Homeಮುಖಪುಟಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

ಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

- Advertisement -
- Advertisement -

ಅತ್ಯಂತ ಜನಪರ, ಜಾತ್ಯಾತೀತ ನಿಲುವುಗಳ ಮತ್ತು ಸಮತಾ ಭಾವದ ಉದ್ದೇಶ ಇಟ್ಟುಕೊಂಡಿರುವ ‘ಮತ್ತೆ ಕಲ್ಯಾಣ’ ಈಗ ಸಾಂದರ್ಭಿಕ ಎಡವಟ್ಟುಗಳ ಮೂಲಕ ಒಂದಿಷ್ಟು ಜಾಸ್ತಿನೇ ಟೀಕೆಗೊಳಗಾಗಿದೆ.

ಇರಲಿ, ಈಗ ನಾ ಹೇಳಾ ಲೆಕ್ಕದ ಪ್ರಕಾರ, ಸೀರಿಯಲ್‍ಗಳಲ್ಲಿ ‘ಮತ್ತೆ ಕಲ್ಯಾಣ’ ಆಂದೋಲನ ಬಲು ಜೋರಾಗೇ ನಡದೈತಿ… ಆದರೆ, ಸೀರಿಯಲ್‍ಗಳ ನಿರ್ದೇಶಕರಿಗೆ ಮಾತ್ರ ಪಕ್ಕಾ ಗೊತ್ತೈತಿ ‘ಮತ್ತೆ ಕಲ್ಯಾಣ’ ಆದ್ರ ಅಲ್ಲಿಗೆ ಧಾರಾವಾಹಿ ಖತಂ ಅಂತ್ಹೇಳಿ…

ಹೊರಗೆ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಮತ್ತು ಈಗ ನಂಗ ಸೀರಿಯಲ್ ಒಳಗ ಸಿಕ್ಕಿರೋ ‘ಮತ್ತೆ ಕಲ್ಯಾಣ’ಕ್ಕೂ ಬಾಳ ಫರಕ್ (ತರೀಕೆರೆ ಮೇಷ್ಟ್ರು ಈ ನಮ್ ಪದಾನ್ನ ‘ಫರಕು’ ಅಂತಾ ಫೇಮಸ್ ಮಾಡ್ಯಾರ) ಐತಿ.

ಯಾವುದೇ ಮನರಂಜನಾ ಚಾನೆಲ್‍ಗಳಿಗೆ ಹೋಗಿ, ಅಲ್ಲಿರುವ ಕನಿಷ್ಠ ಎರಡು-ಮೂರು ಧಾರಾವಾಹಿಗಳಲ್ಲಿ ಕತೆ ನಿಂತಿರುವುದೇ ‘ಮತ್ತೆ ಕಲ್ಯಾಣ’ ಆಗಲಿ ಎಂಬ ದುರಾಶೆಯ ಮೇಲೆಯೇ! ಸದ್ಯ ಚಾಲ್ತಿಯಲ್ಲಿರುವ ಬಹುಪಾಲು ಸೀರಿಯಲ್‍ಗಳ ಸುತ್ತ ‘ಒಬ್ಬನಿಗಿಬ್ಬರು…’… ಆಗಲೇ ‘ಅವನ’ ಮದುವೆ ಆಗಿದ್ದರೂ ಅದನ್ನು ಮುರಿದು ಇನ್ನೊಂದು ‘ಕಲ್ಯಾಣ’ ಮಾಡಲು ನಡೆಸುವ ಕಸರತ್ತುಗಳೋ ಅಬ್ಬಬ್ಬಾ!

ಈ ಫಾರ್ಮುಲಾ ಜನರಿಗೆ ಬಹಳ ಇಷ್ಟವಾಗಿದೆಯೋ ಏನೋ ಗೊತ್ತಿಲ್ಲ! ಶೇಕಡಾ 70 ರಷ್ಟು ಧಾರಾವಾಹಿಗಳಲ್ಲಿ ಒಬ್ಬ ಹೀರೋ, ಇಬ್ಬರು ಹೀರೊಯಿನ್‍ಗಳು… ಇಬ್ಬರು ಹೀರೊಯಿನ್‍ಗಳಲ್ಲಿ ಒಬ್ಬಳು ಒಳ್ಳೆಯವಳು, ಇನ್ನೊಬ್ಬಳು ಕೆಟ್ಟವಳು! ವಿಚಿತ್ರ ಎಂದರೆ ನನಗೆ ಈ ‘ಕೆಟ್ಟ’ ಪಾತ್ರದ ಹುಡುಗಿಯರೇ ಕೆಲವೊಮ್ಮೆ ಇಷ್ಟ… ಆಹಾಹಾ. ಒಳ್ಳೊಳ್ಳೆ ಜೀನ್ಸ್, ಸಖತ್ ಹೇರ್‍ಸ್ಟೈಲ್, ಬಿಂದಾಸ್ ಮೇಕಪ್….ಆದರೆ ಏನ್ ಮಾಡೋದು ಅದೆಲ್ಲವನ್ನೂ ಈ ಮೆದುಳೇ ಇಲ್ಲದ ನಿರ್ದೇಶಕರು ನೆಗೆಟಿವ್ ಮಾಡಿಟ್ಟಿದ್ದಾರೆ.

ಎಲ್ಲ ಚಾನೆಲ್‍ಗಳಲ್ಲೂ ‘ಒಬ್ಬನಿಗಿಬ್ಬರು’ ಎಂಬ ಆಧಾರದಲ್ಲೇ ಬಹುಪಾಲು ಕತೆಗಳು ಓಡುತ್ತಿವೆ: ರಾಧಾ ರಮಣ, ಕಮಲಿ, ಇಷ್ಟ ದೇವತೆ, ಸೀತಾ ವಲ್ಲಭ, ಬ್ರಹ್ಮಗಂಟು (ಪಾಪ, ಗಂಟು ಬಿದ್ದಿದ್ದ ಎರಡನೇವಳನ್ನು ಡೈರೆಕ್ಟರ್ ಯಾವಾಗಲೋ ಓಡಿಸಿಬಿಟ್ಟ), ಕುಲವಧು……ಈ ಪಟ್ಟಿ ಹಾಗೇ ಬೆಳೆಯುತ್ತ ಹೋಗುತ್ತದೆ.

ಸೀರಿಯಲ್ ನೋಡದವರಿಗೆ ಅನಿಸಬಹುದು: ಅಂದ್ರೆ ಎಲ್ಲ ಕತೆ ಒಂದೇನಾ ಎಂದು… ನೋ ನೋ, ಅದರಲ್ಲೂ ಪರ್ಮುಟೇಷನ್ ಮತ್ತು ಕಾಂಬಿನೇಷನ್ ಇರ್ತಾವೆ… ಮುಂದ್ಲ ವಾರ ನೋಡಾಕ್ರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....