Homeಕರ್ನಾಟಕಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: 'ಸಂಯುಕ್ತ ಹೋರಾಟ ಕರ್ನಾಟಕ' ಘೋಷಣೆ

ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ

ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ

- Advertisement -
- Advertisement -

ಬುಧವಾರ ದೇವನಹಳ್ಳಿಯಲ್ಲಿ ನಡೆದ ಚನ್ನರಾಯಪಟ್ಟಣ ರೈತರ ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯದ ಹಿಂದೆ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ ಎಂದು ‘ಸಂಯುಕ್ತ ಹೋರಾಟ – ಕರ್ನಾಟಕ’ ಆರೋಪಿಸಿದ್ದು, ರೈತರ ಭೂಮಿ ವಾಪಾಸು ಆಗುವವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಪ್ರಾರಂಭಿಸುವುದಾಗಿ ಹೇಳಿದೆ. ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಸಂಯುಕ್ತ ಹೋರಾಟ – ಕರ್ನಾಟಕ’ ಈ ತೀರ್ಮಾನ ತಿಳಿಸಿದೆ. ಚನ್ನರಾಯಪಟ್ಟಣ ರೈತರಿಗಾಗಿ

ದೇವನಹಳ್ಳಿ ಚಲೋ ಹೋರಾಟದಲ್ಲಿ ನಡೆದ ಬೆಳವಣಿಗೆ ಮತ್ತು ರೈತ ಹೋರಾಟದ ಮುಂದಿನ ನಡೆಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ‘ಸಂಯುಕ್ತ ಹೋರಾಟ – ಕರ್ನಾಟಕ’ದ ಮುಖಂಡ, ರೈತ ನಾಯಕ ಬಡಗಲಪುರ ನಾಗೇಂದ್ರ, “ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡರು. ಹೋರಾಟಗಾರರ ಬಂಧನದ ವೇಳೆ ಮಹಿಳೆ, ಮಕ್ಕಳು ಮತ್ತು ವೃದ್ಧರ ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರನ್ನು ಅಮಾನುತುಗೊಳಿಸಿ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಹೋರಾಟವನ್ನು ಹತ್ತಿಕ್ಕಲು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳು ಇಂತಹ ಪ್ರಯತ್ನಗಳು ಮಾಡುತ್ತಲೇ ಬಂದಿದೆ. ಆದರೆ ಹೋರಾಟಗಾರರನ್ನು ಈ ರೀತಿ ಅನಾನುಷವಾಗಿ ಪೊಲೀಸರು ಎಲ್ಲೂ ನಡೆಸಿಕೊಂಡಿಲ್ಲ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಜನರ ಮೂಲಭೂತ ಹಕ್ಕಾಗದ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ತಪ್ಪನ್ನು ಹೈಕೋರ್ಟ್‌ ಕೂಡಾ ಮಾಡಿದೆ ಎಂದು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಆಕ್ಷೇಪ ಮಾಡಿದರು.

“ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಅವರು ಹೋರಾಟಗಾರರ ಪರವಾಗಿ ನಿಂತು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಸರ್ಕಾರ ಬಂದ ನಂತರ ಅವರ ಸರ್ಕಾರವೆ ರೈತರ ಭೂಮಿಯನ್ನು ಕಿತ್ತುಕೊಳ್ಳುವ ಅಂತಿಮ ಅಧಿಸೂಚನೆ ಹೊರಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇವನಹಳ್ಳಿಯ ಹೊರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್‌ ಬಲವನ್ನು ಬಳಸಿ ರಾಕ್ಷಸ ರೂಪದಲ್ಲಿ ವರ್ತಿಸಿತು. ಇಷ್ಟು ದೊಡ್ಡ ಪ್ರತಿಭಟನೆ ನಡೆದರೂ ಸರ್ಕಾರ ಯಾವುದೇ ಹೇಳಿಕೆ ನೀಡಿರಲಿಲ್ಲ. ನಮ್ಮನ್ನು ಬಂಧಿಸಿದ ನಂತರ ಕರೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರು ಒಂದು ವಾರ ಸಮಯ ಕೇಳಿದ್ದರು. ಹಾಗಾಗಿಯೆ ಬಂಧನಕ್ಕೆ ಒಳಗಾಗಿದ್ದ ನಾವು ಬಿಡುಗಡೆ ಹೊಂದಿದ್ದೇವೆ” ಎಂದು ಹೇಳಿದರು.

“ಅದಾಗ್ಯೂ, ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ನಾವು ಕೈಬಿಡೊಲ್ಲ. ನಾಳೆಯಿಂದ ಸಂಯುಕ್ತ ಹೋರಾಟ ಕರ್ನಾಟಕ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭ ಮಾಡುತ್ತದೆ. ಭೂಮಿ ವಾಪಾಸು ಪಡೆಯುವರೆಗೆ ಈ ಹೋರಾಟ ಮುಂದುವರೆಯಲಿದ್ದು, ಭೂಮಿ ತಂಟೆಗೆ ಬಂದ ಯಾವುದೇ ಸರ್ಕಾರಕ್ಕೂ, ಪಕ್ಷಕ್ಕೂ ಉಳಿಗಾಲವಿಲ್ಲ” ಎಂದು ಕಿಡಿ ಕಾರಿದರು.

ಸಂಯುಕ್ತ ಹೋರಾಟ ಕರ್ನಾಟಕ ಇದರ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, ವಿಧಾನಸಭಾ ಚುನಾವಣೆ ಮುಂಚೆ ಹೋರಾಟಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಪರಿಗಣಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಅವರ ಈ ವೈಯಕ್ತಿಕ ಬದ್ಧತೆಯನ್ನು ಅವರು ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.

“ರೈತ ಹೋರಾಟದ ಬಗ್ಗೆ ನಾಲ್ಕೈದು ಸುತ್ತಿನ ಚರ್ಚೆ ಆಗಿವೆ. ಹೋರಾಟದ ಹಿಂದಿನ ದಿನ ಇಬ್ಬರು ಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ 500 ಎಕರೆ ಭೂಮಿಯನ್ನು ಬಿಡಲು ಸಾಧ್ಯ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಹೇಳಿಕೆ ನೀಡುವುದಕ್ಕಿಂತ ಮುಂಚೆ ತರಾತುರಿಯಲ್ಲಿ ಅವರ ಪತ್ರಿಕಾಗೋಷ್ಠಿ ಮಾಡಿದ್ದು ಏಕೆ?” ಎಂದು ವರಲಕ್ಷ್ಮಿ ಅವರು ಪ್ರಶ್ನಿಸಿದರು.

“ನಿನ್ನೆಯ ಹೋರಾಟದ ವೇಳೆ ಪೊಲೀಸರು ಅತ್ಯಂತ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಹೋರಾಟದ ಕನ್ವಿನರ್ ಅವರನ್ನು ವೇದಿಕೆಗೆ ಹತ್ತಿ ಕುತ್ತಿಗೆ ಹಿಡಿದು ಕೆಳಗಡೆ ದಬ್ಬಿದ್ದಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆ ಎಂದು ನಾವು ಭಾವಿಸಿರಲಿಲ್ಲ. ನಿಮ್ಮ ಮಾತನ್ನು ನಡೆಸಿಕೊಡಿ ಎಂದಷ್ಟೇ ನಾವು ಹೇಳಿದ್ದೇವೆ. ನಾವು ಅವರ ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೆವು‌, ಆದರೆ ಅವರು ನಮ್ಮನ್ನು ನಡೆಸಿಕೊಂಡಿದ್ದು ಸರಿಯಲ್ಲ. ಆದರೂ, ಸಭೆ ಕರೆಯುತ್ತೇವೆ ಎಂದು ಒಂದು ವಾರ ಸಮಯ ಕೇಳಿದ್ದಾರೆ. ಕಾದು ನೋಡೋಣ, ನಮ್ಮ ಬೇಡಿಕೆಯನ್ನು ಈಡೇರಿಸಿ ಎಂದಷ್ಟೆ ಮಾತ್ರ ನಾವು ಕೇಳಿಕೊಳ್ಳುತ್ತೇವೆ” ಎಂದು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ನಿನ್ನೆಯ ಪೊಲೀಸರ ನಡೆಗೆ ಕಾರಣ ಯಾರು? ಪೊಲೀಸರಿಗೆ ಹೀಗೆ ಆದೇಶ ನೀಡಿದವರು ಯಾರು? ಇದರ ಹಿಂದೆ ದೊಡ್ಡ ಲಾಭಿ, ಡೀಲ್ ಇದೆ ಎಂದ ಅವರು, “ನಿನ್ನೆಯ ಪೊಲೀಸರ ನಡೆಯ ಹಿಂದೆ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ. ಸಿದ್ದರಾಮಯ್ಯ ಅವರು ಒಪ್ಪಿದರೂ, ಸಚಿವ ಎಂ.ಬಿ. ಪಾಟೀಲ್ ಅವರು ರೈತರ ಭೂಮಿಯನ್ನು ಬಿಡುವಂತೆ ಕಾಣುತ್ತಿಲ್ಲ” ಎಂದು ನೇರವಾಗಿ ಆರೋಪಿಸಿದರು.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ಸರ್ಕಾರ ಹೆಸರಿಗಷ್ಟೇ ಇರೋದು. ಇದೊಂದು ಭ್ರಮೆ. ಆಡಳಿತ ಕಾರ್ಪೊರೇಟ್ ಕಂಪೆನಿಗಳ ಕೈಯ್ಯಲ್ಲಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ನಾವು ಪರಿಶೀಲನೆ ಮಾಡಬೇಕಿದೆ.‌ ಎಂ.ಬಿ. ಪಾಟೀಲ್ ಅವರು ಕೈಗಾರಿಕಾ ಸಚಿವರಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಕೈಗಾರಿಕೆಗಳ ಗುತ್ತಿಗೆಗಾರರಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಕೆಐಎಡಿಬಿ ಎನ್ನುವ ಕಾಯ್ದೆಯ ತಂದು, ರಿಯಲ್ ಎಸ್ಟೇಟ್‌ ಕುಳಗಳ ದುಷ್ಟ ಕೂಟವನ್ನು ಸರ್ಕಾರ ರಚನೆ ಮಾಡಿದೆ. ಕೆಐಎಡಿಬಿ ಈಗ ಒಂದು ದಳ್ಳಾಲಿ ಕೇಂದ್ರದಾಗಿದ್ದು, ಅದನ್ನು ಮುಚ್ಚಬೇಕಿದೆ ಎಂದು ಅವರು ಆಗ್ರಹಿಸಿದರು. ಚನ್ನರಾಯಪಟ್ಟಣ ರೈತರಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...