Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...