Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...