Homeಕರ್ನಾಟಕಅಹಂಕಾರ-ಗಂಡಿನ ದರ್ಪದ ಮುಂದೆ 'ತಾಯ್ತನ' ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

ಅಹಂಕಾರ-ಗಂಡಿನ ದರ್ಪದ ಮುಂದೆ ‘ತಾಯ್ತನ’ ಗೆಲ್ಲುತ್ತದೆ: ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಹಂಕಾರ ಮತ್ತು ಗಂಡಿನ ದರ್ಪ ಕಾಣಿಸುತ್ತಿದೆ. ಆದರೆ, ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ ಎಂದು ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರದಲ್ಲಿ ಸಚಿವ ಎಂ.ಬಿ. ಪಾಟೀಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನಗೆ ರೈತ ಸಂಘದ ನಾಯಕಿ ಚುಕ್ಕಿ ನಂಜುಂಡ್ಸ್ವಾಮಿ ಬೇಸರ ಹೊರಹಾಕಿದರು.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಅವರು, “ಇಲ್ಲಿನ ಒಗ್ಗಟ್ಟು ಮುರಿಯುವ ಕೆಲಸವನ್ನು ಕೆವರು ಮಾಡುತ್ತಿದ್ದಾರೆ. ಇಷ್ಟು ದಿನ ಇವರು ಯಾರೂ ನಮಗೆ ಕಂಡಿರಲಿಲ್ಲ, ಇದ್ದಕ್ಕಿದ್ದಂತೆ ಭೂಮಿ ಕೊಡುತ್ತೇವೆ ಎಂದು ಈಗ ಮುಂದೆ ಬಂದಿದ್ದಾರೆ. ಈ ನಡುವೆ, ಕಾನೂನಿನ ತೊಡಕು ಇದೆ ಎಂದು ಹೇಳಿ 10 ದಿನ ಕಾಲಾವಕಾಶ ಕೇಳಿದ್ದರು. ಇ ಂದ್ಯದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಕ್ಷಣಾ ಮಂತ್ರಿಗಳನ್ನು ಭೇಟಿ ಮಾಡಿ ಬಂದಿದ್ದಾರೆ. ಡಿಫೆನ್ಸ್‌ ಕಾರಿಡಾರ್ ಮಾಡುತ್ತೇವೆ ಎಂದು ಅನುಮತಿ ಕೇಳಿದ್ದಾರೆ. ರೈತರು ಭೂಮಿ ಕೊಡದೇ ಇದ್ದರೆ ಡಿಫೆನ್ಸ್‌ ಕಾರಿಡಾರ್ ಆಂಧ್ರಪ್ರದೇಶಕ್ಕೆ ಹೋಗುತ್ತದೆ ಎಂದು ಹೇಳಿದ್ದಾರೆ; ಇದೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದರು.

“ಡಿಫೆನ್ಸ್‌ ಕಾಡಿರಾಡ್ ಮಾಡುವುದೇ ಇದ್ದರೆ ಅದಕ್ಕೆ ಕೆಐಎಡಿಬಿ ಮಧ್ಯಸ್ಥಿತಕೆ ಬೇಕಾಗಿರುಲ್ಲ. ಅದನ್ನು ನಿರ್ಧರಿಸುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ. ಕೇಂದ್ರ ಯಾವುದೇ ರಾಜ್ಯದಲ್ಲಿ ಬೇಕಿದ್ದರೂ ಮಾಡಬಹುದು. ಜು.4 ರ ಸಭೆವರೆಗೂ ಸರ್ಕಾರಕ್ಕೆ ಇಲ್ಲಿ ಏನು ಮಾಡಬೇಕು ಎಂಬುದು ಗೊತ್ತಿರಲಿಲ್ಲ. ಅದಕ್ಕಾಗಿಯೇ ಅವರು ಇದ್ದಕ್ಕಿದ್ದಂತೆ ಡಿಫೆನ್ಸ್ ಕಾರಿಡಾರ್ ನೆಪದಲ್ಲಿ ಭೂಮಿಯನ್ನು ಕೆಐಎಡಿಬಿ ಲ್ಯಾಂಡ್‌ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳಲು ಯೋಚಿಸಿದ್ದಾರೆ. ಇವರ ಷಡ್ಯಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

“ನಾಳಿನ ಸಭೆ ಏನಾಗುತ್ತದೆ ನೋಡೋಣ, ನಾವು ಸಾಕಷ್ಟು ಆಶಾಭಾವ ಇಟ್ಟುಕೊಳ್ಳೋಣ. ನಮಗೆ ಸಾಕಷ್ಟು ತಾಳ್ಮೆ ಬೇಕು. ಏಕೆಂದರೆ, ರೈತರಾದ ನಮಗೆ ಬೆಳೆ ಬೆಳೆಯುವಾಗ ಕಾಣಿಸುವ ಎಲ್ಲ ಸಮಸ್ಯೆಗಳು ಈಗಲೂ ಬರುತ್ತವೆ. ನಾವು ಭೂಮಿಯನ್ನು ಅಳೆಯುವ ಕೆಲಸ ಮಾಡಿಲ್ಲ. ಅರ್ಧ ಎಕರೆ, ಒಂದು ಎಕರೆ ಇದ್ದರೂ ಶ್ರದ್ಧೆಯಿಂದ ಬೆಳೆ ಬೆಳೆಯುವ ಕೆಲಸ ಮಾಡುತ್ತಿದ್ದೇವೆ. ನಮಗೆ ನಷ್ಟವಾದರೂ ಬೇರೆಯವರಿಗೆ ನೀಡುವ ಕೆಲಸ ಮಾಡುತ್ತಿದ್ದೇವೆ. ಇಂಥ ನಿಸ್ವಾರ್ಥದ ಸಂಸ್ಖೃತಿ ಒಂದುಕಡೆಯಾದರೆ, ಎಲ್ಲವೂ ನಾನೇ ಎಂಬ ಮನಸ್ಥಿತಿ ಒಂದು ಕಡೆ. ಈ ಎರಡೂ ವೈರುಧ್ಯಗಳ ನಡುವೆ ನಡೆಯುತ್ತಿರುವ ಹೋರಾಟ ಇದು. ಅಹಂಕಾರ ಹಾಗೂ ಗಂಡಿನ ದರ್ಪ ಇಲ್ಲಿ ಕಾಣಿಸುತ್ತಿದೆ; ಆದರೆ ಇಲ್ಲಿ ತಾಯ್ತನದ ಶಕ್ತಿ ಇದೆ. ಅಂತಿಮವಾಗಿ ತಾಯ್ತನವೇ ಗೆಲ್ಲುತ್ತದೆ” ಎಂದರು.

ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ಫಲ ಸಿಗಲೇಬೇಕು: ನೂರ್ ಶ್ರೀಧರ್

ಜನಶಕ್ತಿ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಮಾತನಾಡಿ, “13 ಹಳ್ಳಿಗಳ ಭೂತಪಸ್ವಿಗಳಿಗೆ ಶರಣು, 1200 ದಿನಗಳ ದೊಡ್ಡ ಮಹಾತಪಸ್ಸು ಮಾಡಿದ್ದೀರ. ಇಂಥಹ ಸುಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ನಾಳೆ ಒಳ್ಳೆ ಫಲ ಸಿಗಲೇಬೇಕು” ಎಂದರು.

“ಕೆಐಎಡಿಬಿ ಎಲ್ಲ ಕಡೆ ಭೂಮಿ ಕಬಳಿಸುತ್ತಿರುವಾಗ ನಮ್ಮನ್ನು ತಡೆಯುವವರೇ ಇಲ್ಲ ಎನ್ನುತ್ತಿರುವಾಗ, ಎಲ್ಲ ಸರ್ಕಾರಗಳ ಅಹಂಕಾರವನ್ನು 13 ಹಳ್ಳಿಗಳ ಜನ ತಡೆದಿದ್ದಾರೆ. ಅಂತಿಮ ಅಧಿಸೂಚನೆ ಬಂದ ಬಳಿಕವೂ ಹಲವು ಜನರ ಬೆಂಬಲ ಸಿಕ್ಕಿದೆ. ಇದು 13 ಹಳ್ಳಿಗಳ ಹೋರಾಟವಲ್ಲ, ಇಡೀ ದೇಶದ ಹೋರಾಟ. ನೂರಕ್ಕೆ ನೂರು ನಾಳಿನ ಫಲಿತಾಂಶ ನಮ್ಮ ಪರವಾಗಿ ಆಗೇ ಆಗುತ್ತದೆ. ನಾಳಿನ ಸಭೆಗೆ ಎಲ್ಲ ತಾಯಂದಿರೂ ಸಿಹಿ ತನ್ನಿ, ‘ಸಿಹಿ ತಿಂದು, ಸಿಹಿ ಸುದ್ದಿ ಕೊಡಿ’ ಎಂದು ಮುಖ್ಯಮಂತ್ರಿಗಳನ್ನು ಕೇಳೋಣ” ಎಂದರು.

“ಇಲ್ಲಿರುವ ಸಂಘಟನೆಗಳೆಲ್ಲವೂ ಕೇವಲ ಕಾವಲು ಪಡೆಗಳು ಮಾತ್ರ, ನಿಮ್ಮ ಭೂಮಿ ಕೈತಪ್ಪುವುದಕ್ಕೆ ನಾವು ಬಿಡುವುದೇ ಇಲ್ಲ. ಈ ತಪಸ್ಸಿಗೆ ನಾಳೆ ಪ್ರತಿಫಲ ಸಿಗಬಹುದು. ನಮ್ಮ ಭೂಮಿ ಬಲವಂತದ ವಶಪಡಿಸಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿದರೆ ಶಿವನ ತಪ್ಪಸ್ಸು ಕೆಡಿಸಿದಂತೆ. ಶಿವ ಮೂರನೇ ಕಣ್ಣು ಬಿಟ್ಟಾಗ ಪ್ರಳಯ ಸೃಷ್ಠಿ ಆಗುತ್ತದೆ’ ಇಲ್ಲೂ ಕೂಡ ಅದೇ ಆಗುತ್ತದೆ. ಅಂಥ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದರೆ ಅವರಿಗೇ ತೊಂದರೆ; ನಮಗೇನೂ ಆಗುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಸಮಾವೇಶದಲ್ಲಿ ಇಂದಿರಾ ಕೃಷ್ಣಪ್ಪ, ಬಡಗಲಪುರ ನಾಗೇಂದ್ರ, ಎಸ್‌.ಆರ್‌. ಹಿರೇಮಠ್‌, ಟಿ.ಯಶವಂತ್, ಮೀನಾಕ್ಷಿ ಸುಂದರಂ, ಗುರುಪ್ರಸಾದ್ ಕೆರಗೋಡು, ಕೆವಿ ಭಟ್, ಚಾಮರಸ ಪಾಟೀಲ್, ಎಚ್.ಆರ್. ಬಸವರಾಜಪ್ಪ, ಮುಖ್ಯಮಂತ್ರಿ ಚಂದ್ರು, ದೇವಿ, ಚುಕ್ಕಿ ನಂಜುಂಡಸ್ವಾಮಿ, ಕಾಳಪ್ಪ, ಅಪ್ಪಣ್ಣ, ಜಿಜಿ ನಾರಾಯಣಸ್ವಾಮಿ, ಆಂಜನೇಐ ರೆಡ್ಡಿ, ನೂರ್ ಶ್ರೀಧರ್, ನಂಜಪ್ಪ ನಲ್ಲಪ್ಪನಹಳ್ಳಿ, ಮಾರೇಗೌಡ, ಕಾರಳ್ಳಿ ಶ್ರೀನಿವಾಸ್, ರಮೇಶ್‌ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೇವನಹಳ್ಳಿ: ಭೂಮಿ ಕೊಡುವುದಿಲ್ಲ ಎಂದು ದಾಖಲೆ ನೀಡಿದ ಶೇ.80 ರಷ್ಟು ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...