Homeಕರ್ನಾಟಕಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ' ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ‘ಭೂಮಿ ಹಬ್ಬ’ ಐತಿಹಾಸಿಕ ವಿಜಯೋತ್ಸವ ಮತ್ತು ಗೌರವ ಸಮರ್ಪಣೆ ಹಮ್ಮಿಕೊಂಡಿತು.

2026 ಫೆಬ್ರವರಿ 27, ಶುಕ್ರವಾರ ನಡೆದ ‘ಭೂಮಿ ಹಬ್ಬ’ ಸಂಭ್ರಮದಲ್ಲಿ ಈ ಐತಿಹಾಸಿಕ ಹೋರಾಟದ ನೆನಪುಗಳನ್ನು ಸಂಗ್ರಹಿಸಿದ ‘ಸಾವಿರಾರು ನದಿಗಳು’ ಲೇಖನ ಸಂಕಲವನ್ನು ಲೋಕಾರ್ಪಣೆಗೊಳಿಸಲಾಯಿತು. 

ರೈತ ಹೋರಾಟದ ಮುಂದಾಳುಗಳಲ್ಲಿ ಒಬ್ಬರಾದ ಕಾರಳ್ಳಿ ಶ್ರೀನಿವಾಸ್ ಅವರು ಮಾತನಾಡಿ ‘ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಮಣ್ಣಿನ ಮೇಲೆ ಕಣ್ಣಿಟ್ಟಿದ್ದ ಭೂದಾಹದ ವ್ಯವಸ್ಥೆಯ ವಿರುದ್ಧ ರೈತರು ತೋರಿದ ಅಪ್ರತಿಮ ಸಂಘಟಿತ ಶಕ್ತಿಗೆ ಸರಕಾರ ಕೊನೆಗೂ ಮಣಿದಿದೆ. ದೀರ್ಘ ಕಾಲ ಮಳೆ, ಗಾಳಿ, ಬಿಸಿಲೆನ್ನದೆ ಧರಣಿ ಕುಳಿತ ರೈತರ ಛಲಕ್ಕೆ ಸಂದ ಜಯವಾಗಿ, ಸುಮಾರು 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದರು. ಅಲ್ಲದೇ ಈ ವಿಜಯವು ಕೇವಲ ಚನ್ನರಾಯಪಟ್ಟಣದ ರೈತರದ್ದಲ್ಲ, ಬದಲಿಗೆ ಭೂಮಿಯೇ ಜೀವನಾಧಾರವೆಂದು ನಂಬಿರುವ ನಾಡಿನ ಸಮಸ್ತ ರೈತಕುಲದ ಸ್ವಾಭಿಮಾನದ ಸಂಕೇತವಾಗಿದೆ ಎಂದು ಅವರು ಹೇಳಿದರು.

ಈ ಸುದೀರ್ಘ ಹೋರಾಟದ ಹಾದಿಯಲ್ಲಿ ನಮಗೆ ಧೈರ್ಯ ತುಂಬಿ ಹೆಗಲಿಗೆ ಹೆಗಲು ಕೊಟ್ಟು ನಿಂತವರು ನಮ್ಮ ಹೋರಾಟದ ಒಡನಾಡಿಗಳು, ವಿವಿಧ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ಮಿತ್ರರು ನೀಡಿದ ಬೆಂಬಲದಿಂದಲೇ ಇಂದು ನಾವು ಈ ಮಣ್ಣನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ನೋವಿಗೆ ದನಿಯಾಗಿ, ಅಧಿಕಾರಶಾಹಿಯ ವಿರುದ್ಧದ ಈ ಸಮರದಲ್ಲಿ ಬೆನ್ನೆಲುಬಾಗಿ ನಿಂತ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾರಳ್ಳಿ ಶ್ರೀನಿವಾಸ್ ಸ್ಮರಿಸಿದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ‘ಈ ಗೆಲುವಿನ ನಡುವೆಯೇ ಸರಕಾರವು ಭೂಮಿಯನ್ನು ಬಿಡುಗಡೆ ಮಾಡುವ ನೆಪದಲ್ಲಿ ‘ಶಾಶ್ವತ ವಿಶೇಷ ಕೃಷಿ ವಲಯ’ ಎಂಬ ಅಸಂವಿಧಾನಿಕ ನಿಯಮವನ್ನು ಹೇರಿ, ರೈತರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾಗಿದೆ. ಸರಕಾರದ ಈ ದ್ವಂದ್ವ ನೀತಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭೂಮಿ ಉಳಿಸಿಕೊಳ್ಳಲು ಹೋರಾಡಿದ ನಮಗೆ, ಇಂತಹ ಮಾರಕ ಷರತ್ತುಗಳನ್ನು ಎದುರಿಸುವುದು ಹೇಗೆ ಎಂಬುದು ತಿಳಿದಿದೆಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ‘ರೈತರ ತಾಳ್ಮೆಯನ್ನು ಪರೀಕ್ಷಿಸದೆ ಕೂಡಲೇ ಈ ಕಠಿಣ ನಿಯಮಗಳನ್ನು ಹಿಂಪಡೆದು ರೈತರಿಗೆ ಮುಕ್ತವಾಗಿ ಬದುಕುವ ಹಕ್ಕನ್ನು ನೀಡಬೇಕು. ಐತಿಹಾಸಿಕ ವಿಜಯವನ್ನು ಸಂಭ್ರಮಿಸುವುದರ ಜೊತೆಗೆ ಎಲ್ಲರೂ ಒಟ್ಟಾಗಿ ಸೇರಿ ನಮ್ಮೆಲ್ಲರ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಿದ್ದೇವೆ’ ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಈ ಸಂಭ್ರಮದಲ್ಲಿ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳಾದ ಕಾರಳ್ಳಿ ಶ್ರೀನಿವಾಸ್, ರಮೇಶ್ ಚೀಮಾಚನಹಳ್ಳಿ, ಪ್ರಮೋದ್ ಪೂಲನಹಳ್ಳಿ, ಮಾರೇಗೌಡ, ನಂಜಪ್ಪ, ಸಂಯುಕ್ತ ಹೋರಾಟ ಕರ್ನಾಟಕ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ವರಲಕ್ಷ್ಮಿ, ಯಶವಂತ, ಕೆ.ವಿ.ಭಟ್, ವೀರಸಂಗಯ್ಯ, ಹೋರಾಟಗಾರರಾದ ದು.ಸರಸ್ವತಿ, ದೇವಿ, ಪ್ರಕಾಶ್, ಗೌರಿ, ಗೌರಮ್ಮ, ಆಂಜಿನೇಯರೆಡ್ಡಿ, ಪತ್ರಕರ್ತರಾದ ರವಿಕುಮಾರ್ ಈಚಲಮರ, ಚಂದ್ರು ತರಹುಣಿಸೆ, ವಿದ್ಯಾರ್ಥಿ ಮುಖಂಡರಾದ ಸರೋವರ್, ಯಮುನಾ, ಕೌಶಲ್ಯ, ಮಮತಾ, ಶರತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...