Homeಕರ್ನಾಟಕಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು‌ ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು ಹೆದರಿಕೊಂಡಿದ್ದಾರೆ. ಸಾಲದ್ದಕ್ಕೆ ಭೇಟಿಗೆ ಹೊರಟ ರೈತರನ್ನು ಕಂಡ ಕಂಡಲ್ಲಿ ಪೋಲೀಸ್ ದಿಗ್ಬಂದನ ಹಾಕಿಸಿ ತಡೆಯುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ಮಾತಾನಾಡಿದರು.

ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ ನಡೆಯುತ್ತಿರುವ ಭೂ ಸ್ವಾದೀನವನ್ನು ವಿರೋಧಿಸಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕೆಐಎಡಿಬಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದರ ಕುರಿತಾಗಿ ಮಾತನಾಡಿ, ಈ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಲು ಕಳೆದ ಸೋಮವಾರ ರೈತರು ದೇವನಹಳ್ಳಿ ಶಾಸಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರನ್ನು 10ನೇ ತಾರೀಕು ಗುರುವಾರದಂದು ಬಂದು ಭೇಟಿ ಮಾಡುವಂತೆ ಮಾತುಕತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರನ್ನು ಉದ್ದೇಶಿಸಿ, ನಾನು ರೈತರ ಪರವಾಗಿ ನಿಂತು ಭೂಸ್ವಾಧೀನ ಪ್ರಕ್ರಿಯೆಯನ್ನು ತಡೆಹಿಡುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಅವರ ಮಾತಿನಂತೆ ನಾವು ಇಂದು ಮಂತ್ರಿಗಳನ್ನು ಭೇಟಿ ಮಾಡಲು ಹೊರಟರೆ ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ವಿಷ ಸೇವಿಸಲು ಮುಂದಾದ ರೈತ

ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ಬೀದಿಯಲ್ಲಿ ಕುಳಿತಿದ್ದರು ಸರ್ಕಾರಗಳು ನಮ್ಮನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶಬರಿತವಾಗಿ ಮಾತನಾಡುತ್ತಿದ್ದ ರೈತರ ಗುಂಪು ಊಟದಲ್ಲಿ ವಿಷ ಬೆರೆಸಿ ತಿನ್ನಲು ಮುಂದಾಗಿತ್ತು. ಆದರೆ, ಅಲ್ಲಿನ ರೈತರು ನಿಂದವರನ್ನು ತಡೆದು ಸಮಾಧಾನಪಡಿಸಿದರು. ಈ ಮಧ್ಯೆ ನೂಕುನುಗ್ಗಲು ಉಂಟಾಗಿ ವಿಷ ಸೇವನೆಗೆ ಮುಂದಾಗಿದ್ದ ರೈತ ವೆಂಕಟೇಶ್ ರವರು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ರೈತರು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

‘ಪ್ರಾಣ ಬಿಟ್ಟರೂ ಸರಿ ಭೂಮಿ ಬಿಡುವುದಿಲ್ಲ’ ಎಂದು ಹಠ ಹಿಡಿದು ಕುಳಿತಿರುವ ರೈತರು, ನಾವು ಮಂತ್ರಿಗಳು ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೆ ವಿಶ್ವಾಸವನ್ನು ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ನಮ್ಮ ಸಮಸ್ಯೆಯನ್ನು ಬಗೆಹರಿಸುವವರಿಗೆ ನಾವು ವಾಪಸ್ಸು ಹೋಗುವುದಿಲ್ಲ ಎಂದು ಹೇಳುವ ಮೂಲಕ ರಸ್ತೆ ತಡೆಗೆ ಮುಂದಾಗಿದ್ದಾರೆ.

ಪೊಲೀಸ್ ಇಲಾಖೆ ಮಂತ್ರಿಗಳನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದೆಯಾದರೂ ಸಂಜೆಯವರೆಗೂ ಮುಖ್ಯಮಂತ್ರಿಗಳ ಭೇಟಿಯ ಕುರಿತಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ, ತಕ್ಷಣ ಭೂಸ್ವಾಧೀನಕ್ಕೆ ಉದ್ದೇಶಿಸಿ ನಡೆಸುತ್ತಿರುವ ಎಲ್ಲ ಪ್ರಕ್ರಿಯೆಗಳು ನಿಲ್ಲಿಸಬೇಕು ಮತ್ತು ಮುಖ್ಯಮಂತ್ರಿಗಳ ಭೇಟಿಗೆ ದಿನ ನಿಗದಿ ಮಾಡಲೇಬೇಕೆಂದು ಒತ್ತಾಯಿಸಿ ರೈತರು ರಸ್ತೆಯಲ್ಲಿ ಅಹೋರಾತ್ರಿ ಧರಣಿಗೆ  ಮುಂದಾಗಿದ್ದಾರೆ.

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರೈತರಾದ ಜಯರಾಮೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಪ್ರಮೋದ್, ಮೋಹನ್, ಮಾರೇಗೌಡ, ಗೋಪಿನಾತ್, ಬೈರೇಗೌಡ, ನಂದನ್, ಮುಕುಂದ, ಅಶ್ವತ್ಥಪ್ಪ, ವೆಂಕಟರಮಣಪ್ಪ, ಸುಶೀಲಮ್ಮ, ನಾರಾಯಣಮ್ಮ, ವೆಂಕಟೇಶ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...