Homeಕರ್ನಾಟಕಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: 'ಸಂಯುಕ್ತ ಹೋರಾಟ ಕರ್ನಾಟಕ' ಘೋಷಣೆ

ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ

ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ

- Advertisement -
- Advertisement -

ಬುಧವಾರ ದೇವನಹಳ್ಳಿಯಲ್ಲಿ ನಡೆದ ಚನ್ನರಾಯಪಟ್ಟಣ ರೈತರ ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯದ ಹಿಂದೆ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ ಎಂದು ‘ಸಂಯುಕ್ತ ಹೋರಾಟ – ಕರ್ನಾಟಕ’ ಆರೋಪಿಸಿದ್ದು, ರೈತರ ಭೂಮಿ ವಾಪಾಸು ಆಗುವವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಪ್ರಾರಂಭಿಸುವುದಾಗಿ ಹೇಳಿದೆ. ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಸಂಯುಕ್ತ ಹೋರಾಟ – ಕರ್ನಾಟಕ’ ಈ ತೀರ್ಮಾನ ತಿಳಿಸಿದೆ. ಚನ್ನರಾಯಪಟ್ಟಣ ರೈತರಿಗಾಗಿ

ದೇವನಹಳ್ಳಿ ಚಲೋ ಹೋರಾಟದಲ್ಲಿ ನಡೆದ ಬೆಳವಣಿಗೆ ಮತ್ತು ರೈತ ಹೋರಾಟದ ಮುಂದಿನ ನಡೆಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ‘ಸಂಯುಕ್ತ ಹೋರಾಟ – ಕರ್ನಾಟಕ’ದ ಮುಖಂಡ, ರೈತ ನಾಯಕ ಬಡಗಲಪುರ ನಾಗೇಂದ್ರ, “ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡರು. ಹೋರಾಟಗಾರರ ಬಂಧನದ ವೇಳೆ ಮಹಿಳೆ, ಮಕ್ಕಳು ಮತ್ತು ವೃದ್ಧರ ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರನ್ನು ಅಮಾನುತುಗೊಳಿಸಿ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಹೋರಾಟವನ್ನು ಹತ್ತಿಕ್ಕಲು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳು ಇಂತಹ ಪ್ರಯತ್ನಗಳು ಮಾಡುತ್ತಲೇ ಬಂದಿದೆ. ಆದರೆ ಹೋರಾಟಗಾರರನ್ನು ಈ ರೀತಿ ಅನಾನುಷವಾಗಿ ಪೊಲೀಸರು ಎಲ್ಲೂ ನಡೆಸಿಕೊಂಡಿಲ್ಲ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಜನರ ಮೂಲಭೂತ ಹಕ್ಕಾಗದ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ತಪ್ಪನ್ನು ಹೈಕೋರ್ಟ್‌ ಕೂಡಾ ಮಾಡಿದೆ ಎಂದು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಆಕ್ಷೇಪ ಮಾಡಿದರು.

“ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಅವರು ಹೋರಾಟಗಾರರ ಪರವಾಗಿ ನಿಂತು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಸರ್ಕಾರ ಬಂದ ನಂತರ ಅವರ ಸರ್ಕಾರವೆ ರೈತರ ಭೂಮಿಯನ್ನು ಕಿತ್ತುಕೊಳ್ಳುವ ಅಂತಿಮ ಅಧಿಸೂಚನೆ ಹೊರಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇವನಹಳ್ಳಿಯ ಹೊರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್‌ ಬಲವನ್ನು ಬಳಸಿ ರಾಕ್ಷಸ ರೂಪದಲ್ಲಿ ವರ್ತಿಸಿತು. ಇಷ್ಟು ದೊಡ್ಡ ಪ್ರತಿಭಟನೆ ನಡೆದರೂ ಸರ್ಕಾರ ಯಾವುದೇ ಹೇಳಿಕೆ ನೀಡಿರಲಿಲ್ಲ. ನಮ್ಮನ್ನು ಬಂಧಿಸಿದ ನಂತರ ಕರೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರು ಒಂದು ವಾರ ಸಮಯ ಕೇಳಿದ್ದರು. ಹಾಗಾಗಿಯೆ ಬಂಧನಕ್ಕೆ ಒಳಗಾಗಿದ್ದ ನಾವು ಬಿಡುಗಡೆ ಹೊಂದಿದ್ದೇವೆ” ಎಂದು ಹೇಳಿದರು.

“ಅದಾಗ್ಯೂ, ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ನಾವು ಕೈಬಿಡೊಲ್ಲ. ನಾಳೆಯಿಂದ ಸಂಯುಕ್ತ ಹೋರಾಟ ಕರ್ನಾಟಕ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭ ಮಾಡುತ್ತದೆ. ಭೂಮಿ ವಾಪಾಸು ಪಡೆಯುವರೆಗೆ ಈ ಹೋರಾಟ ಮುಂದುವರೆಯಲಿದ್ದು, ಭೂಮಿ ತಂಟೆಗೆ ಬಂದ ಯಾವುದೇ ಸರ್ಕಾರಕ್ಕೂ, ಪಕ್ಷಕ್ಕೂ ಉಳಿಗಾಲವಿಲ್ಲ” ಎಂದು ಕಿಡಿ ಕಾರಿದರು.

ಸಂಯುಕ್ತ ಹೋರಾಟ ಕರ್ನಾಟಕ ಇದರ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, ವಿಧಾನಸಭಾ ಚುನಾವಣೆ ಮುಂಚೆ ಹೋರಾಟಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಪರಿಗಣಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಅವರ ಈ ವೈಯಕ್ತಿಕ ಬದ್ಧತೆಯನ್ನು ಅವರು ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.

“ರೈತ ಹೋರಾಟದ ಬಗ್ಗೆ ನಾಲ್ಕೈದು ಸುತ್ತಿನ ಚರ್ಚೆ ಆಗಿವೆ. ಹೋರಾಟದ ಹಿಂದಿನ ದಿನ ಇಬ್ಬರು ಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ 500 ಎಕರೆ ಭೂಮಿಯನ್ನು ಬಿಡಲು ಸಾಧ್ಯ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಹೇಳಿಕೆ ನೀಡುವುದಕ್ಕಿಂತ ಮುಂಚೆ ತರಾತುರಿಯಲ್ಲಿ ಅವರ ಪತ್ರಿಕಾಗೋಷ್ಠಿ ಮಾಡಿದ್ದು ಏಕೆ?” ಎಂದು ವರಲಕ್ಷ್ಮಿ ಅವರು ಪ್ರಶ್ನಿಸಿದರು.

“ನಿನ್ನೆಯ ಹೋರಾಟದ ವೇಳೆ ಪೊಲೀಸರು ಅತ್ಯಂತ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಹೋರಾಟದ ಕನ್ವಿನರ್ ಅವರನ್ನು ವೇದಿಕೆಗೆ ಹತ್ತಿ ಕುತ್ತಿಗೆ ಹಿಡಿದು ಕೆಳಗಡೆ ದಬ್ಬಿದ್ದಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆ ಎಂದು ನಾವು ಭಾವಿಸಿರಲಿಲ್ಲ. ನಿಮ್ಮ ಮಾತನ್ನು ನಡೆಸಿಕೊಡಿ ಎಂದಷ್ಟೇ ನಾವು ಹೇಳಿದ್ದೇವೆ. ನಾವು ಅವರ ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೆವು‌, ಆದರೆ ಅವರು ನಮ್ಮನ್ನು ನಡೆಸಿಕೊಂಡಿದ್ದು ಸರಿಯಲ್ಲ. ಆದರೂ, ಸಭೆ ಕರೆಯುತ್ತೇವೆ ಎಂದು ಒಂದು ವಾರ ಸಮಯ ಕೇಳಿದ್ದಾರೆ. ಕಾದು ನೋಡೋಣ, ನಮ್ಮ ಬೇಡಿಕೆಯನ್ನು ಈಡೇರಿಸಿ ಎಂದಷ್ಟೆ ಮಾತ್ರ ನಾವು ಕೇಳಿಕೊಳ್ಳುತ್ತೇವೆ” ಎಂದು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ನಿನ್ನೆಯ ಪೊಲೀಸರ ನಡೆಗೆ ಕಾರಣ ಯಾರು? ಪೊಲೀಸರಿಗೆ ಹೀಗೆ ಆದೇಶ ನೀಡಿದವರು ಯಾರು? ಇದರ ಹಿಂದೆ ದೊಡ್ಡ ಲಾಭಿ, ಡೀಲ್ ಇದೆ ಎಂದ ಅವರು, “ನಿನ್ನೆಯ ಪೊಲೀಸರ ನಡೆಯ ಹಿಂದೆ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ. ಸಿದ್ದರಾಮಯ್ಯ ಅವರು ಒಪ್ಪಿದರೂ, ಸಚಿವ ಎಂ.ಬಿ. ಪಾಟೀಲ್ ಅವರು ರೈತರ ಭೂಮಿಯನ್ನು ಬಿಡುವಂತೆ ಕಾಣುತ್ತಿಲ್ಲ” ಎಂದು ನೇರವಾಗಿ ಆರೋಪಿಸಿದರು.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ಸರ್ಕಾರ ಹೆಸರಿಗಷ್ಟೇ ಇರೋದು. ಇದೊಂದು ಭ್ರಮೆ. ಆಡಳಿತ ಕಾರ್ಪೊರೇಟ್ ಕಂಪೆನಿಗಳ ಕೈಯ್ಯಲ್ಲಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ನಾವು ಪರಿಶೀಲನೆ ಮಾಡಬೇಕಿದೆ.‌ ಎಂ.ಬಿ. ಪಾಟೀಲ್ ಅವರು ಕೈಗಾರಿಕಾ ಸಚಿವರಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಕೈಗಾರಿಕೆಗಳ ಗುತ್ತಿಗೆಗಾರರಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಕೆಐಎಡಿಬಿ ಎನ್ನುವ ಕಾಯ್ದೆಯ ತಂದು, ರಿಯಲ್ ಎಸ್ಟೇಟ್‌ ಕುಳಗಳ ದುಷ್ಟ ಕೂಟವನ್ನು ಸರ್ಕಾರ ರಚನೆ ಮಾಡಿದೆ. ಕೆಐಎಡಿಬಿ ಈಗ ಒಂದು ದಳ್ಳಾಲಿ ಕೇಂದ್ರದಾಗಿದ್ದು, ಅದನ್ನು ಮುಚ್ಚಬೇಕಿದೆ ಎಂದು ಅವರು ಆಗ್ರಹಿಸಿದರು. ಚನ್ನರಾಯಪಟ್ಟಣ ರೈತರಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...