Homeಕರ್ನಾಟಕಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ 'ಡಿನೋಟಿಫಿಕೇಶನ್'ಗೆ ಒತ್ತಡ ಹೇರಿದ ಹೋರಾಟಗಾರರು

ಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ ‘ಡಿನೋಟಿಫಿಕೇಶನ್’ಗೆ ಒತ್ತಡ ಹೇರಿದ ಹೋರಾಟಗಾರರು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಘೋಷಿಸಿ ಮೂರು ತಿಂಗಳುಗಳು ಕಳೆದರೂ, ಸರ್ಕಾರವು ಇಲ್ಲಿಯವರೆಗೆ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಹೊರಡಿಸದಿರುವುದು ಭೂಸ್ವಾಧೀನ ವಿರೋಧಿ ರೈತರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಸರ್ಕಾರದ ಈ ವಿಳಂಬ ನೀತಿಯಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಇದರ ಭಾಗವಾಗಿ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದರು.

ಜುಲೈ 15ರಂದು ಮುಖ್ಯಮಂತ್ರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಮೌಖಿಕವಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಆದರೆ, ಈವರೆಗೂ ಮುಖ್ಯಮಂತ್ರಿಗಳ ಮಾತಿಗೆ ಅಧಿಕೃತ ಮುದ್ರೆ ದೊರೆತಿಲ್ಲ. ಈ ನಡುವೆ, ಸರ್ಕಾರದ ಘೋಷಣೆಗೆ ವಿರುದ್ಧವಾಗಿ ಎರಡು ಹಳ್ಳಿಗಳ ಜಮೀನುಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದು, ರೈತರ ಆತಂಕವನ್ನು ಇನ್ನಷ್ಟು ಹೆಚ್ಚಿಸಿವೆ.

ಈ ಹಿನ್ನೆಲೆಯಲ್ಲಿ, ಸರ್ಕಾರದ ಘೋಷಣೆಯಂತೆ ಸಂಪೂರ್ಣ ಭೂಸ್ವಾಧೀನವನ್ನು ಕೈಬಿಡುವ ಅಧಿಕೃತ ಆದೇಶವನ್ನು ತಕ್ಷಣ ಹೊರಡಿಸಬೇಕು ಎಂದು ಒತ್ತಾಯಿಸಲು ರೈತರ ನಿಯೋಗವು ಶುಕ್ರವಾರ (ಅ.17) ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿತು. ಇದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನೂ ನಿಯೋಗವು ಭೇಟಿಯಾಗಿ, ಮುಖ್ಯಮಂತ್ರಿಗಳ ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದ ಅವರೂ ಕೂಡ ರೈತರ ಸಮಸ್ಯೆ ಬಗೆಹರಿಸಲು ತಕ್ಷಣ ಡಿನೋಟಿಫಿಕೇಶನ್ ಆದೇಶ ಹೊರಡಿಸಲು ಕ್ರಮವಹಿಸುವಂತೆ ಒತ್ತಾಯಿಸಿತು.

‘ದೀಪಾವಳಿ ನಂತರ ಆದೇಶ..’; ಸಚಿವ ಪಾಟೀಲ್ ಭರವಸೆ

ರೈತರ ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲರು, “ಈ ಕುರಿತು ಈಗಾಗಲೇ ಸರ್ಕಾರದಲ್ಲಿ ಚರ್ಚೆಯಾಗಿದೆ. ದೀಪಾವಳಿ ಹಬ್ಬ ಮುಗಿದ ನಂತರ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಆದೇಶ ಹೊರಡಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಆದರೆ, ಅಧಿಕೃತ ಆದೇಶ ಹೊರಬೀಳುವವರೆಗೆ ತಮ್ಮ ಆತಂಕ ನಿವಾರಣೆಯಾಗುವುದು ಕಷ್ಟ ಎಂದು ಸಚಿವರಿಗೆ ತಿಳಿಸಿರುವ ರೈತರು, ಸಮಿತಿಯಲ್ಲಿ ಚರ್ಚಿಸಿ ತಮ್ಮ ಮುಂದಿನ ಹೋರಾಟದ ನಿರ್ಧಾರಕ್ಕೆ ಬರುವುದಾಗಿ ಹೇಳಿದ್ದಾರೆ.

ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ; ಒಳಮೀಸಲಾತಿ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಲೆಮಾರಿ ಸಮುದಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...