Homeಕರ್ನಾಟಕಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

ಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

- Advertisement -
- Advertisement -

ಈ ಮೂರು ದಿನ ತಲೆಚಿಟ್ಟು ಹಿಡಿಯುವಂತೆ ಕಾಶ್ಮೀರ, 370ನೇ ವಿಧಿ ರದ್ದು ಮತ್ತು ಮೋದಿ-ಶಾಗಳ ಐತಿಹಾಸಿಕ ಸಾಧನೆಯ ಬಗ್ಗೆ ಕನ್ನಡದ ಎಲ್ಲ ಚಾನೆಲ್‍ಗಳೂ ವರದಿ, ವಿಶೇಷ ಕಾರ್ಯಕ್ರಮ ಮತ್ತು ಪ್ಯಾನೆಲ್ ಡಿಸ್ಕಸನ್‍ಗಳನ್ನು ನಡೆಸಲಿವೆ. 370ನೇ ವಿಧಿ ರದ್ದು ಎಂಬುದಂತೂ ಅವುಗಳ ಪಾಲಿಗೆ ಪಂಚಮಿಯ ಉಂಡಿ, ಲಾಡೂಗಳನ್ನು ಸವಿದಷ್ಟೇ ಸುಖ ತಂದಿತ್ತು.

ಈ ವಿಷಯವಾಗಿ ಮೊದಲಿನಿಂದಲೂ ಆಗಾಗ ಕಾಶ್ಮೀರ ವಿಷಯದ ಕುರಿತು ಕಾಟಾಚಾರದ ಚರ್ಚೆ ನಡೆಸುತ್ತಿರುವ ಬಂದಿರುವ ಸುವರ್ಣದ ಅಜಿತ್ ಹನುಮಕ್ಕನವರಂತೂ ಕಾಶ್ಮೀರ ಸಮಸ್ಯೆಯ ಆಳ ಅಗಲ ಬಲ್ಲ ಕನ್ನಡಿಗ ತಾವೊಬ್ಬರೇ ಎಂಬಂತೆ, ಚರ್ಚೆಗೆ ಕರೆಸಿಕೊಂಡವರ ಮಾತುಗಳನ್ನೂ ಆಲಿಸದೇ ಕಾಶ್ಮೀರದ ಪುರಾಣವನ್ನು ಪಠಿಸುತ್ತ ಹೋದರು. ಅಜಿತ್ ಜಾಗದಲ್ಲಿ ಸಂಸದ ತೇಜಸ್ವಿ ಸೂರ್ಯರಿದ್ದರೂ ಈ ಪರಿಯ ಸಮರ್ಥನೆ ಸಾಧ್ಯವಿರುತ್ತಿರಲಿಲ್ಲವೇನೋ?

ಪಬ್ಲಿಕ್‍ನ ಹಿರಿಯ ರಂಗನಾಥರು ಕೂಡ ವಾಸ್ತವದ ಕಡೆ ಕಣ್ಣು ಹಾಯಿಸಲು (ಅವರಿಗೆ ಕಾಶ್ಮೀರ ಸಮಸ್ಯೆಯ ತಳಮಟ್ಟದ ವಿವರ ಗೊತ್ತಿದ್ದರೂ!) ಮನಸ್ಸು ಮಾಡಲಿಲ್ಲ. ನೋಟು ರದ್ದತಿಯನ್ನು ಬೆಂಬಲಿಸಿ ಚಿಪ್ ಸಂಶೋಧನೆ ಮಾಡಿದ ಪರಿಯಲ್ಲೇ ಇದರ ಬೆಂಬಲಕ್ಕೂ ನಿಂತರು. ಟಿವಿ 9ನ ರಂಗನಾಥ ಭಾರದ್ವಾಜರಂತೂ ಧ್ವಜ ಹಿಡಿದು ಕುಣಿದಾಡುವುದೊಂದೇ ಬಾಕಿಯಿತ್ತು. ಬಿಟಿವಿ, ಪವರ್ ಟಿವಿ, ಟಿವಿ5…. ಎಲ್ಲದರಲ್ಲೂ ‘370 ರದ್ದತಿಯ ದೇಶಭಕ್ತಿಯದ್ದೇ ಭರಾಟೆ.

ಇದೆಲ್ಲದರ ನಡುವೆ ವಿಭಿನ್ನವಾಗಿ ಕಾರ್ಯಕ್ರಮ ನಡೆಸಿ ಕೊಟ್ಟಿದ್ದು ರಾಜ್‍ನ್ಯೂಸ್‍ನ ಮಂಜುಳಾ ಮಾಸ್ತಿಕಟ್ಟೆಯವರೊಬ್ಬರೇ. ಅವರು ಕಾಶ್ಮೀರದ ಜನರ ಪ್ರಸ್ತುತ ಸಂಕಷ್ಟವನ್ನು ತೆರೆದಿಟ್ಟರಲ್ಲದೇ, ದೆಹಲಿ ಆಡಳಿತ ಕಾಶ್ಮೀರದ ಮೇಲೆ 70 ವರ್ಷಗಳಿಂದ ಎಸಗುತ್ತ ಬಂದಿರುವ ದೌರ್ಜನ್ಯವನ್ನು, ಈಗ ಅದನ್ನು ಮೀರಿಸುವಂತೆ ಬಿಜೆಪಿ-ಸಂಘ ಪರಿವಾರ ಕಾಶ್ಮೀರದ ಮೇಲೆ ಮಿಲಿಟರಿ ಆಡಳಿತವನ್ನು ಹೇರುತ್ತಿದೆ ಎಂಬುದನ್ನು ತಮ್ಮ ಪ್ರಶ್ನೆಗಳ ನಡು ನಡುವೆಯೇ ವಿವರಿಸುತ್ತ ಬಂದರು.

ದೇಶದ ಆರ್ಥಿಕತೆ ಎಕ್ಕ ಹಿಡಿದು ಹೋಗುತ್ತಿರುವಾಗ ಮತ್ತದೇ ಕಾಶ್ಮೀರ ಮತ್ತು ಪಾಕಿಸ್ತಾನವೇ ಇವರ ಬಂಡವಾಳವಾಯಿತೇ ಎಂಬ ಪ್ರಶ್ನೆಯನ್ನೂ ಈ ಚಾನೆಲ್‍ಗಳು ಕೇಳಿಕೊಳ್ಳಲಿಲ್ಲ. ಅಂದ ಹಾಗೆ ದೇಶದ ಆರ್ಥಿಕ ಸ್ಥಿತಿ ಸರಿಯಾಗಿಯೇ ಇದೆ ಎಂಬುದೇ ಅವುಗಳ ಅಭಿಪ್ರಾಯವೂ ಆಗಿದೆಯಲ್ಲ?

ಅಂದಂತೆ ಇದೇ ಚಾನೆಲ್‍ಗಳು ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಯಾಕಾಗ್ತಿಲ್ಲ ಎಂಬ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಅನ್ನಲು ಆಗಲ್ಲ, ಆ ಬಗ್ಗೆ ಅವು ವರದಿ ಮಾಡುತ್ತಿವೆ. ಎಲ್ಲ ದೆಹಲಿಯಲ್ಲೇ ನಿರ್ಧಾರವಾಗುತ್ತೆ ಎಂಬುದನ್ನು ಪಾಸಿಟಿವ್ ಎಂಬಂತೆ ಅವು ಬಿಂಬಿಸುತ್ತಿರುವುದು ನಾಚಿಕೆಗೇಡು. ಹಾಗೆಯೇ, ಕೇಂದ್ರದ ಇಬ್ಬರು ಐಎಎಸ್‍ಗಳನ್ನು ಇಲ್ಲಿ ನೇಮಿಸಲಾಗುತ್ತಂತೆ, ಅವರು ಸರ್ಕಾರದ ಮೇಲೆ ಹದ್ದಿನ ಕಣ್ಣು ಇಡುತ್ತಾರಂತೆ, ಇದು ಚಾಣಕ್ಯನ ತಂತ್ರವಂತೆ! ಇದು ಕೂಡ ಚಾನೆಲ್‍ಗಳ ಪಾಲಿಗೆ ಪಾಸಿಟಿವ್ ನ್ಯೂಸ್! ಜನರನ್ನು ಅವು ಹಾಗೆ ದಾರಿ ತಪ್ಪಿಸುತ್ತಲೂ ಇವೆ.

ಜನರಿಂದ ಚುನಾಯಿತ ಸರ್ಕಾರವೊಂದರ ಮೇಲೆ ಅಧಿಕಾರಿಗಳ ಮೂಲಕ ನಿಯಂತ್ರಣ ಸಾಧಿಸುವುದು ಈ ದೇಶದ ಒಕ್ಕೂಟ ವ್ಯವಸ್ಥೆಗೇ ಮಾಡಿದ ದ್ರೋಹ ಎಂಬ ಅರಿವು ಇದ್ದೂ ಈ ಚಾನೆಲ್‍ಗಳು ‘ಚಾಣಕ್ಯ’ನ ಪರ ನಿಲ್ಲುತ್ತವೆ ಅಂದರೆ, ಇವುಗಳ ಮಾಲಿಕರು ಅವನ ಮುಂದೆ ಮಂಡಿಯೂರಿ ಕುಳಿತಿದ್ದಾರೆ ಎಂದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ya,,,, absolutely u said it right,,, I always watch Raj news,,,,lts so humble channel,,& I really love the anchor Manjula,,,,& I watch NDTV India & NDTV that s it,, I don’t understand y people are mad about other godi media’s,,

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...