Homeಕರ್ನಾಟಕಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು‌ ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು ಹೆದರಿಕೊಂಡಿದ್ದಾರೆ. ಸಾಲದ್ದಕ್ಕೆ ಭೇಟಿಗೆ ಹೊರಟ ರೈತರನ್ನು ಕಂಡ ಕಂಡಲ್ಲಿ ಪೋಲೀಸ್ ದಿಗ್ಬಂದನ ಹಾಕಿಸಿ ತಡೆಯುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ಮಾತಾನಾಡಿದರು.

ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ ನಡೆಯುತ್ತಿರುವ ಭೂ ಸ್ವಾದೀನವನ್ನು ವಿರೋಧಿಸಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕೆಐಎಡಿಬಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದರ ಕುರಿತಾಗಿ ಮಾತನಾಡಿ, ಈ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಲು ಕಳೆದ ಸೋಮವಾರ ರೈತರು ದೇವನಹಳ್ಳಿ ಶಾಸಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರನ್ನು 10ನೇ ತಾರೀಕು ಗುರುವಾರದಂದು ಬಂದು ಭೇಟಿ ಮಾಡುವಂತೆ ಮಾತುಕತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರನ್ನು ಉದ್ದೇಶಿಸಿ, ನಾನು ರೈತರ ಪರವಾಗಿ ನಿಂತು ಭೂಸ್ವಾಧೀನ ಪ್ರಕ್ರಿಯೆಯನ್ನು ತಡೆಹಿಡುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಅವರ ಮಾತಿನಂತೆ ನಾವು ಇಂದು ಮಂತ್ರಿಗಳನ್ನು ಭೇಟಿ ಮಾಡಲು ಹೊರಟರೆ ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ವಿಷ ಸೇವಿಸಲು ಮುಂದಾದ ರೈತ

ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ಬೀದಿಯಲ್ಲಿ ಕುಳಿತಿದ್ದರು ಸರ್ಕಾರಗಳು ನಮ್ಮನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶಬರಿತವಾಗಿ ಮಾತನಾಡುತ್ತಿದ್ದ ರೈತರ ಗುಂಪು ಊಟದಲ್ಲಿ ವಿಷ ಬೆರೆಸಿ ತಿನ್ನಲು ಮುಂದಾಗಿತ್ತು. ಆದರೆ, ಅಲ್ಲಿನ ರೈತರು ನಿಂದವರನ್ನು ತಡೆದು ಸಮಾಧಾನಪಡಿಸಿದರು. ಈ ಮಧ್ಯೆ ನೂಕುನುಗ್ಗಲು ಉಂಟಾಗಿ ವಿಷ ಸೇವನೆಗೆ ಮುಂದಾಗಿದ್ದ ರೈತ ವೆಂಕಟೇಶ್ ರವರು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ರೈತರು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

‘ಪ್ರಾಣ ಬಿಟ್ಟರೂ ಸರಿ ಭೂಮಿ ಬಿಡುವುದಿಲ್ಲ’ ಎಂದು ಹಠ ಹಿಡಿದು ಕುಳಿತಿರುವ ರೈತರು, ನಾವು ಮಂತ್ರಿಗಳು ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೆ ವಿಶ್ವಾಸವನ್ನು ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ನಮ್ಮ ಸಮಸ್ಯೆಯನ್ನು ಬಗೆಹರಿಸುವವರಿಗೆ ನಾವು ವಾಪಸ್ಸು ಹೋಗುವುದಿಲ್ಲ ಎಂದು ಹೇಳುವ ಮೂಲಕ ರಸ್ತೆ ತಡೆಗೆ ಮುಂದಾಗಿದ್ದಾರೆ.

ಪೊಲೀಸ್ ಇಲಾಖೆ ಮಂತ್ರಿಗಳನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದೆಯಾದರೂ ಸಂಜೆಯವರೆಗೂ ಮುಖ್ಯಮಂತ್ರಿಗಳ ಭೇಟಿಯ ಕುರಿತಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ, ತಕ್ಷಣ ಭೂಸ್ವಾಧೀನಕ್ಕೆ ಉದ್ದೇಶಿಸಿ ನಡೆಸುತ್ತಿರುವ ಎಲ್ಲ ಪ್ರಕ್ರಿಯೆಗಳು ನಿಲ್ಲಿಸಬೇಕು ಮತ್ತು ಮುಖ್ಯಮಂತ್ರಿಗಳ ಭೇಟಿಗೆ ದಿನ ನಿಗದಿ ಮಾಡಲೇಬೇಕೆಂದು ಒತ್ತಾಯಿಸಿ ರೈತರು ರಸ್ತೆಯಲ್ಲಿ ಅಹೋರಾತ್ರಿ ಧರಣಿಗೆ  ಮುಂದಾಗಿದ್ದಾರೆ.

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರೈತರಾದ ಜಯರಾಮೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಪ್ರಮೋದ್, ಮೋಹನ್, ಮಾರೇಗೌಡ, ಗೋಪಿನಾತ್, ಬೈರೇಗೌಡ, ನಂದನ್, ಮುಕುಂದ, ಅಶ್ವತ್ಥಪ್ಪ, ವೆಂಕಟರಮಣಪ್ಪ, ಸುಶೀಲಮ್ಮ, ನಾರಾಯಣಮ್ಮ, ವೆಂಕಟೇಶ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...