HomeUncategorizedಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

- Advertisement -
- Advertisement -

ಅಕ್ಟೋಬರ್ ಅಂತ್ಯದೊಳಗೆ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗಕ್ಕೆ ಸೋಮವಾರ ಭರವಸೆ ನೀಡಿದ್ದಾರೆ. ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕಾ ಸಚಿವರು ಸಭೆ ನಡೆಸಿ ರೈತರ ಸಮಸ್ಯೆಯನ್ನು ಬಗೆಹರಿಸುವ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಹೇಳಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸೇರಿದ್ದ ಸಭೆಯಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, “ಚನ್ನರಾಯಪಟ್ಟಣ ಹೋಬಳಿಯಲ್ಲಿ 4 ಬಾರಿ ಭೂಸ್ವಾಧೀನ ಮಾಡಿಕೊಂಡಿದ್ದು ರೈತರು ಈಗಾಗಲೇ ಬಹುಪಾಲು ಭೂಮಿ ಕಳೆದುಕೊಂಡಿದ್ದಾರೆ. ಉಳಿದಿರುವುದು ಅಲ್ಪಸ್ವಲ್ಪ ಭೂಮಿ ಮಾತ್ರ. ಈ ಭೂಮಿಯನ್ನು ಸ್ವಾದೀನ ಪ್ರಕ್ರಿಯೆಯಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದಲ್ಲಿ ಇದ್ದಾಗ ಧರಣಿ ಸ್ಥಳಕ್ಕೆ ಬಂದು ರೈತರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದೀರಿ” ಎಂದು ನೆನಪು ಮಾಡಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರಿಗೆ ಜಾಮೀನು; ದರ್ಶನ್ ಅರ್ಜಿ ಸೆ.27ಕ್ಕೆ ಮುಂದೂಡಿಕೆ

ಕರ್ನಾಟಕ ರಾಜ್ಯ ರೈತಸಂಘದ ಬಡಗಲಪುರ ನಾಗೇಂದ್ರ, ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ಮಾರೇಗೌಡ ಕೂಡ ದ್ವನಿಗೂಡಿಸಿ, ಅದೇ ಭೂಮಿಯಲ್ಲಿ ಬೆಂಗಳೂರಿಗೆ ಬೇಕಾದ ಹಣ್ಣು ತರಕಾರಿ, ಹೂವು ಎಲ್ಲವನ್ನೂ ಬೆಳೆಯುತ್ತಿದ್ದೇವೆ. ರೈತರ ವಾಸದ ಮನೆಗಳು, ಕೋಳಿಪಾರಂ ಸೇರಿದಂತೆ ಸುಮಾರು ಆರ್ಥಿಕ ಚಟುವಟಿಕೆಗಳು ಕೂಡ ಇದೇ ಭೂಮಿಯಲ್ಲಿ ನಡೆಯುತ್ತಿವೆ. ಆದ್ದರಿಂದ ಭೂಮಿಯನ್ನು ಸ್ವಾಧೀನದಿಂದ ಕೈಬಿಟ್ಟು ರೈತರನ್ನು ರಕ್ಷಿಸಬೇಕು ಎಂದು ಹೇಳಿದರು.

ಹೋರಾಟಗಾರರ ಮಾತು ಕೇಳಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹೌದು ನಾನು ಅಧಿಕಾರಕ್ಕೆ ಬಂದಾಗ ರೈತರ ಪರವಾರ ನಿರ್ಧಾರ ಮಾಡೋಣ ಎಂದು ಹೇಳಿದ್ದೇನೆ. ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲು ಬೇಕಾದ ತಯಾರಿ ಇಲ್ಲವಾದ್ದರಿಂದ, ಈ ಕುರಿತು ಮಾಹಿತಿ ತರೆಸಿಕೊಂಡು ಪರಿಶೀಲಿಸಿ ಅಕ್ಟೋಬರ್‌ ತಿಂಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರೋಣ ಎಂದು ತಿಳಿಸಿದ್ದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಈ ವೇಳೆ ಮುಂದಿನ ದಿನಾಂಕವನ್ನು ಇಂದೇ ನಿಗದಿಪಡಿಸಿ ಎಂದು ರೈತರು ಪಟ್ಟು ಹಿಡಿದಾಗ, ದಸರಾ ಹಬ್ಬದ ನಂತರ ತಿಂಗಳ ಕೊನೆಯೊಳಗೆ ಒಂದು ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಭೆಯಲ್ಲಿ, ಕರ್ನಾಟಕ ಪ್ರಾಂತ್ಯ ರೈತಸಂಘದ ಪ್ರಭಾ ಬೆಳವಂಗಲ, ಚಂದ್ರ ತೇಜಸ್ವಿ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಂಜಪ್ಪ, ಅಶ್ವತ್ಥಪ್ಪ, ರಾಮಚಂದ್ರಪ್ಪ, ಗೋಪಿನಾಥ್ ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದರು.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...