Homeಮುಖಪುಟಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

ಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

- Advertisement -
- Advertisement -

ಅತ್ಯಂತ ಜನಪರ, ಜಾತ್ಯಾತೀತ ನಿಲುವುಗಳ ಮತ್ತು ಸಮತಾ ಭಾವದ ಉದ್ದೇಶ ಇಟ್ಟುಕೊಂಡಿರುವ ‘ಮತ್ತೆ ಕಲ್ಯಾಣ’ ಈಗ ಸಾಂದರ್ಭಿಕ ಎಡವಟ್ಟುಗಳ ಮೂಲಕ ಒಂದಿಷ್ಟು ಜಾಸ್ತಿನೇ ಟೀಕೆಗೊಳಗಾಗಿದೆ.

ಇರಲಿ, ಈಗ ನಾ ಹೇಳಾ ಲೆಕ್ಕದ ಪ್ರಕಾರ, ಸೀರಿಯಲ್‍ಗಳಲ್ಲಿ ‘ಮತ್ತೆ ಕಲ್ಯಾಣ’ ಆಂದೋಲನ ಬಲು ಜೋರಾಗೇ ನಡದೈತಿ… ಆದರೆ, ಸೀರಿಯಲ್‍ಗಳ ನಿರ್ದೇಶಕರಿಗೆ ಮಾತ್ರ ಪಕ್ಕಾ ಗೊತ್ತೈತಿ ‘ಮತ್ತೆ ಕಲ್ಯಾಣ’ ಆದ್ರ ಅಲ್ಲಿಗೆ ಧಾರಾವಾಹಿ ಖತಂ ಅಂತ್ಹೇಳಿ…

ಹೊರಗೆ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಮತ್ತು ಈಗ ನಂಗ ಸೀರಿಯಲ್ ಒಳಗ ಸಿಕ್ಕಿರೋ ‘ಮತ್ತೆ ಕಲ್ಯಾಣ’ಕ್ಕೂ ಬಾಳ ಫರಕ್ (ತರೀಕೆರೆ ಮೇಷ್ಟ್ರು ಈ ನಮ್ ಪದಾನ್ನ ‘ಫರಕು’ ಅಂತಾ ಫೇಮಸ್ ಮಾಡ್ಯಾರ) ಐತಿ.

ಯಾವುದೇ ಮನರಂಜನಾ ಚಾನೆಲ್‍ಗಳಿಗೆ ಹೋಗಿ, ಅಲ್ಲಿರುವ ಕನಿಷ್ಠ ಎರಡು-ಮೂರು ಧಾರಾವಾಹಿಗಳಲ್ಲಿ ಕತೆ ನಿಂತಿರುವುದೇ ‘ಮತ್ತೆ ಕಲ್ಯಾಣ’ ಆಗಲಿ ಎಂಬ ದುರಾಶೆಯ ಮೇಲೆಯೇ! ಸದ್ಯ ಚಾಲ್ತಿಯಲ್ಲಿರುವ ಬಹುಪಾಲು ಸೀರಿಯಲ್‍ಗಳ ಸುತ್ತ ‘ಒಬ್ಬನಿಗಿಬ್ಬರು…’… ಆಗಲೇ ‘ಅವನ’ ಮದುವೆ ಆಗಿದ್ದರೂ ಅದನ್ನು ಮುರಿದು ಇನ್ನೊಂದು ‘ಕಲ್ಯಾಣ’ ಮಾಡಲು ನಡೆಸುವ ಕಸರತ್ತುಗಳೋ ಅಬ್ಬಬ್ಬಾ!

ಈ ಫಾರ್ಮುಲಾ ಜನರಿಗೆ ಬಹಳ ಇಷ್ಟವಾಗಿದೆಯೋ ಏನೋ ಗೊತ್ತಿಲ್ಲ! ಶೇಕಡಾ 70 ರಷ್ಟು ಧಾರಾವಾಹಿಗಳಲ್ಲಿ ಒಬ್ಬ ಹೀರೋ, ಇಬ್ಬರು ಹೀರೊಯಿನ್‍ಗಳು… ಇಬ್ಬರು ಹೀರೊಯಿನ್‍ಗಳಲ್ಲಿ ಒಬ್ಬಳು ಒಳ್ಳೆಯವಳು, ಇನ್ನೊಬ್ಬಳು ಕೆಟ್ಟವಳು! ವಿಚಿತ್ರ ಎಂದರೆ ನನಗೆ ಈ ‘ಕೆಟ್ಟ’ ಪಾತ್ರದ ಹುಡುಗಿಯರೇ ಕೆಲವೊಮ್ಮೆ ಇಷ್ಟ… ಆಹಾಹಾ. ಒಳ್ಳೊಳ್ಳೆ ಜೀನ್ಸ್, ಸಖತ್ ಹೇರ್‍ಸ್ಟೈಲ್, ಬಿಂದಾಸ್ ಮೇಕಪ್….ಆದರೆ ಏನ್ ಮಾಡೋದು ಅದೆಲ್ಲವನ್ನೂ ಈ ಮೆದುಳೇ ಇಲ್ಲದ ನಿರ್ದೇಶಕರು ನೆಗೆಟಿವ್ ಮಾಡಿಟ್ಟಿದ್ದಾರೆ.

ಎಲ್ಲ ಚಾನೆಲ್‍ಗಳಲ್ಲೂ ‘ಒಬ್ಬನಿಗಿಬ್ಬರು’ ಎಂಬ ಆಧಾರದಲ್ಲೇ ಬಹುಪಾಲು ಕತೆಗಳು ಓಡುತ್ತಿವೆ: ರಾಧಾ ರಮಣ, ಕಮಲಿ, ಇಷ್ಟ ದೇವತೆ, ಸೀತಾ ವಲ್ಲಭ, ಬ್ರಹ್ಮಗಂಟು (ಪಾಪ, ಗಂಟು ಬಿದ್ದಿದ್ದ ಎರಡನೇವಳನ್ನು ಡೈರೆಕ್ಟರ್ ಯಾವಾಗಲೋ ಓಡಿಸಿಬಿಟ್ಟ), ಕುಲವಧು……ಈ ಪಟ್ಟಿ ಹಾಗೇ ಬೆಳೆಯುತ್ತ ಹೋಗುತ್ತದೆ.

ಸೀರಿಯಲ್ ನೋಡದವರಿಗೆ ಅನಿಸಬಹುದು: ಅಂದ್ರೆ ಎಲ್ಲ ಕತೆ ಒಂದೇನಾ ಎಂದು… ನೋ ನೋ, ಅದರಲ್ಲೂ ಪರ್ಮುಟೇಷನ್ ಮತ್ತು ಕಾಂಬಿನೇಷನ್ ಇರ್ತಾವೆ… ಮುಂದ್ಲ ವಾರ ನೋಡಾಕ್ರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...