Homeಕರ್ನಾಟಕಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು‌ ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು ಹೆದರಿಕೊಂಡಿದ್ದಾರೆ. ಸಾಲದ್ದಕ್ಕೆ ಭೇಟಿಗೆ ಹೊರಟ ರೈತರನ್ನು ಕಂಡ ಕಂಡಲ್ಲಿ ಪೋಲೀಸ್ ದಿಗ್ಬಂದನ ಹಾಕಿಸಿ ತಡೆಯುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ಮಾತಾನಾಡಿದರು.

ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ ನಡೆಯುತ್ತಿರುವ ಭೂ ಸ್ವಾದೀನವನ್ನು ವಿರೋಧಿಸಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕೆಐಎಡಿಬಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದರ ಕುರಿತಾಗಿ ಮಾತನಾಡಿ, ಈ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಲು ಕಳೆದ ಸೋಮವಾರ ರೈತರು ದೇವನಹಳ್ಳಿ ಶಾಸಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರನ್ನು 10ನೇ ತಾರೀಕು ಗುರುವಾರದಂದು ಬಂದು ಭೇಟಿ ಮಾಡುವಂತೆ ಮಾತುಕತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರನ್ನು ಉದ್ದೇಶಿಸಿ, ನಾನು ರೈತರ ಪರವಾಗಿ ನಿಂತು ಭೂಸ್ವಾಧೀನ ಪ್ರಕ್ರಿಯೆಯನ್ನು ತಡೆಹಿಡುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಅವರ ಮಾತಿನಂತೆ ನಾವು ಇಂದು ಮಂತ್ರಿಗಳನ್ನು ಭೇಟಿ ಮಾಡಲು ಹೊರಟರೆ ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ವಿಷ ಸೇವಿಸಲು ಮುಂದಾದ ರೈತ

ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ಬೀದಿಯಲ್ಲಿ ಕುಳಿತಿದ್ದರು ಸರ್ಕಾರಗಳು ನಮ್ಮನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶಬರಿತವಾಗಿ ಮಾತನಾಡುತ್ತಿದ್ದ ರೈತರ ಗುಂಪು ಊಟದಲ್ಲಿ ವಿಷ ಬೆರೆಸಿ ತಿನ್ನಲು ಮುಂದಾಗಿತ್ತು. ಆದರೆ, ಅಲ್ಲಿನ ರೈತರು ನಿಂದವರನ್ನು ತಡೆದು ಸಮಾಧಾನಪಡಿಸಿದರು. ಈ ಮಧ್ಯೆ ನೂಕುನುಗ್ಗಲು ಉಂಟಾಗಿ ವಿಷ ಸೇವನೆಗೆ ಮುಂದಾಗಿದ್ದ ರೈತ ವೆಂಕಟೇಶ್ ರವರು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ರೈತರು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

‘ಪ್ರಾಣ ಬಿಟ್ಟರೂ ಸರಿ ಭೂಮಿ ಬಿಡುವುದಿಲ್ಲ’ ಎಂದು ಹಠ ಹಿಡಿದು ಕುಳಿತಿರುವ ರೈತರು, ನಾವು ಮಂತ್ರಿಗಳು ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೆ ವಿಶ್ವಾಸವನ್ನು ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ನಮ್ಮ ಸಮಸ್ಯೆಯನ್ನು ಬಗೆಹರಿಸುವವರಿಗೆ ನಾವು ವಾಪಸ್ಸು ಹೋಗುವುದಿಲ್ಲ ಎಂದು ಹೇಳುವ ಮೂಲಕ ರಸ್ತೆ ತಡೆಗೆ ಮುಂದಾಗಿದ್ದಾರೆ.

ಪೊಲೀಸ್ ಇಲಾಖೆ ಮಂತ್ರಿಗಳನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದೆಯಾದರೂ ಸಂಜೆಯವರೆಗೂ ಮುಖ್ಯಮಂತ್ರಿಗಳ ಭೇಟಿಯ ಕುರಿತಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ, ತಕ್ಷಣ ಭೂಸ್ವಾಧೀನಕ್ಕೆ ಉದ್ದೇಶಿಸಿ ನಡೆಸುತ್ತಿರುವ ಎಲ್ಲ ಪ್ರಕ್ರಿಯೆಗಳು ನಿಲ್ಲಿಸಬೇಕು ಮತ್ತು ಮುಖ್ಯಮಂತ್ರಿಗಳ ಭೇಟಿಗೆ ದಿನ ನಿಗದಿ ಮಾಡಲೇಬೇಕೆಂದು ಒತ್ತಾಯಿಸಿ ರೈತರು ರಸ್ತೆಯಲ್ಲಿ ಅಹೋರಾತ್ರಿ ಧರಣಿಗೆ  ಮುಂದಾಗಿದ್ದಾರೆ.

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರೈತರಾದ ಜಯರಾಮೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಪ್ರಮೋದ್, ಮೋಹನ್, ಮಾರೇಗೌಡ, ಗೋಪಿನಾತ್, ಬೈರೇಗೌಡ, ನಂದನ್, ಮುಕುಂದ, ಅಶ್ವತ್ಥಪ್ಪ, ವೆಂಕಟರಮಣಪ್ಪ, ಸುಶೀಲಮ್ಮ, ನಾರಾಯಣಮ್ಮ, ವೆಂಕಟೇಶ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...