Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...