Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪನವರಿಗೆ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರು ಘೇರಾವ್ ಹಾಕಿದ್ದು,, ಭೂಸ್ವಾಧೀನ ಹಿಂಪಡೆಯುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.

ಸುದೀರ್ಘ 975 ದಿನಗಳಿಂದ ಭೂಸ್ವಾಧೀನವನ್ನು ವಿರೋಧಿಸಿ ಚನ್ನರಾಯಪಟ್ಟಣದ ನಾಡಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಕಟ್ಟೆಯೊಡೆದಿದ್ದು, ಅನ್ನದಾತರನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದರು.

“ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದಲೂ ಕೂಡ ಒಂದಲ್ಲೊಂದು ನೆಪ ಹೇಳುತ್ತಿದೆ. ಆ ಮೂಲಕ ದಿನದೊಡುತ್ತಿರುವ ಸಚಿವರು ರೈತ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಇವರಿಗೆ ರೈತರ ಭೂಮಿಯನ್ನು ಕೈಬಿಡುವ ಯಾವುದೇ ಯೋಚನೆ ಇದ್ದಂತೆ ಕಾಣುತ್ತಿಲ್ಲ. ಇವರು ಕೂಡ ಹಿಂದಿನ ಸರ್ಕಾರಗಳ ರೀತಿಯಲ್ಲೇ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದಾರೆ” ಸ್ಥಳದಲ್ಲಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಸಮಜಾಯಿಷಿ ನೀಡಲು ಮುಂದಾದ ಮಂತ್ರಿಗಳು, “ಬೆಳಗಾವಿ ಅಧಿವೇಶನ ಮುಗಿಯುವುದರೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು. ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಭಟನಾನಿರತರು, “ನೀವು ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹತ್ತಾರು ಗಡುವುಗಳನ್ನು ನೀಡುತ್ತಲೇ ಬಂದಿದ್ದೀರಿ, ಯಾವ ಬಾರಿಯೂ ಕೊಟ್ಟ‌ಮಾತಿನಂತೆ ನಡೆದುಕೊಳ್ಳಲೇ ಇಲ್ಲ. ನಾವು ನಿಮ್ಮ ಮನೆಗೆ ಅಲೆಯುತ್ತಲೇ ಇದ್ದೇವೆ, ಇಷ್ಟಾದರೂ ನಮ್ಮ ಸಮಸ್ಯೆ ಬಗ್ಗೆ ಹರಿಸಿಲ್ಲ. ಆದ್ದರಿಂದ ನೀವು ಇಂದು ನೀಡುತ್ತಿರುವ ಗಡುವಿನಲ್ಲಿ ಸಮಸ್ಯೆ ಬಗೆಹರಿಸುತ್ತೀರೆಂಬ ಯಾವ ಭರವಸೆಯೂ ಇಲ್ಲ” ಎಂದು ಮಂತ್ರಿಗಳಿಗೆ ತಿರುಗೇಟು ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಮಹಿಳೆಯರು

“ರೈತರನ್ನು ಕಡೆಗಣಿಸುವ ಉದ್ದೇಶ ನನಗಿಲ್ಲ. ನಾನೂ ನಿಮ್ಮ‌ವಿಷಯವನ್ನು ಸರ್ಕಾರದ ಮುಂದೆ ಮಾತನಾಡುತ್ತಲೇ ಬಂದಿದ್ದೇನೆ. ಸಮಸ್ಯೆ ಬಗೆಹರಿಸಲು ಸಾದ್ಯವಾಗದಿರುವುದರ ಬಗ್ಗೆ ನನಗೂ ಬೇಸರವಿದೆ. ಇನ್ನು ಮುಂದೆ ನಾವೂ ಕಾಯಿಸಲು ಸಾಧ್ಯವಿಲ್ಲ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ರವರು ಹೊರದೇಶದ ಪ್ರಯಾಣದಲ್ಲಿರುವ ಕಾರಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಸಂದರ್ಭದಲ್ಲಿ ಅವರು ವಾಪಸ್ಸಾಗಲಿದ್ದು, ಅವರೊಂದಿಗೆ ಚರ್ಚಿಸಿ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಅದಕ್ಕೂ ಮುಂಚೆ ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರನ್ನೊಳಗೊಂಡ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಆ ಸಭೆಯ ನಿರ್ಣಯಗಳೊಂದಿಗೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಸಭೆಗೆ ಬನ್ನಿ. ಅಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ” ಎಂದು ತಿಳಿಸಿದರು.

ಸ್ಥಳದಲ್ಲಿಯೇ ಹಾಜರಿದ್ದ ಜಿಲ್ಲಾಧಿಕಾರಿಗಳು, ರೈತನಿಯೋಗ ಮತ್ತು ಕೆಐಎಡಿಬಿ ಅಧಿಕಾರಿಗಳ ಸಭೆಯನ್ನು ಇದೆ ಶನಿವಾರ ಡಿಸೆಂಬರ್ 7ನೇ ತಾರೀಕಿನಂದು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡರು.

“ಇದು ಅಂತಿಮ ಗಡುವು, ಸಚಿವರು ಹೇಳಿದಂತೆ ಅಧಿವೇಶನ ಮುಗಿಯುವುದರೊಳಗಾಗಿ ಸರ್ಕಾರ ಭೂಸ್ವಾಧೀನ ಕೈ ಬಿಡುವ ನಿರ್ಣಯವನ್ನು ಪ್ರಕಟಿಸದಿದ್ದರೆ ಮುಂದಿನ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ, ಮಂತ್ರಿಗಳು ಹಾಜರಾಗುವ ಎಲ್ಲಾ ಕಾರ್ಯಕ್ರಮಗಳಲ್ಲೂ ರೈತರು ಘೇರಾವ್ ಹಾಕೋಣ, ಅನಿರ್ದಿಷ್ಟ ಅವಧಿ ಹೋರಾಟದ ಸಾವಿರ ದಿನಕ್ಕೆ ಕಾಲಿಡುವ ಸಂಧರ್ಭದಲ್ಲಿ ಉಗ್ರ ಹೋರಾಟವನ್ನು ರೂಪಿಸಿ, ಮಂತ್ರಿಗಳಿಗೆ ಸರಿಯಾದ ಪಾಠ ಕಲಿಸೋಣ” ಎಂದು ತೀರ್ಮಾನಿಸಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರದ ಕಾರಳ್ಳಿ ಶ್ರೀನಿವಾಸ್, ವಕೀಲರಾದ ಸಿದ್ದಾರ್ಥ್, ರೈತ ಮುಖಂಡರಾದ ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತಪ್ಪ, ಮಾರೇಗೌಡ, ಜಯರಾಮೇಗೌಡ, ಮೋಹನ್, ವೆಂಕಟರಮಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಪ್ರಮೋದ್, ಮುಕುಂದ, ನಂದನ್, ಗೋಪಿನಾಥ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಇದನ್ನೂ ಓದಿ; ಬಿಡಿಎ ಪ್ರಕರಣ: ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್ ಮರುಪರಿಶೀಲಿಸುವಂತೆ ಗೌರ್ನರ್‌ಗೆ ರಾಜ್ಯ ಸರ್ಕಾರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...