Homeಕರ್ನಾಟಕಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

ಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

- Advertisement -
- Advertisement -

ಈ ಮೂರು ದಿನ ತಲೆಚಿಟ್ಟು ಹಿಡಿಯುವಂತೆ ಕಾಶ್ಮೀರ, 370ನೇ ವಿಧಿ ರದ್ದು ಮತ್ತು ಮೋದಿ-ಶಾಗಳ ಐತಿಹಾಸಿಕ ಸಾಧನೆಯ ಬಗ್ಗೆ ಕನ್ನಡದ ಎಲ್ಲ ಚಾನೆಲ್‍ಗಳೂ ವರದಿ, ವಿಶೇಷ ಕಾರ್ಯಕ್ರಮ ಮತ್ತು ಪ್ಯಾನೆಲ್ ಡಿಸ್ಕಸನ್‍ಗಳನ್ನು ನಡೆಸಲಿವೆ. 370ನೇ ವಿಧಿ ರದ್ದು ಎಂಬುದಂತೂ ಅವುಗಳ ಪಾಲಿಗೆ ಪಂಚಮಿಯ ಉಂಡಿ, ಲಾಡೂಗಳನ್ನು ಸವಿದಷ್ಟೇ ಸುಖ ತಂದಿತ್ತು.

ಈ ವಿಷಯವಾಗಿ ಮೊದಲಿನಿಂದಲೂ ಆಗಾಗ ಕಾಶ್ಮೀರ ವಿಷಯದ ಕುರಿತು ಕಾಟಾಚಾರದ ಚರ್ಚೆ ನಡೆಸುತ್ತಿರುವ ಬಂದಿರುವ ಸುವರ್ಣದ ಅಜಿತ್ ಹನುಮಕ್ಕನವರಂತೂ ಕಾಶ್ಮೀರ ಸಮಸ್ಯೆಯ ಆಳ ಅಗಲ ಬಲ್ಲ ಕನ್ನಡಿಗ ತಾವೊಬ್ಬರೇ ಎಂಬಂತೆ, ಚರ್ಚೆಗೆ ಕರೆಸಿಕೊಂಡವರ ಮಾತುಗಳನ್ನೂ ಆಲಿಸದೇ ಕಾಶ್ಮೀರದ ಪುರಾಣವನ್ನು ಪಠಿಸುತ್ತ ಹೋದರು. ಅಜಿತ್ ಜಾಗದಲ್ಲಿ ಸಂಸದ ತೇಜಸ್ವಿ ಸೂರ್ಯರಿದ್ದರೂ ಈ ಪರಿಯ ಸಮರ್ಥನೆ ಸಾಧ್ಯವಿರುತ್ತಿರಲಿಲ್ಲವೇನೋ?

ಪಬ್ಲಿಕ್‍ನ ಹಿರಿಯ ರಂಗನಾಥರು ಕೂಡ ವಾಸ್ತವದ ಕಡೆ ಕಣ್ಣು ಹಾಯಿಸಲು (ಅವರಿಗೆ ಕಾಶ್ಮೀರ ಸಮಸ್ಯೆಯ ತಳಮಟ್ಟದ ವಿವರ ಗೊತ್ತಿದ್ದರೂ!) ಮನಸ್ಸು ಮಾಡಲಿಲ್ಲ. ನೋಟು ರದ್ದತಿಯನ್ನು ಬೆಂಬಲಿಸಿ ಚಿಪ್ ಸಂಶೋಧನೆ ಮಾಡಿದ ಪರಿಯಲ್ಲೇ ಇದರ ಬೆಂಬಲಕ್ಕೂ ನಿಂತರು. ಟಿವಿ 9ನ ರಂಗನಾಥ ಭಾರದ್ವಾಜರಂತೂ ಧ್ವಜ ಹಿಡಿದು ಕುಣಿದಾಡುವುದೊಂದೇ ಬಾಕಿಯಿತ್ತು. ಬಿಟಿವಿ, ಪವರ್ ಟಿವಿ, ಟಿವಿ5…. ಎಲ್ಲದರಲ್ಲೂ ‘370 ರದ್ದತಿಯ ದೇಶಭಕ್ತಿಯದ್ದೇ ಭರಾಟೆ.

ಇದೆಲ್ಲದರ ನಡುವೆ ವಿಭಿನ್ನವಾಗಿ ಕಾರ್ಯಕ್ರಮ ನಡೆಸಿ ಕೊಟ್ಟಿದ್ದು ರಾಜ್‍ನ್ಯೂಸ್‍ನ ಮಂಜುಳಾ ಮಾಸ್ತಿಕಟ್ಟೆಯವರೊಬ್ಬರೇ. ಅವರು ಕಾಶ್ಮೀರದ ಜನರ ಪ್ರಸ್ತುತ ಸಂಕಷ್ಟವನ್ನು ತೆರೆದಿಟ್ಟರಲ್ಲದೇ, ದೆಹಲಿ ಆಡಳಿತ ಕಾಶ್ಮೀರದ ಮೇಲೆ 70 ವರ್ಷಗಳಿಂದ ಎಸಗುತ್ತ ಬಂದಿರುವ ದೌರ್ಜನ್ಯವನ್ನು, ಈಗ ಅದನ್ನು ಮೀರಿಸುವಂತೆ ಬಿಜೆಪಿ-ಸಂಘ ಪರಿವಾರ ಕಾಶ್ಮೀರದ ಮೇಲೆ ಮಿಲಿಟರಿ ಆಡಳಿತವನ್ನು ಹೇರುತ್ತಿದೆ ಎಂಬುದನ್ನು ತಮ್ಮ ಪ್ರಶ್ನೆಗಳ ನಡು ನಡುವೆಯೇ ವಿವರಿಸುತ್ತ ಬಂದರು.

ದೇಶದ ಆರ್ಥಿಕತೆ ಎಕ್ಕ ಹಿಡಿದು ಹೋಗುತ್ತಿರುವಾಗ ಮತ್ತದೇ ಕಾಶ್ಮೀರ ಮತ್ತು ಪಾಕಿಸ್ತಾನವೇ ಇವರ ಬಂಡವಾಳವಾಯಿತೇ ಎಂಬ ಪ್ರಶ್ನೆಯನ್ನೂ ಈ ಚಾನೆಲ್‍ಗಳು ಕೇಳಿಕೊಳ್ಳಲಿಲ್ಲ. ಅಂದ ಹಾಗೆ ದೇಶದ ಆರ್ಥಿಕ ಸ್ಥಿತಿ ಸರಿಯಾಗಿಯೇ ಇದೆ ಎಂಬುದೇ ಅವುಗಳ ಅಭಿಪ್ರಾಯವೂ ಆಗಿದೆಯಲ್ಲ?

ಅಂದಂತೆ ಇದೇ ಚಾನೆಲ್‍ಗಳು ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಯಾಕಾಗ್ತಿಲ್ಲ ಎಂಬ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಅನ್ನಲು ಆಗಲ್ಲ, ಆ ಬಗ್ಗೆ ಅವು ವರದಿ ಮಾಡುತ್ತಿವೆ. ಎಲ್ಲ ದೆಹಲಿಯಲ್ಲೇ ನಿರ್ಧಾರವಾಗುತ್ತೆ ಎಂಬುದನ್ನು ಪಾಸಿಟಿವ್ ಎಂಬಂತೆ ಅವು ಬಿಂಬಿಸುತ್ತಿರುವುದು ನಾಚಿಕೆಗೇಡು. ಹಾಗೆಯೇ, ಕೇಂದ್ರದ ಇಬ್ಬರು ಐಎಎಸ್‍ಗಳನ್ನು ಇಲ್ಲಿ ನೇಮಿಸಲಾಗುತ್ತಂತೆ, ಅವರು ಸರ್ಕಾರದ ಮೇಲೆ ಹದ್ದಿನ ಕಣ್ಣು ಇಡುತ್ತಾರಂತೆ, ಇದು ಚಾಣಕ್ಯನ ತಂತ್ರವಂತೆ! ಇದು ಕೂಡ ಚಾನೆಲ್‍ಗಳ ಪಾಲಿಗೆ ಪಾಸಿಟಿವ್ ನ್ಯೂಸ್! ಜನರನ್ನು ಅವು ಹಾಗೆ ದಾರಿ ತಪ್ಪಿಸುತ್ತಲೂ ಇವೆ.

ಜನರಿಂದ ಚುನಾಯಿತ ಸರ್ಕಾರವೊಂದರ ಮೇಲೆ ಅಧಿಕಾರಿಗಳ ಮೂಲಕ ನಿಯಂತ್ರಣ ಸಾಧಿಸುವುದು ಈ ದೇಶದ ಒಕ್ಕೂಟ ವ್ಯವಸ್ಥೆಗೇ ಮಾಡಿದ ದ್ರೋಹ ಎಂಬ ಅರಿವು ಇದ್ದೂ ಈ ಚಾನೆಲ್‍ಗಳು ‘ಚಾಣಕ್ಯ’ನ ಪರ ನಿಲ್ಲುತ್ತವೆ ಅಂದರೆ, ಇವುಗಳ ಮಾಲಿಕರು ಅವನ ಮುಂದೆ ಮಂಡಿಯೂರಿ ಕುಳಿತಿದ್ದಾರೆ ಎಂದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ya,,,, absolutely u said it right,,, I always watch Raj news,,,,lts so humble channel,,& I really love the anchor Manjula,,,,& I watch NDTV India & NDTV that s it,, I don’t understand y people are mad about other godi media’s,,

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...