Homeಕರ್ನಾಟಕಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ 'ಡಿನೋಟಿಫಿಕೇಶನ್'ಗೆ ಒತ್ತಡ ಹೇರಿದ ಹೋರಾಟಗಾರರು

ಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ ‘ಡಿನೋಟಿಫಿಕೇಶನ್’ಗೆ ಒತ್ತಡ ಹೇರಿದ ಹೋರಾಟಗಾರರು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಘೋಷಿಸಿ ಮೂರು ತಿಂಗಳುಗಳು ಕಳೆದರೂ, ಸರ್ಕಾರವು ಇಲ್ಲಿಯವರೆಗೆ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಹೊರಡಿಸದಿರುವುದು ಭೂಸ್ವಾಧೀನ ವಿರೋಧಿ ರೈತರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಸರ್ಕಾರದ ಈ ವಿಳಂಬ ನೀತಿಯಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಇದರ ಭಾಗವಾಗಿ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದರು.

ಜುಲೈ 15ರಂದು ಮುಖ್ಯಮಂತ್ರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಮೌಖಿಕವಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಆದರೆ, ಈವರೆಗೂ ಮುಖ್ಯಮಂತ್ರಿಗಳ ಮಾತಿಗೆ ಅಧಿಕೃತ ಮುದ್ರೆ ದೊರೆತಿಲ್ಲ. ಈ ನಡುವೆ, ಸರ್ಕಾರದ ಘೋಷಣೆಗೆ ವಿರುದ್ಧವಾಗಿ ಎರಡು ಹಳ್ಳಿಗಳ ಜಮೀನುಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದು, ರೈತರ ಆತಂಕವನ್ನು ಇನ್ನಷ್ಟು ಹೆಚ್ಚಿಸಿವೆ.

ಈ ಹಿನ್ನೆಲೆಯಲ್ಲಿ, ಸರ್ಕಾರದ ಘೋಷಣೆಯಂತೆ ಸಂಪೂರ್ಣ ಭೂಸ್ವಾಧೀನವನ್ನು ಕೈಬಿಡುವ ಅಧಿಕೃತ ಆದೇಶವನ್ನು ತಕ್ಷಣ ಹೊರಡಿಸಬೇಕು ಎಂದು ಒತ್ತಾಯಿಸಲು ರೈತರ ನಿಯೋಗವು ಶುಕ್ರವಾರ (ಅ.17) ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿತು. ಇದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನೂ ನಿಯೋಗವು ಭೇಟಿಯಾಗಿ, ಮುಖ್ಯಮಂತ್ರಿಗಳ ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದ ಅವರೂ ಕೂಡ ರೈತರ ಸಮಸ್ಯೆ ಬಗೆಹರಿಸಲು ತಕ್ಷಣ ಡಿನೋಟಿಫಿಕೇಶನ್ ಆದೇಶ ಹೊರಡಿಸಲು ಕ್ರಮವಹಿಸುವಂತೆ ಒತ್ತಾಯಿಸಿತು.

‘ದೀಪಾವಳಿ ನಂತರ ಆದೇಶ..’; ಸಚಿವ ಪಾಟೀಲ್ ಭರವಸೆ

ರೈತರ ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲರು, “ಈ ಕುರಿತು ಈಗಾಗಲೇ ಸರ್ಕಾರದಲ್ಲಿ ಚರ್ಚೆಯಾಗಿದೆ. ದೀಪಾವಳಿ ಹಬ್ಬ ಮುಗಿದ ನಂತರ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಆದೇಶ ಹೊರಡಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಆದರೆ, ಅಧಿಕೃತ ಆದೇಶ ಹೊರಬೀಳುವವರೆಗೆ ತಮ್ಮ ಆತಂಕ ನಿವಾರಣೆಯಾಗುವುದು ಕಷ್ಟ ಎಂದು ಸಚಿವರಿಗೆ ತಿಳಿಸಿರುವ ರೈತರು, ಸಮಿತಿಯಲ್ಲಿ ಚರ್ಚಿಸಿ ತಮ್ಮ ಮುಂದಿನ ಹೋರಾಟದ ನಿರ್ಧಾರಕ್ಕೆ ಬರುವುದಾಗಿ ಹೇಳಿದ್ದಾರೆ.

ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ; ಒಳಮೀಸಲಾತಿ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಲೆಮಾರಿ ಸಮುದಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...