Homeಮುಖಪುಟಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

ಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

- Advertisement -
- Advertisement -

ಅತ್ಯಂತ ಜನಪರ, ಜಾತ್ಯಾತೀತ ನಿಲುವುಗಳ ಮತ್ತು ಸಮತಾ ಭಾವದ ಉದ್ದೇಶ ಇಟ್ಟುಕೊಂಡಿರುವ ‘ಮತ್ತೆ ಕಲ್ಯಾಣ’ ಈಗ ಸಾಂದರ್ಭಿಕ ಎಡವಟ್ಟುಗಳ ಮೂಲಕ ಒಂದಿಷ್ಟು ಜಾಸ್ತಿನೇ ಟೀಕೆಗೊಳಗಾಗಿದೆ.

ಇರಲಿ, ಈಗ ನಾ ಹೇಳಾ ಲೆಕ್ಕದ ಪ್ರಕಾರ, ಸೀರಿಯಲ್‍ಗಳಲ್ಲಿ ‘ಮತ್ತೆ ಕಲ್ಯಾಣ’ ಆಂದೋಲನ ಬಲು ಜೋರಾಗೇ ನಡದೈತಿ… ಆದರೆ, ಸೀರಿಯಲ್‍ಗಳ ನಿರ್ದೇಶಕರಿಗೆ ಮಾತ್ರ ಪಕ್ಕಾ ಗೊತ್ತೈತಿ ‘ಮತ್ತೆ ಕಲ್ಯಾಣ’ ಆದ್ರ ಅಲ್ಲಿಗೆ ಧಾರಾವಾಹಿ ಖತಂ ಅಂತ್ಹೇಳಿ…

ಹೊರಗೆ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಮತ್ತು ಈಗ ನಂಗ ಸೀರಿಯಲ್ ಒಳಗ ಸಿಕ್ಕಿರೋ ‘ಮತ್ತೆ ಕಲ್ಯಾಣ’ಕ್ಕೂ ಬಾಳ ಫರಕ್ (ತರೀಕೆರೆ ಮೇಷ್ಟ್ರು ಈ ನಮ್ ಪದಾನ್ನ ‘ಫರಕು’ ಅಂತಾ ಫೇಮಸ್ ಮಾಡ್ಯಾರ) ಐತಿ.

ಯಾವುದೇ ಮನರಂಜನಾ ಚಾನೆಲ್‍ಗಳಿಗೆ ಹೋಗಿ, ಅಲ್ಲಿರುವ ಕನಿಷ್ಠ ಎರಡು-ಮೂರು ಧಾರಾವಾಹಿಗಳಲ್ಲಿ ಕತೆ ನಿಂತಿರುವುದೇ ‘ಮತ್ತೆ ಕಲ್ಯಾಣ’ ಆಗಲಿ ಎಂಬ ದುರಾಶೆಯ ಮೇಲೆಯೇ! ಸದ್ಯ ಚಾಲ್ತಿಯಲ್ಲಿರುವ ಬಹುಪಾಲು ಸೀರಿಯಲ್‍ಗಳ ಸುತ್ತ ‘ಒಬ್ಬನಿಗಿಬ್ಬರು…’… ಆಗಲೇ ‘ಅವನ’ ಮದುವೆ ಆಗಿದ್ದರೂ ಅದನ್ನು ಮುರಿದು ಇನ್ನೊಂದು ‘ಕಲ್ಯಾಣ’ ಮಾಡಲು ನಡೆಸುವ ಕಸರತ್ತುಗಳೋ ಅಬ್ಬಬ್ಬಾ!

ಈ ಫಾರ್ಮುಲಾ ಜನರಿಗೆ ಬಹಳ ಇಷ್ಟವಾಗಿದೆಯೋ ಏನೋ ಗೊತ್ತಿಲ್ಲ! ಶೇಕಡಾ 70 ರಷ್ಟು ಧಾರಾವಾಹಿಗಳಲ್ಲಿ ಒಬ್ಬ ಹೀರೋ, ಇಬ್ಬರು ಹೀರೊಯಿನ್‍ಗಳು… ಇಬ್ಬರು ಹೀರೊಯಿನ್‍ಗಳಲ್ಲಿ ಒಬ್ಬಳು ಒಳ್ಳೆಯವಳು, ಇನ್ನೊಬ್ಬಳು ಕೆಟ್ಟವಳು! ವಿಚಿತ್ರ ಎಂದರೆ ನನಗೆ ಈ ‘ಕೆಟ್ಟ’ ಪಾತ್ರದ ಹುಡುಗಿಯರೇ ಕೆಲವೊಮ್ಮೆ ಇಷ್ಟ… ಆಹಾಹಾ. ಒಳ್ಳೊಳ್ಳೆ ಜೀನ್ಸ್, ಸಖತ್ ಹೇರ್‍ಸ್ಟೈಲ್, ಬಿಂದಾಸ್ ಮೇಕಪ್….ಆದರೆ ಏನ್ ಮಾಡೋದು ಅದೆಲ್ಲವನ್ನೂ ಈ ಮೆದುಳೇ ಇಲ್ಲದ ನಿರ್ದೇಶಕರು ನೆಗೆಟಿವ್ ಮಾಡಿಟ್ಟಿದ್ದಾರೆ.

ಎಲ್ಲ ಚಾನೆಲ್‍ಗಳಲ್ಲೂ ‘ಒಬ್ಬನಿಗಿಬ್ಬರು’ ಎಂಬ ಆಧಾರದಲ್ಲೇ ಬಹುಪಾಲು ಕತೆಗಳು ಓಡುತ್ತಿವೆ: ರಾಧಾ ರಮಣ, ಕಮಲಿ, ಇಷ್ಟ ದೇವತೆ, ಸೀತಾ ವಲ್ಲಭ, ಬ್ರಹ್ಮಗಂಟು (ಪಾಪ, ಗಂಟು ಬಿದ್ದಿದ್ದ ಎರಡನೇವಳನ್ನು ಡೈರೆಕ್ಟರ್ ಯಾವಾಗಲೋ ಓಡಿಸಿಬಿಟ್ಟ), ಕುಲವಧು……ಈ ಪಟ್ಟಿ ಹಾಗೇ ಬೆಳೆಯುತ್ತ ಹೋಗುತ್ತದೆ.

ಸೀರಿಯಲ್ ನೋಡದವರಿಗೆ ಅನಿಸಬಹುದು: ಅಂದ್ರೆ ಎಲ್ಲ ಕತೆ ಒಂದೇನಾ ಎಂದು… ನೋ ನೋ, ಅದರಲ್ಲೂ ಪರ್ಮುಟೇಷನ್ ಮತ್ತು ಕಾಂಬಿನೇಷನ್ ಇರ್ತಾವೆ… ಮುಂದ್ಲ ವಾರ ನೋಡಾಕ್ರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...