Homeಕರ್ನಾಟಕಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ 'ಡಿನೋಟಿಫಿಕೇಶನ್'ಗೆ ಒತ್ತಡ ಹೇರಿದ ಹೋರಾಟಗಾರರು

ಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ ‘ಡಿನೋಟಿಫಿಕೇಶನ್’ಗೆ ಒತ್ತಡ ಹೇರಿದ ಹೋರಾಟಗಾರರು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಘೋಷಿಸಿ ಮೂರು ತಿಂಗಳುಗಳು ಕಳೆದರೂ, ಸರ್ಕಾರವು ಇಲ್ಲಿಯವರೆಗೆ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಹೊರಡಿಸದಿರುವುದು ಭೂಸ್ವಾಧೀನ ವಿರೋಧಿ ರೈತರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಸರ್ಕಾರದ ಈ ವಿಳಂಬ ನೀತಿಯಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಇದರ ಭಾಗವಾಗಿ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದರು.

ಜುಲೈ 15ರಂದು ಮುಖ್ಯಮಂತ್ರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಮೌಖಿಕವಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಆದರೆ, ಈವರೆಗೂ ಮುಖ್ಯಮಂತ್ರಿಗಳ ಮಾತಿಗೆ ಅಧಿಕೃತ ಮುದ್ರೆ ದೊರೆತಿಲ್ಲ. ಈ ನಡುವೆ, ಸರ್ಕಾರದ ಘೋಷಣೆಗೆ ವಿರುದ್ಧವಾಗಿ ಎರಡು ಹಳ್ಳಿಗಳ ಜಮೀನುಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದು, ರೈತರ ಆತಂಕವನ್ನು ಇನ್ನಷ್ಟು ಹೆಚ್ಚಿಸಿವೆ.

ಈ ಹಿನ್ನೆಲೆಯಲ್ಲಿ, ಸರ್ಕಾರದ ಘೋಷಣೆಯಂತೆ ಸಂಪೂರ್ಣ ಭೂಸ್ವಾಧೀನವನ್ನು ಕೈಬಿಡುವ ಅಧಿಕೃತ ಆದೇಶವನ್ನು ತಕ್ಷಣ ಹೊರಡಿಸಬೇಕು ಎಂದು ಒತ್ತಾಯಿಸಲು ರೈತರ ನಿಯೋಗವು ಶುಕ್ರವಾರ (ಅ.17) ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿತು. ಇದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನೂ ನಿಯೋಗವು ಭೇಟಿಯಾಗಿ, ಮುಖ್ಯಮಂತ್ರಿಗಳ ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದ ಅವರೂ ಕೂಡ ರೈತರ ಸಮಸ್ಯೆ ಬಗೆಹರಿಸಲು ತಕ್ಷಣ ಡಿನೋಟಿಫಿಕೇಶನ್ ಆದೇಶ ಹೊರಡಿಸಲು ಕ್ರಮವಹಿಸುವಂತೆ ಒತ್ತಾಯಿಸಿತು.

‘ದೀಪಾವಳಿ ನಂತರ ಆದೇಶ..’; ಸಚಿವ ಪಾಟೀಲ್ ಭರವಸೆ

ರೈತರ ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲರು, “ಈ ಕುರಿತು ಈಗಾಗಲೇ ಸರ್ಕಾರದಲ್ಲಿ ಚರ್ಚೆಯಾಗಿದೆ. ದೀಪಾವಳಿ ಹಬ್ಬ ಮುಗಿದ ನಂತರ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಆದೇಶ ಹೊರಡಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಆದರೆ, ಅಧಿಕೃತ ಆದೇಶ ಹೊರಬೀಳುವವರೆಗೆ ತಮ್ಮ ಆತಂಕ ನಿವಾರಣೆಯಾಗುವುದು ಕಷ್ಟ ಎಂದು ಸಚಿವರಿಗೆ ತಿಳಿಸಿರುವ ರೈತರು, ಸಮಿತಿಯಲ್ಲಿ ಚರ್ಚಿಸಿ ತಮ್ಮ ಮುಂದಿನ ಹೋರಾಟದ ನಿರ್ಧಾರಕ್ಕೆ ಬರುವುದಾಗಿ ಹೇಳಿದ್ದಾರೆ.

ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ; ಒಳಮೀಸಲಾತಿ ಅನ್ಯಾಯ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಲೆಮಾರಿ ಸಮುದಾಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...