದಾರೆ ಎಂಬುದೇ ಆಗಿದೆ. ತಾಲ್ಲೂಕಿನ ಕಣ್ವ ಜಲಾಶಯ ಹಿಂದೆ ಬರಿದಾಗಿದ್ದು ಈಗ ತುಂಬಿ ತುಳುಕುತ್ತಿದೆ. ಹಾಗಾಗಿ ಕ್ಷೇತ್ರದಾದ್ಯಂತ ಅಂತರ್ಜಲ ವೃದ್ಧಿಯಾಗಿದೆ. 50 ಅಡಿಗೆಲ್ಲ ನೀರು ಸಿಗುತ್ತಿದೆ, ವ್ಯವಸಾಯ ಉತ್ತಮಗೊಂಡಿದೆ ಎಂದು ಕೆಲ ರೈತರು ಹೇಳುತ್ತಾರೆ. ಇದು ಸಿ.ಪಿ ಯೋಗಿಶ್ವರ್‌ಗೆ ದೊಡ್ಡ ಹೆಸರು ತಂದುಕೊಟ್ಟಿರುವುದು ಸುಳ್ಳಲ್ಲ. ಅದರೊಟ್ಟಿಗೆ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡ ಮೊತ್ತದ ಹಣವನ್ನು ಸಹ ತಂದುಕೊಟ್ಟಿದೆ. ಡಿ.ವಿ ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿ.ಪಿ ಯೋಗೇಶ್ವರ್ ತಾಲ್ಲೂಕಿನ ನೀರಾವರಿ ಯೋಜನೆಗಳಿಗೆಂದೇ 250 ಕೋಟಿ ರೂ ಮಂಜೂರು ಮಾಡಿಸಿಕೊಂಡಿದ್ದರು. ಅದರಲ್ಲಿ ಶೇ.19ರಷ್ಟು (50 ಕೋಟಿ) ಹಣ ಭ್ರಷ್ಟಾಚಾರಕ್ಕೆ ಸೋರಿಹೋಗಿದೆ ಎಂಬುದು ಮೂಲಗಳ ಆರೋಪ.

ಕ್ಷೇತ್ರದ ಸಮಸ್ಯೆಗಳು

ಈಗಾಗಲೇ ಹೇಳಿದಂತೆ ಚನ್ನಪಟ್ಟಣ ಗುಡಿ ಕೈಗಾರಿಕೆಗೆ ಹೆಸರುವಾಸಿ. ಇಲ್ಲಿನ ಬಹುತೇಕ ಮುಸ್ಲಿಂ ಕುಟುಂಬಗಳು ಇದನ್ನೆ ನಂಬಿ ಜೀವನ ಸಾಗಿಸುತ್ತಿದ್ದವು. ಆದರೆ ಯಾವಾಗ ಮರದ ಬೊಂಬೆಗಳ ಮೇಲೂ ಜಿಎಸ್‌ಟಿ ವಿಧಿಸಲಾಯಿತೊ ನಿಧಾನವಾಗಿ ಗುಡಿ ಕೈಗಾರಿಕೆ ನಶಿಸುತ್ತಿದೆ. ಕೆಎಸ್‌ಐಸಿಯ ಸ್ಟನ್ ಸಿಲ್ಕ್ ಮಿಲ್ ಮುಚ್ಚುತ್ತಿದೆ. ಚೀನಾದಿಂದ ನುಗ್ಗಿ ಬರುತ್ತಿರುವ ಪ್ಲಾಸ್ಟಿಕ್ ಬೊಂಬೆಗಳ ಎದುರು ಇಲ್ಲಿನ ರಾಸಾಯನಿಕ ಬಣ್ಣ ಮುಕ್ತ ಬೊಂಬೆಗಳಿಗೆ ಸೆಣಸಲಾಗುತ್ತಿಲ್ಲ. ಒಂದೆಡೆ ಚೀನಾದ ವಸ್ತುಗಳನ್ನು ಬ್ಯಾನ್ ಮಾಡುತ್ತೇವೆಂದು ಬಿಜೆಪಿಯವರು ಹೇಳುತ್ತಾರೆ, ಆದರೆ ಇನ್ನೊಂದು ಕಡೆ ಅವರೇ ಅವುಗಳನ್ನು ಆಮದು ಮಾಡಿಕೊಳ್ಳುತ್ತಾರೆ. ಈ ದ್ವಂದ್ವದಿಂದ ಇಲ್ಲಿನ ಗುಡಿ ಕೈಗಾರಿಕೆ ನಂಬಿದ್ದ ಜನರ ಬದುಕು ಮಾತ್ರ ಮೂರಾಬಟ್ಟೆಯಾಗಿದೆ.

ಕಣ್ವ ಜಲಾಶಯ

ತಾಲ್ಲೂಕಿನಲ್ಲಿರುವ ಕಣ್ವ ಜಲಾಶಯ, ಕೆಂಗಲ್ ಕ್ಷೇತ್ರ, ಚಂದ್ರಗಿರಿ ಗುಡ್ಡ, ಶನಿಮಹಾತ್ಮನ ದೇವಸ್ಥಾನ ಸೇರಿ ಹಲವಾರು ಆಕರ್ಷಣೀಯ ಪ್ರವಾಸಿ ತಾಣಗಳಿವೆ. ಆದರೆ ಅವುಗಳನ್ನು ಅಭಿವೃದ್ಧಿ ಮಾಡುವಲ್ಲಿ ಜನಪ್ರತಿನಿಧಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಒಂದಷ್ಟು ರಸ್ತೆಗಳಾಗಿರುವುದು ಬಿಟ್ಟರೆ ಕ್ಷೇತ್ರ ನಿರೀಕ್ಷಿಸಿದ ಮಟ್ಟಕ್ಕೆ ಅಭಿವೃದ್ಧಿಯಾಗಿಲ್ಲ. ಬಹುತೇಕ ರೈತಾಪಿ ವರ್ಗದ ಬದುಕಿನ್ನೂ ಹಸನಾಗಿಲ್ಲ. ಇಷ್ಟೆಲ್ಲ ಸಮಸ್ಯೆ ಹೊತ್ತ ಚನ್ನಪಟ್ಟಣದಲ್ಲಿ ಹೊಸ ರಾಜಕೀಯ ಪ್ರಜ್ಞೆಯನ್ನು ನಿರೀಕ್ಷಿಸಲಾದಿತೇ?


ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಮೀಕ್ಷೆ; ಮಾಗಡಿಯಲ್ಲಿ ಗೆಲ್ಲುವವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...