Homeಕರ್ನಾಟಕಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ' ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ‘ಭೂಮಿ ಹಬ್ಬ’ ಐತಿಹಾಸಿಕ ವಿಜಯೋತ್ಸವ ಮತ್ತು ಗೌರವ ಸಮರ್ಪಣೆ ಹಮ್ಮಿಕೊಂಡಿತು.

2026 ಫೆಬ್ರವರಿ 27, ಶುಕ್ರವಾರ ನಡೆದ ‘ಭೂಮಿ ಹಬ್ಬ’ ಸಂಭ್ರಮದಲ್ಲಿ ಈ ಐತಿಹಾಸಿಕ ಹೋರಾಟದ ನೆನಪುಗಳನ್ನು ಸಂಗ್ರಹಿಸಿದ ‘ಸಾವಿರಾರು ನದಿಗಳು’ ಲೇಖನ ಸಂಕಲವನ್ನು ಲೋಕಾರ್ಪಣೆಗೊಳಿಸಲಾಯಿತು. 

ರೈತ ಹೋರಾಟದ ಮುಂದಾಳುಗಳಲ್ಲಿ ಒಬ್ಬರಾದ ಕಾರಳ್ಳಿ ಶ್ರೀನಿವಾಸ್ ಅವರು ಮಾತನಾಡಿ ‘ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಮಣ್ಣಿನ ಮೇಲೆ ಕಣ್ಣಿಟ್ಟಿದ್ದ ಭೂದಾಹದ ವ್ಯವಸ್ಥೆಯ ವಿರುದ್ಧ ರೈತರು ತೋರಿದ ಅಪ್ರತಿಮ ಸಂಘಟಿತ ಶಕ್ತಿಗೆ ಸರಕಾರ ಕೊನೆಗೂ ಮಣಿದಿದೆ. ದೀರ್ಘ ಕಾಲ ಮಳೆ, ಗಾಳಿ, ಬಿಸಿಲೆನ್ನದೆ ಧರಣಿ ಕುಳಿತ ರೈತರ ಛಲಕ್ಕೆ ಸಂದ ಜಯವಾಗಿ, ಸುಮಾರು 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದರು. ಅಲ್ಲದೇ ಈ ವಿಜಯವು ಕೇವಲ ಚನ್ನರಾಯಪಟ್ಟಣದ ರೈತರದ್ದಲ್ಲ, ಬದಲಿಗೆ ಭೂಮಿಯೇ ಜೀವನಾಧಾರವೆಂದು ನಂಬಿರುವ ನಾಡಿನ ಸಮಸ್ತ ರೈತಕುಲದ ಸ್ವಾಭಿಮಾನದ ಸಂಕೇತವಾಗಿದೆ ಎಂದು ಅವರು ಹೇಳಿದರು.

ಈ ಸುದೀರ್ಘ ಹೋರಾಟದ ಹಾದಿಯಲ್ಲಿ ನಮಗೆ ಧೈರ್ಯ ತುಂಬಿ ಹೆಗಲಿಗೆ ಹೆಗಲು ಕೊಟ್ಟು ನಿಂತವರು ನಮ್ಮ ಹೋರಾಟದ ಒಡನಾಡಿಗಳು, ವಿವಿಧ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ಮಿತ್ರರು ನೀಡಿದ ಬೆಂಬಲದಿಂದಲೇ ಇಂದು ನಾವು ಈ ಮಣ್ಣನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ನೋವಿಗೆ ದನಿಯಾಗಿ, ಅಧಿಕಾರಶಾಹಿಯ ವಿರುದ್ಧದ ಈ ಸಮರದಲ್ಲಿ ಬೆನ್ನೆಲುಬಾಗಿ ನಿಂತ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾರಳ್ಳಿ ಶ್ರೀನಿವಾಸ್ ಸ್ಮರಿಸಿದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ‘ಈ ಗೆಲುವಿನ ನಡುವೆಯೇ ಸರಕಾರವು ಭೂಮಿಯನ್ನು ಬಿಡುಗಡೆ ಮಾಡುವ ನೆಪದಲ್ಲಿ ‘ಶಾಶ್ವತ ವಿಶೇಷ ಕೃಷಿ ವಲಯ’ ಎಂಬ ಅಸಂವಿಧಾನಿಕ ನಿಯಮವನ್ನು ಹೇರಿ, ರೈತರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾಗಿದೆ. ಸರಕಾರದ ಈ ದ್ವಂದ್ವ ನೀತಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭೂಮಿ ಉಳಿಸಿಕೊಳ್ಳಲು ಹೋರಾಡಿದ ನಮಗೆ, ಇಂತಹ ಮಾರಕ ಷರತ್ತುಗಳನ್ನು ಎದುರಿಸುವುದು ಹೇಗೆ ಎಂಬುದು ತಿಳಿದಿದೆಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ‘ರೈತರ ತಾಳ್ಮೆಯನ್ನು ಪರೀಕ್ಷಿಸದೆ ಕೂಡಲೇ ಈ ಕಠಿಣ ನಿಯಮಗಳನ್ನು ಹಿಂಪಡೆದು ರೈತರಿಗೆ ಮುಕ್ತವಾಗಿ ಬದುಕುವ ಹಕ್ಕನ್ನು ನೀಡಬೇಕು. ಐತಿಹಾಸಿಕ ವಿಜಯವನ್ನು ಸಂಭ್ರಮಿಸುವುದರ ಜೊತೆಗೆ ಎಲ್ಲರೂ ಒಟ್ಟಾಗಿ ಸೇರಿ ನಮ್ಮೆಲ್ಲರ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಿದ್ದೇವೆ’ ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಈ ಸಂಭ್ರಮದಲ್ಲಿ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳಾದ ಕಾರಳ್ಳಿ ಶ್ರೀನಿವಾಸ್, ರಮೇಶ್ ಚೀಮಾಚನಹಳ್ಳಿ, ಪ್ರಮೋದ್ ಪೂಲನಹಳ್ಳಿ, ಮಾರೇಗೌಡ, ನಂಜಪ್ಪ, ಸಂಯುಕ್ತ ಹೋರಾಟ ಕರ್ನಾಟಕ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ವರಲಕ್ಷ್ಮಿ, ಯಶವಂತ, ಕೆ.ವಿ.ಭಟ್, ವೀರಸಂಗಯ್ಯ, ಹೋರಾಟಗಾರರಾದ ದು.ಸರಸ್ವತಿ, ದೇವಿ, ಪ್ರಕಾಶ್, ಗೌರಿ, ಗೌರಮ್ಮ, ಆಂಜಿನೇಯರೆಡ್ಡಿ, ಪತ್ರಕರ್ತರಾದ ರವಿಕುಮಾರ್ ಈಚಲಮರ, ಚಂದ್ರು ತರಹುಣಿಸೆ, ವಿದ್ಯಾರ್ಥಿ ಮುಖಂಡರಾದ ಸರೋವರ್, ಯಮುನಾ, ಕೌಶಲ್ಯ, ಮಮತಾ, ಶರತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....