Homeಕರ್ನಾಟಕಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

ಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

- Advertisement -
- Advertisement -

ಈ ಮೂರು ದಿನ ತಲೆಚಿಟ್ಟು ಹಿಡಿಯುವಂತೆ ಕಾಶ್ಮೀರ, 370ನೇ ವಿಧಿ ರದ್ದು ಮತ್ತು ಮೋದಿ-ಶಾಗಳ ಐತಿಹಾಸಿಕ ಸಾಧನೆಯ ಬಗ್ಗೆ ಕನ್ನಡದ ಎಲ್ಲ ಚಾನೆಲ್‍ಗಳೂ ವರದಿ, ವಿಶೇಷ ಕಾರ್ಯಕ್ರಮ ಮತ್ತು ಪ್ಯಾನೆಲ್ ಡಿಸ್ಕಸನ್‍ಗಳನ್ನು ನಡೆಸಲಿವೆ. 370ನೇ ವಿಧಿ ರದ್ದು ಎಂಬುದಂತೂ ಅವುಗಳ ಪಾಲಿಗೆ ಪಂಚಮಿಯ ಉಂಡಿ, ಲಾಡೂಗಳನ್ನು ಸವಿದಷ್ಟೇ ಸುಖ ತಂದಿತ್ತು.

ಈ ವಿಷಯವಾಗಿ ಮೊದಲಿನಿಂದಲೂ ಆಗಾಗ ಕಾಶ್ಮೀರ ವಿಷಯದ ಕುರಿತು ಕಾಟಾಚಾರದ ಚರ್ಚೆ ನಡೆಸುತ್ತಿರುವ ಬಂದಿರುವ ಸುವರ್ಣದ ಅಜಿತ್ ಹನುಮಕ್ಕನವರಂತೂ ಕಾಶ್ಮೀರ ಸಮಸ್ಯೆಯ ಆಳ ಅಗಲ ಬಲ್ಲ ಕನ್ನಡಿಗ ತಾವೊಬ್ಬರೇ ಎಂಬಂತೆ, ಚರ್ಚೆಗೆ ಕರೆಸಿಕೊಂಡವರ ಮಾತುಗಳನ್ನೂ ಆಲಿಸದೇ ಕಾಶ್ಮೀರದ ಪುರಾಣವನ್ನು ಪಠಿಸುತ್ತ ಹೋದರು. ಅಜಿತ್ ಜಾಗದಲ್ಲಿ ಸಂಸದ ತೇಜಸ್ವಿ ಸೂರ್ಯರಿದ್ದರೂ ಈ ಪರಿಯ ಸಮರ್ಥನೆ ಸಾಧ್ಯವಿರುತ್ತಿರಲಿಲ್ಲವೇನೋ?

ಪಬ್ಲಿಕ್‍ನ ಹಿರಿಯ ರಂಗನಾಥರು ಕೂಡ ವಾಸ್ತವದ ಕಡೆ ಕಣ್ಣು ಹಾಯಿಸಲು (ಅವರಿಗೆ ಕಾಶ್ಮೀರ ಸಮಸ್ಯೆಯ ತಳಮಟ್ಟದ ವಿವರ ಗೊತ್ತಿದ್ದರೂ!) ಮನಸ್ಸು ಮಾಡಲಿಲ್ಲ. ನೋಟು ರದ್ದತಿಯನ್ನು ಬೆಂಬಲಿಸಿ ಚಿಪ್ ಸಂಶೋಧನೆ ಮಾಡಿದ ಪರಿಯಲ್ಲೇ ಇದರ ಬೆಂಬಲಕ್ಕೂ ನಿಂತರು. ಟಿವಿ 9ನ ರಂಗನಾಥ ಭಾರದ್ವಾಜರಂತೂ ಧ್ವಜ ಹಿಡಿದು ಕುಣಿದಾಡುವುದೊಂದೇ ಬಾಕಿಯಿತ್ತು. ಬಿಟಿವಿ, ಪವರ್ ಟಿವಿ, ಟಿವಿ5…. ಎಲ್ಲದರಲ್ಲೂ ‘370 ರದ್ದತಿಯ ದೇಶಭಕ್ತಿಯದ್ದೇ ಭರಾಟೆ.

ಇದೆಲ್ಲದರ ನಡುವೆ ವಿಭಿನ್ನವಾಗಿ ಕಾರ್ಯಕ್ರಮ ನಡೆಸಿ ಕೊಟ್ಟಿದ್ದು ರಾಜ್‍ನ್ಯೂಸ್‍ನ ಮಂಜುಳಾ ಮಾಸ್ತಿಕಟ್ಟೆಯವರೊಬ್ಬರೇ. ಅವರು ಕಾಶ್ಮೀರದ ಜನರ ಪ್ರಸ್ತುತ ಸಂಕಷ್ಟವನ್ನು ತೆರೆದಿಟ್ಟರಲ್ಲದೇ, ದೆಹಲಿ ಆಡಳಿತ ಕಾಶ್ಮೀರದ ಮೇಲೆ 70 ವರ್ಷಗಳಿಂದ ಎಸಗುತ್ತ ಬಂದಿರುವ ದೌರ್ಜನ್ಯವನ್ನು, ಈಗ ಅದನ್ನು ಮೀರಿಸುವಂತೆ ಬಿಜೆಪಿ-ಸಂಘ ಪರಿವಾರ ಕಾಶ್ಮೀರದ ಮೇಲೆ ಮಿಲಿಟರಿ ಆಡಳಿತವನ್ನು ಹೇರುತ್ತಿದೆ ಎಂಬುದನ್ನು ತಮ್ಮ ಪ್ರಶ್ನೆಗಳ ನಡು ನಡುವೆಯೇ ವಿವರಿಸುತ್ತ ಬಂದರು.

ದೇಶದ ಆರ್ಥಿಕತೆ ಎಕ್ಕ ಹಿಡಿದು ಹೋಗುತ್ತಿರುವಾಗ ಮತ್ತದೇ ಕಾಶ್ಮೀರ ಮತ್ತು ಪಾಕಿಸ್ತಾನವೇ ಇವರ ಬಂಡವಾಳವಾಯಿತೇ ಎಂಬ ಪ್ರಶ್ನೆಯನ್ನೂ ಈ ಚಾನೆಲ್‍ಗಳು ಕೇಳಿಕೊಳ್ಳಲಿಲ್ಲ. ಅಂದ ಹಾಗೆ ದೇಶದ ಆರ್ಥಿಕ ಸ್ಥಿತಿ ಸರಿಯಾಗಿಯೇ ಇದೆ ಎಂಬುದೇ ಅವುಗಳ ಅಭಿಪ್ರಾಯವೂ ಆಗಿದೆಯಲ್ಲ?

ಅಂದಂತೆ ಇದೇ ಚಾನೆಲ್‍ಗಳು ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಯಾಕಾಗ್ತಿಲ್ಲ ಎಂಬ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಅನ್ನಲು ಆಗಲ್ಲ, ಆ ಬಗ್ಗೆ ಅವು ವರದಿ ಮಾಡುತ್ತಿವೆ. ಎಲ್ಲ ದೆಹಲಿಯಲ್ಲೇ ನಿರ್ಧಾರವಾಗುತ್ತೆ ಎಂಬುದನ್ನು ಪಾಸಿಟಿವ್ ಎಂಬಂತೆ ಅವು ಬಿಂಬಿಸುತ್ತಿರುವುದು ನಾಚಿಕೆಗೇಡು. ಹಾಗೆಯೇ, ಕೇಂದ್ರದ ಇಬ್ಬರು ಐಎಎಸ್‍ಗಳನ್ನು ಇಲ್ಲಿ ನೇಮಿಸಲಾಗುತ್ತಂತೆ, ಅವರು ಸರ್ಕಾರದ ಮೇಲೆ ಹದ್ದಿನ ಕಣ್ಣು ಇಡುತ್ತಾರಂತೆ, ಇದು ಚಾಣಕ್ಯನ ತಂತ್ರವಂತೆ! ಇದು ಕೂಡ ಚಾನೆಲ್‍ಗಳ ಪಾಲಿಗೆ ಪಾಸಿಟಿವ್ ನ್ಯೂಸ್! ಜನರನ್ನು ಅವು ಹಾಗೆ ದಾರಿ ತಪ್ಪಿಸುತ್ತಲೂ ಇವೆ.

ಜನರಿಂದ ಚುನಾಯಿತ ಸರ್ಕಾರವೊಂದರ ಮೇಲೆ ಅಧಿಕಾರಿಗಳ ಮೂಲಕ ನಿಯಂತ್ರಣ ಸಾಧಿಸುವುದು ಈ ದೇಶದ ಒಕ್ಕೂಟ ವ್ಯವಸ್ಥೆಗೇ ಮಾಡಿದ ದ್ರೋಹ ಎಂಬ ಅರಿವು ಇದ್ದೂ ಈ ಚಾನೆಲ್‍ಗಳು ‘ಚಾಣಕ್ಯ’ನ ಪರ ನಿಲ್ಲುತ್ತವೆ ಅಂದರೆ, ಇವುಗಳ ಮಾಲಿಕರು ಅವನ ಮುಂದೆ ಮಂಡಿಯೂರಿ ಕುಳಿತಿದ್ದಾರೆ ಎಂದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ya,,,, absolutely u said it right,,, I always watch Raj news,,,,lts so humble channel,,& I really love the anchor Manjula,,,,& I watch NDTV India & NDTV that s it,, I don’t understand y people are mad about other godi media’s,,

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...