Homeಕರ್ನಾಟಕಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: 'ಸಂಯುಕ್ತ ಹೋರಾಟ ಕರ್ನಾಟಕ' ಘೋಷಣೆ

ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ

ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ

- Advertisement -
- Advertisement -

ಬುಧವಾರ ದೇವನಹಳ್ಳಿಯಲ್ಲಿ ನಡೆದ ಚನ್ನರಾಯಪಟ್ಟಣ ರೈತರ ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯದ ಹಿಂದೆ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ ಎಂದು ‘ಸಂಯುಕ್ತ ಹೋರಾಟ – ಕರ್ನಾಟಕ’ ಆರೋಪಿಸಿದ್ದು, ರೈತರ ಭೂಮಿ ವಾಪಾಸು ಆಗುವವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಪ್ರಾರಂಭಿಸುವುದಾಗಿ ಹೇಳಿದೆ. ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಸಂಯುಕ್ತ ಹೋರಾಟ – ಕರ್ನಾಟಕ’ ಈ ತೀರ್ಮಾನ ತಿಳಿಸಿದೆ. ಚನ್ನರಾಯಪಟ್ಟಣ ರೈತರಿಗಾಗಿ

ದೇವನಹಳ್ಳಿ ಚಲೋ ಹೋರಾಟದಲ್ಲಿ ನಡೆದ ಬೆಳವಣಿಗೆ ಮತ್ತು ರೈತ ಹೋರಾಟದ ಮುಂದಿನ ನಡೆಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ‘ಸಂಯುಕ್ತ ಹೋರಾಟ – ಕರ್ನಾಟಕ’ದ ಮುಖಂಡ, ರೈತ ನಾಯಕ ಬಡಗಲಪುರ ನಾಗೇಂದ್ರ, “ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡರು. ಹೋರಾಟಗಾರರ ಬಂಧನದ ವೇಳೆ ಮಹಿಳೆ, ಮಕ್ಕಳು ಮತ್ತು ವೃದ್ಧರ ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರನ್ನು ಅಮಾನುತುಗೊಳಿಸಿ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಹೋರಾಟವನ್ನು ಹತ್ತಿಕ್ಕಲು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳು ಇಂತಹ ಪ್ರಯತ್ನಗಳು ಮಾಡುತ್ತಲೇ ಬಂದಿದೆ. ಆದರೆ ಹೋರಾಟಗಾರರನ್ನು ಈ ರೀತಿ ಅನಾನುಷವಾಗಿ ಪೊಲೀಸರು ಎಲ್ಲೂ ನಡೆಸಿಕೊಂಡಿಲ್ಲ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಜನರ ಮೂಲಭೂತ ಹಕ್ಕಾಗದ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ತಪ್ಪನ್ನು ಹೈಕೋರ್ಟ್‌ ಕೂಡಾ ಮಾಡಿದೆ ಎಂದು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಆಕ್ಷೇಪ ಮಾಡಿದರು.

“ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಅವರು ಹೋರಾಟಗಾರರ ಪರವಾಗಿ ನಿಂತು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಸರ್ಕಾರ ಬಂದ ನಂತರ ಅವರ ಸರ್ಕಾರವೆ ರೈತರ ಭೂಮಿಯನ್ನು ಕಿತ್ತುಕೊಳ್ಳುವ ಅಂತಿಮ ಅಧಿಸೂಚನೆ ಹೊರಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇವನಹಳ್ಳಿಯ ಹೊರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್‌ ಬಲವನ್ನು ಬಳಸಿ ರಾಕ್ಷಸ ರೂಪದಲ್ಲಿ ವರ್ತಿಸಿತು. ಇಷ್ಟು ದೊಡ್ಡ ಪ್ರತಿಭಟನೆ ನಡೆದರೂ ಸರ್ಕಾರ ಯಾವುದೇ ಹೇಳಿಕೆ ನೀಡಿರಲಿಲ್ಲ. ನಮ್ಮನ್ನು ಬಂಧಿಸಿದ ನಂತರ ಕರೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರು ಒಂದು ವಾರ ಸಮಯ ಕೇಳಿದ್ದರು. ಹಾಗಾಗಿಯೆ ಬಂಧನಕ್ಕೆ ಒಳಗಾಗಿದ್ದ ನಾವು ಬಿಡುಗಡೆ ಹೊಂದಿದ್ದೇವೆ” ಎಂದು ಹೇಳಿದರು.

“ಅದಾಗ್ಯೂ, ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ನಾವು ಕೈಬಿಡೊಲ್ಲ. ನಾಳೆಯಿಂದ ಸಂಯುಕ್ತ ಹೋರಾಟ ಕರ್ನಾಟಕ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭ ಮಾಡುತ್ತದೆ. ಭೂಮಿ ವಾಪಾಸು ಪಡೆಯುವರೆಗೆ ಈ ಹೋರಾಟ ಮುಂದುವರೆಯಲಿದ್ದು, ಭೂಮಿ ತಂಟೆಗೆ ಬಂದ ಯಾವುದೇ ಸರ್ಕಾರಕ್ಕೂ, ಪಕ್ಷಕ್ಕೂ ಉಳಿಗಾಲವಿಲ್ಲ” ಎಂದು ಕಿಡಿ ಕಾರಿದರು.

ಸಂಯುಕ್ತ ಹೋರಾಟ ಕರ್ನಾಟಕ ಇದರ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, ವಿಧಾನಸಭಾ ಚುನಾವಣೆ ಮುಂಚೆ ಹೋರಾಟಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಪರಿಗಣಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಅವರ ಈ ವೈಯಕ್ತಿಕ ಬದ್ಧತೆಯನ್ನು ಅವರು ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.

“ರೈತ ಹೋರಾಟದ ಬಗ್ಗೆ ನಾಲ್ಕೈದು ಸುತ್ತಿನ ಚರ್ಚೆ ಆಗಿವೆ. ಹೋರಾಟದ ಹಿಂದಿನ ದಿನ ಇಬ್ಬರು ಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ 500 ಎಕರೆ ಭೂಮಿಯನ್ನು ಬಿಡಲು ಸಾಧ್ಯ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಹೇಳಿಕೆ ನೀಡುವುದಕ್ಕಿಂತ ಮುಂಚೆ ತರಾತುರಿಯಲ್ಲಿ ಅವರ ಪತ್ರಿಕಾಗೋಷ್ಠಿ ಮಾಡಿದ್ದು ಏಕೆ?” ಎಂದು ವರಲಕ್ಷ್ಮಿ ಅವರು ಪ್ರಶ್ನಿಸಿದರು.

“ನಿನ್ನೆಯ ಹೋರಾಟದ ವೇಳೆ ಪೊಲೀಸರು ಅತ್ಯಂತ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಹೋರಾಟದ ಕನ್ವಿನರ್ ಅವರನ್ನು ವೇದಿಕೆಗೆ ಹತ್ತಿ ಕುತ್ತಿಗೆ ಹಿಡಿದು ಕೆಳಗಡೆ ದಬ್ಬಿದ್ದಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆ ಎಂದು ನಾವು ಭಾವಿಸಿರಲಿಲ್ಲ. ನಿಮ್ಮ ಮಾತನ್ನು ನಡೆಸಿಕೊಡಿ ಎಂದಷ್ಟೇ ನಾವು ಹೇಳಿದ್ದೇವೆ. ನಾವು ಅವರ ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೆವು‌, ಆದರೆ ಅವರು ನಮ್ಮನ್ನು ನಡೆಸಿಕೊಂಡಿದ್ದು ಸರಿಯಲ್ಲ. ಆದರೂ, ಸಭೆ ಕರೆಯುತ್ತೇವೆ ಎಂದು ಒಂದು ವಾರ ಸಮಯ ಕೇಳಿದ್ದಾರೆ. ಕಾದು ನೋಡೋಣ, ನಮ್ಮ ಬೇಡಿಕೆಯನ್ನು ಈಡೇರಿಸಿ ಎಂದಷ್ಟೆ ಮಾತ್ರ ನಾವು ಕೇಳಿಕೊಳ್ಳುತ್ತೇವೆ” ಎಂದು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ನಿನ್ನೆಯ ಪೊಲೀಸರ ನಡೆಗೆ ಕಾರಣ ಯಾರು? ಪೊಲೀಸರಿಗೆ ಹೀಗೆ ಆದೇಶ ನೀಡಿದವರು ಯಾರು? ಇದರ ಹಿಂದೆ ದೊಡ್ಡ ಲಾಭಿ, ಡೀಲ್ ಇದೆ ಎಂದ ಅವರು, “ನಿನ್ನೆಯ ಪೊಲೀಸರ ನಡೆಯ ಹಿಂದೆ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ. ಸಿದ್ದರಾಮಯ್ಯ ಅವರು ಒಪ್ಪಿದರೂ, ಸಚಿವ ಎಂ.ಬಿ. ಪಾಟೀಲ್ ಅವರು ರೈತರ ಭೂಮಿಯನ್ನು ಬಿಡುವಂತೆ ಕಾಣುತ್ತಿಲ್ಲ” ಎಂದು ನೇರವಾಗಿ ಆರೋಪಿಸಿದರು.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ಸರ್ಕಾರ ಹೆಸರಿಗಷ್ಟೇ ಇರೋದು. ಇದೊಂದು ಭ್ರಮೆ. ಆಡಳಿತ ಕಾರ್ಪೊರೇಟ್ ಕಂಪೆನಿಗಳ ಕೈಯ್ಯಲ್ಲಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ನಾವು ಪರಿಶೀಲನೆ ಮಾಡಬೇಕಿದೆ.‌ ಎಂ.ಬಿ. ಪಾಟೀಲ್ ಅವರು ಕೈಗಾರಿಕಾ ಸಚಿವರಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಕೈಗಾರಿಕೆಗಳ ಗುತ್ತಿಗೆಗಾರರಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಕೆಐಎಡಿಬಿ ಎನ್ನುವ ಕಾಯ್ದೆಯ ತಂದು, ರಿಯಲ್ ಎಸ್ಟೇಟ್‌ ಕುಳಗಳ ದುಷ್ಟ ಕೂಟವನ್ನು ಸರ್ಕಾರ ರಚನೆ ಮಾಡಿದೆ. ಕೆಐಎಡಿಬಿ ಈಗ ಒಂದು ದಳ್ಳಾಲಿ ಕೇಂದ್ರದಾಗಿದ್ದು, ಅದನ್ನು ಮುಚ್ಚಬೇಕಿದೆ ಎಂದು ಅವರು ಆಗ್ರಹಿಸಿದರು. ಚನ್ನರಾಯಪಟ್ಟಣ ರೈತರಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....