Homeಕರ್ನಾಟಕಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

ಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

- Advertisement -
- Advertisement -

ಈ ಮೂರು ದಿನ ತಲೆಚಿಟ್ಟು ಹಿಡಿಯುವಂತೆ ಕಾಶ್ಮೀರ, 370ನೇ ವಿಧಿ ರದ್ದು ಮತ್ತು ಮೋದಿ-ಶಾಗಳ ಐತಿಹಾಸಿಕ ಸಾಧನೆಯ ಬಗ್ಗೆ ಕನ್ನಡದ ಎಲ್ಲ ಚಾನೆಲ್‍ಗಳೂ ವರದಿ, ವಿಶೇಷ ಕಾರ್ಯಕ್ರಮ ಮತ್ತು ಪ್ಯಾನೆಲ್ ಡಿಸ್ಕಸನ್‍ಗಳನ್ನು ನಡೆಸಲಿವೆ. 370ನೇ ವಿಧಿ ರದ್ದು ಎಂಬುದಂತೂ ಅವುಗಳ ಪಾಲಿಗೆ ಪಂಚಮಿಯ ಉಂಡಿ, ಲಾಡೂಗಳನ್ನು ಸವಿದಷ್ಟೇ ಸುಖ ತಂದಿತ್ತು.

ಈ ವಿಷಯವಾಗಿ ಮೊದಲಿನಿಂದಲೂ ಆಗಾಗ ಕಾಶ್ಮೀರ ವಿಷಯದ ಕುರಿತು ಕಾಟಾಚಾರದ ಚರ್ಚೆ ನಡೆಸುತ್ತಿರುವ ಬಂದಿರುವ ಸುವರ್ಣದ ಅಜಿತ್ ಹನುಮಕ್ಕನವರಂತೂ ಕಾಶ್ಮೀರ ಸಮಸ್ಯೆಯ ಆಳ ಅಗಲ ಬಲ್ಲ ಕನ್ನಡಿಗ ತಾವೊಬ್ಬರೇ ಎಂಬಂತೆ, ಚರ್ಚೆಗೆ ಕರೆಸಿಕೊಂಡವರ ಮಾತುಗಳನ್ನೂ ಆಲಿಸದೇ ಕಾಶ್ಮೀರದ ಪುರಾಣವನ್ನು ಪಠಿಸುತ್ತ ಹೋದರು. ಅಜಿತ್ ಜಾಗದಲ್ಲಿ ಸಂಸದ ತೇಜಸ್ವಿ ಸೂರ್ಯರಿದ್ದರೂ ಈ ಪರಿಯ ಸಮರ್ಥನೆ ಸಾಧ್ಯವಿರುತ್ತಿರಲಿಲ್ಲವೇನೋ?

ಪಬ್ಲಿಕ್‍ನ ಹಿರಿಯ ರಂಗನಾಥರು ಕೂಡ ವಾಸ್ತವದ ಕಡೆ ಕಣ್ಣು ಹಾಯಿಸಲು (ಅವರಿಗೆ ಕಾಶ್ಮೀರ ಸಮಸ್ಯೆಯ ತಳಮಟ್ಟದ ವಿವರ ಗೊತ್ತಿದ್ದರೂ!) ಮನಸ್ಸು ಮಾಡಲಿಲ್ಲ. ನೋಟು ರದ್ದತಿಯನ್ನು ಬೆಂಬಲಿಸಿ ಚಿಪ್ ಸಂಶೋಧನೆ ಮಾಡಿದ ಪರಿಯಲ್ಲೇ ಇದರ ಬೆಂಬಲಕ್ಕೂ ನಿಂತರು. ಟಿವಿ 9ನ ರಂಗನಾಥ ಭಾರದ್ವಾಜರಂತೂ ಧ್ವಜ ಹಿಡಿದು ಕುಣಿದಾಡುವುದೊಂದೇ ಬಾಕಿಯಿತ್ತು. ಬಿಟಿವಿ, ಪವರ್ ಟಿವಿ, ಟಿವಿ5…. ಎಲ್ಲದರಲ್ಲೂ ‘370 ರದ್ದತಿಯ ದೇಶಭಕ್ತಿಯದ್ದೇ ಭರಾಟೆ.

ಇದೆಲ್ಲದರ ನಡುವೆ ವಿಭಿನ್ನವಾಗಿ ಕಾರ್ಯಕ್ರಮ ನಡೆಸಿ ಕೊಟ್ಟಿದ್ದು ರಾಜ್‍ನ್ಯೂಸ್‍ನ ಮಂಜುಳಾ ಮಾಸ್ತಿಕಟ್ಟೆಯವರೊಬ್ಬರೇ. ಅವರು ಕಾಶ್ಮೀರದ ಜನರ ಪ್ರಸ್ತುತ ಸಂಕಷ್ಟವನ್ನು ತೆರೆದಿಟ್ಟರಲ್ಲದೇ, ದೆಹಲಿ ಆಡಳಿತ ಕಾಶ್ಮೀರದ ಮೇಲೆ 70 ವರ್ಷಗಳಿಂದ ಎಸಗುತ್ತ ಬಂದಿರುವ ದೌರ್ಜನ್ಯವನ್ನು, ಈಗ ಅದನ್ನು ಮೀರಿಸುವಂತೆ ಬಿಜೆಪಿ-ಸಂಘ ಪರಿವಾರ ಕಾಶ್ಮೀರದ ಮೇಲೆ ಮಿಲಿಟರಿ ಆಡಳಿತವನ್ನು ಹೇರುತ್ತಿದೆ ಎಂಬುದನ್ನು ತಮ್ಮ ಪ್ರಶ್ನೆಗಳ ನಡು ನಡುವೆಯೇ ವಿವರಿಸುತ್ತ ಬಂದರು.

ದೇಶದ ಆರ್ಥಿಕತೆ ಎಕ್ಕ ಹಿಡಿದು ಹೋಗುತ್ತಿರುವಾಗ ಮತ್ತದೇ ಕಾಶ್ಮೀರ ಮತ್ತು ಪಾಕಿಸ್ತಾನವೇ ಇವರ ಬಂಡವಾಳವಾಯಿತೇ ಎಂಬ ಪ್ರಶ್ನೆಯನ್ನೂ ಈ ಚಾನೆಲ್‍ಗಳು ಕೇಳಿಕೊಳ್ಳಲಿಲ್ಲ. ಅಂದ ಹಾಗೆ ದೇಶದ ಆರ್ಥಿಕ ಸ್ಥಿತಿ ಸರಿಯಾಗಿಯೇ ಇದೆ ಎಂಬುದೇ ಅವುಗಳ ಅಭಿಪ್ರಾಯವೂ ಆಗಿದೆಯಲ್ಲ?

ಅಂದಂತೆ ಇದೇ ಚಾನೆಲ್‍ಗಳು ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಯಾಕಾಗ್ತಿಲ್ಲ ಎಂಬ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಅನ್ನಲು ಆಗಲ್ಲ, ಆ ಬಗ್ಗೆ ಅವು ವರದಿ ಮಾಡುತ್ತಿವೆ. ಎಲ್ಲ ದೆಹಲಿಯಲ್ಲೇ ನಿರ್ಧಾರವಾಗುತ್ತೆ ಎಂಬುದನ್ನು ಪಾಸಿಟಿವ್ ಎಂಬಂತೆ ಅವು ಬಿಂಬಿಸುತ್ತಿರುವುದು ನಾಚಿಕೆಗೇಡು. ಹಾಗೆಯೇ, ಕೇಂದ್ರದ ಇಬ್ಬರು ಐಎಎಸ್‍ಗಳನ್ನು ಇಲ್ಲಿ ನೇಮಿಸಲಾಗುತ್ತಂತೆ, ಅವರು ಸರ್ಕಾರದ ಮೇಲೆ ಹದ್ದಿನ ಕಣ್ಣು ಇಡುತ್ತಾರಂತೆ, ಇದು ಚಾಣಕ್ಯನ ತಂತ್ರವಂತೆ! ಇದು ಕೂಡ ಚಾನೆಲ್‍ಗಳ ಪಾಲಿಗೆ ಪಾಸಿಟಿವ್ ನ್ಯೂಸ್! ಜನರನ್ನು ಅವು ಹಾಗೆ ದಾರಿ ತಪ್ಪಿಸುತ್ತಲೂ ಇವೆ.

ಜನರಿಂದ ಚುನಾಯಿತ ಸರ್ಕಾರವೊಂದರ ಮೇಲೆ ಅಧಿಕಾರಿಗಳ ಮೂಲಕ ನಿಯಂತ್ರಣ ಸಾಧಿಸುವುದು ಈ ದೇಶದ ಒಕ್ಕೂಟ ವ್ಯವಸ್ಥೆಗೇ ಮಾಡಿದ ದ್ರೋಹ ಎಂಬ ಅರಿವು ಇದ್ದೂ ಈ ಚಾನೆಲ್‍ಗಳು ‘ಚಾಣಕ್ಯ’ನ ಪರ ನಿಲ್ಲುತ್ತವೆ ಅಂದರೆ, ಇವುಗಳ ಮಾಲಿಕರು ಅವನ ಮುಂದೆ ಮಂಡಿಯೂರಿ ಕುಳಿತಿದ್ದಾರೆ ಎಂದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ya,,,, absolutely u said it right,,, I always watch Raj news,,,,lts so humble channel,,& I really love the anchor Manjula,,,,& I watch NDTV India & NDTV that s it,, I don’t understand y people are mad about other godi media’s,,

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...