Homeಕರ್ನಾಟಕಅಹಂಕಾರ-ಗಂಡಿನ ದರ್ಪದ ಮುಂದೆ 'ತಾಯ್ತನ' ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

ಅಹಂಕಾರ-ಗಂಡಿನ ದರ್ಪದ ಮುಂದೆ ‘ತಾಯ್ತನ’ ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಹಂಕಾರ ಮತ್ತು ಗಂಡಿನ ದರ್ಪ ಕಾಣಿಸುತ್ತಿದೆ. ಆದರೆ, ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ ಎಂದು ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರದಲ್ಲಿ ಸಚಿವ ಎಂ.ಬಿ. ಪಾಟೀಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನಗೆ ರೈತ ಸಂಘದ ನಾಯಕಿ ಚುಕ್ಕಿ ನಂಜುಂಡ್ಸ್ವಾಮಿ ಬೇಸರ ಹೊರಹಾಕಿದರು.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, “ಇಲ್ಲಿನ ಒಗ್ಗಟ್ಟು ಮುರಿಯುವ ಕೆಲಸವನ್ನು ಕೆವರು ಮಾಡುತ್ತಿದ್ದಾರೆ. ಇಷ್ಟು ದಿನ ಇವರು ಯಾರೂ ನಮಗೆ ಕಂಡಿರಲಿಲ್ಲ, ಇದ್ದಕ್ಕಿದ್ದಂತೆ ಭೂಮಿ ಕೊಡುತ್ತೇವೆ ಎಂದು ಈಗ ಮುಂದೆ ಬಂದಿದ್ದಾರೆ. ಈ ನಡುವೆ, ಕಾನೂನಿನ ತೊಡಕು ಇದೆ ಎಂದು ಹೇಳಿ 10 ದಿನ ಕಾಲಾವಕಾಶ ಕೇಳಿದ್ದರು. ಇ ಂದ್ಯದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಬಂದಿದ್ದಾರೆ. ಡಿಫೆನ್ಸ್‌ ಕಾರಿಡಾರ್ ಮಾಡುತ್ತೇವೆ ಎಂದು ಅನುಮತಿ ಕೇಳಿದ್ದಾರೆ. ರೈತರು ಭೂಮಿ ಕೊಡದೇ ಇದ್ದರೆ ಡಿಫೆನ್ಸ್‌ ಕಾರಿಡಾರ್ ಆಂಧ್ರಪ್ರದೇಶಕ್ಕೆ ಹೋಗುತ್ತದೆ ಎಂದು ಹೇಳಿದ್ದಾರೆ; ಇದೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದರು.

“ಡಿಫೆನ್ಸ್‌ ಕಾಡಿರಾಡ್ ಮಾಡುವುದೇ ಇದ್ದರೆ ಅದಕ್ಕೆ ಕೆಐಎಡಿಬಿ ಮಧ್ಯಸ್ಥಿತಕೆ ಬೇಕಾಗಿರುಲ್ಲ. ಅದನ್ನು ನಿರ್ಧರಿಸುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ. ಕೇಂದ್ರ ಯಾವುದೇ ರಾಜ್ಯದಲ್ಲಿ ಬೇಕಿದ್ದರೂ ಮಾಡಬಹುದು. ಜು.4 ರ ಸಭೆವರೆಗೂ ಸರ್ಕಾರಕ್ಕೆ ಇಲ್ಲಿ ಏನು ಮಾಡಬೇಕು ಎಂಬುದು ಗೊತ್ತಿರಲಿಲ್ಲ. ಅದಕ್ಕಾಗಿಯೇ ಅವರು ಇದ್ದಕ್ಕಿದ್ದಂತೆ ಡಿಫೆನ್ಸ್ ಕಾರಿಡಾರ್ ನೆಪದಲ್ಲಿ ಭೂಮಿಯನ್ನು ಕೆಐಎಡಿಬಿ ಲ್ಯಾಂಡ್‌ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳಲು ಯೋಚಿಸಿದ್ದಾರೆ. ಇವರ ಷಡ್ಯಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

“ನಾಳಿನ ಸಭೆ ಏನಾಗುತ್ತದೆ ನೋಡೋಣ, ನಾವು ಸಾಕಷ್ಟು ಆಶಾಭಾವ ಇಟ್ಟುಕೊಳ್ಳೋಣ. ನಮಗೆ ಸಾಕಷ್ಟು ತಾಳ್ಮೆ ಬೇಕು. ಏಕೆಂದರೆ, ರೈತರಾದ ನಮಗೆ ಬೆಳೆ ಬೆಳೆಯುವಾಗ ಕಾಣಿಸುವ ಎಲ್ಲ ಸಮಸ್ಯೆಗಳು ಈಗಲೂ ಬರುತ್ತವೆ. ನಾವು ಭೂಮಿಯನ್ನು ಅಳೆಯುವ ಕೆಲಸ ಮಾಡಿಲ್ಲ. ಅರ್ಧ ಎಕರೆ, ಒಂದು ಎಕರೆ ಇದ್ದರೂ ಶ್ರದ್ಧೆಯಿಂದ ಬೆಳೆ ಬೆಳೆಯುವ ಕೆಲಸ ಮಾಡುತ್ತಿದ್ದೇವೆ. ನಮಗೆ ನಷ್ಟವಾದರೂ ಬೇರೆಯವರಿಗೆ ನೀಡುವ ಕೆಲಸ ಮಾಡುತ್ತಿದ್ದೇವೆ. ಇಂಥ ನಿಸ್ವಾರ್ಥದ ಸಂಸ್ಖೃತಿ ಒಂದುಕಡೆಯಾದರೆ, ಎಲ್ಲವೂ ನಾನೇ ಎಂಬ ಮನಸ್ಥಿತಿ ಒಂದು ಕಡೆ. ಈ ಎರಡೂ ವೈರುಧ್ಯಗಳ ನಡುವೆ ನಡೆಯುತ್ತಿರುವ ಹೋರಾಟ ಇದು. ಅಹಂಕಾರ ಹಾಗೂ ಗಂಡಿನ ದರ್ಪ ಇಲ್ಲಿ ಕಾಣಿಸುತ್ತಿದೆ; ಆದರೆ ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ” ಎಂದರು.

ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ಫಲ ಸಿಗಲೇಬೇಕು: ನೂರ್ ಶ್ರೀಧರ್

ಜನಶಕ್ತಿ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಮಾತನಾಡಿ, “13 ಹಳ್ಳಿಗಳ ಭೂತಪಸ್ವಿಗಳಿಗೆ ಶರಣು, 1200 ದಿನಗಳ ದೊಡ್ಡ ಮಹಾತಪಸ್ಸು ಮಾಡಿದ್ದೀರ. ಇಂಥಹ ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ನಾಳೆ ಒಳ್ಳೆ ಫಲ ಸಿಗಲೇಬೇಕು” ಎಂದರು.

“ಕೆಐಎಡಿಬಿ ಎಲ್ಲ ಕಡೆ ಭೂಮಿ ಕಬಳಿಸುತ್ತಿರುವಾಗ ನಮ್ಮನ್ನು ತಡೆಯುವವರೇ ಇಲ್ಲ ಎನ್ನುತ್ತಿರುವಾಗ, ಎಲ್ಲ ಸರ್ಕಾರಗಳ ಅಹಂಕಾರವನ್ನು 13 ಹಳ್ಳಿಗಳ ಜನ ತಡೆದಿದ್ದಾರೆ. ಅಂತಿಮ ಅಧಿಸೂಚನೆ ಬಂದ ಬಳಿಕವೂ ಹಲವು ಜನರ ಬೆಂಬಲ ಸಿಕ್ಕಿದೆ. ಇದು 13 ಹಳ್ಳಿಗಳ ಹೋರಾಟವಲ್ಲ, ಇಡೀ ದೇಶದ ಹೋರಾಟ. ನೂರಕ್ಕೆ ನೂರು ನಾಳಿನ ಫಲಿತಾಂಶ ನಮ್ಮ ಪರವಾಗಿ ಆಗೇ ಆಗುತ್ತದೆ. ನಾಳಿನ ಸಭೆಗೆ ಎಲ್ಲ ತಾಯಂದಿರೂ ಸಿಹಿ ತನ್ನಿ, ‘ಸಿಹಿ ತಿಂದು, ಸಿಹಿ ಸುದ್ದಿ ಕೊಡಿ’ ಎಂದು ಮುಖ್ಯಮಂತ್ರಿಗಳನ್ನು ಕೇಳೋಣ” ಎಂದರು.

“ಇಲ್ಲಿರುವ ಸಂಘಟನೆಗಳೆಲ್ಲವೂ ಕೇವಲ ಕಾವಲು ಪಡೆಗಳು ಮಾತ್ರ, ನಿಮ್ಮ ಭೂಮಿ ಕೈತಪ್ಪುವುದಕ್ಕೆ ನಾವು ಬಿಡುವುದೇ ಇಲ್ಲ. ಈ ತಪಸ್ಸಿಗೆ ನಾಳೆ ಪ್ರತಿಫಲ ಸಿಗಬಹುದು. ನಮ್ಮ ಭೂಮಿ ಬಲವಂತದ ವಶಪಡಿಸಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿವನ ತಪ್ಪಸ್ಸು ಕೆಡಿಸಿದಂತೆ. ಶಿವ ಮೂರನೇ ಕಣ್ಣು ಬಿಟ್ಟಾಗ ಪ್ರಳಯ ಸೃಷ್ಠಿ ಆಗುತ್ತದೆ’ ಇಲ್ಲೂ ಕೂಡ ಅದೇ ಆಗುತ್ತದೆ. ಅಂಥ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದರೆ ಅವರಿಗೇ ತೊಂದರೆ; ನಮಗೇನೂ ಆಗುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಸಮಾವೇಶದಲ್ಲಿ ಇಂದಿರಾ ಕೃಷ್ಣಪ್ಪ, ಬಡಗಲಪುರ ನಾಗೇಂದ್ರ, ಎಸ್‌.ಆರ್‌. ಹಿರೇಮಠ್‌, ಟಿ.ಯಶವಂತ್, ಮೀನಾಕ್ಷಿ ಸುಂದರಂ, ಗುರುಪ್ರಸಾದ್ ಕೆರಗೋಡು, ಕೆವಿ ಭಟ್, ಚಾಮರಸ ಪಾಟೀಲ್, ಎಚ್.ಆರ್. ಬಸವರಾಜಪ್ಪ, ಮುಖ್ಯಮಂತ್ರಿ ಚಂದ್ರು, ದೇವಿ, ಚುಕ್ಕಿ ನಂಜುಂಡಸ್ವಾಮಿ, ಕಾಳಪ್ಪ, ಅಪ್ಪಣ್ಣ, ಜಿಜಿ ನಾರಾಯಣಸ್ವಾಮಿ, ಆಂಜನೇಐ ರೆಡ್ಡಿ, ನೂರ್ ಶ್ರೀಧರ್, ನಂಜಪ್ಪ ನಲ್ಲಪ್ಪನಹಳ್ಳಿ, ಮಾರೇಗೌಡ, ಕಾರಳ್ಳಿ ಶ್ರೀನಿವಾಸ್, ರಮೇಶ್‌ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೇವನಹಳ್ಳಿ: ಭೂಮಿ ಕೊಡುವುದಿಲ್ಲ ಎಂದು ದಾಖಲೆ ನೀಡಿದ ಶೇ.80 ರಷ್ಟು ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...