Homeಕರ್ನಾಟಕಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

ಚಾನೆಲ್ ಚಿತ್ರಾನ್ನ: ಕಾಶ್ಮೀರದಲ್ಲಿ ಟೆರರಿಸಂ ಅಂತ್ಯಗೊಳಿಸಿದ ಚಾನೆಲ್ಸ್

- Advertisement -
- Advertisement -

ಈ ಮೂರು ದಿನ ತಲೆಚಿಟ್ಟು ಹಿಡಿಯುವಂತೆ ಕಾಶ್ಮೀರ, 370ನೇ ವಿಧಿ ರದ್ದು ಮತ್ತು ಮೋದಿ-ಶಾಗಳ ಐತಿಹಾಸಿಕ ಸಾಧನೆಯ ಬಗ್ಗೆ ಕನ್ನಡದ ಎಲ್ಲ ಚಾನೆಲ್‍ಗಳೂ ವರದಿ, ವಿಶೇಷ ಕಾರ್ಯಕ್ರಮ ಮತ್ತು ಪ್ಯಾನೆಲ್ ಡಿಸ್ಕಸನ್‍ಗಳನ್ನು ನಡೆಸಲಿವೆ. 370ನೇ ವಿಧಿ ರದ್ದು ಎಂಬುದಂತೂ ಅವುಗಳ ಪಾಲಿಗೆ ಪಂಚಮಿಯ ಉಂಡಿ, ಲಾಡೂಗಳನ್ನು ಸವಿದಷ್ಟೇ ಸುಖ ತಂದಿತ್ತು.

ಈ ವಿಷಯವಾಗಿ ಮೊದಲಿನಿಂದಲೂ ಆಗಾಗ ಕಾಶ್ಮೀರ ವಿಷಯದ ಕುರಿತು ಕಾಟಾಚಾರದ ಚರ್ಚೆ ನಡೆಸುತ್ತಿರುವ ಬಂದಿರುವ ಸುವರ್ಣದ ಅಜಿತ್ ಹನುಮಕ್ಕನವರಂತೂ ಕಾಶ್ಮೀರ ಸಮಸ್ಯೆಯ ಆಳ ಅಗಲ ಬಲ್ಲ ಕನ್ನಡಿಗ ತಾವೊಬ್ಬರೇ ಎಂಬಂತೆ, ಚರ್ಚೆಗೆ ಕರೆಸಿಕೊಂಡವರ ಮಾತುಗಳನ್ನೂ ಆಲಿಸದೇ ಕಾಶ್ಮೀರದ ಪುರಾಣವನ್ನು ಪಠಿಸುತ್ತ ಹೋದರು. ಅಜಿತ್ ಜಾಗದಲ್ಲಿ ಸಂಸದ ತೇಜಸ್ವಿ ಸೂರ್ಯರಿದ್ದರೂ ಈ ಪರಿಯ ಸಮರ್ಥನೆ ಸಾಧ್ಯವಿರುತ್ತಿರಲಿಲ್ಲವೇನೋ?

ಪಬ್ಲಿಕ್‍ನ ಹಿರಿಯ ರಂಗನಾಥರು ಕೂಡ ವಾಸ್ತವದ ಕಡೆ ಕಣ್ಣು ಹಾಯಿಸಲು (ಅವರಿಗೆ ಕಾಶ್ಮೀರ ಸಮಸ್ಯೆಯ ತಳಮಟ್ಟದ ವಿವರ ಗೊತ್ತಿದ್ದರೂ!) ಮನಸ್ಸು ಮಾಡಲಿಲ್ಲ. ನೋಟು ರದ್ದತಿಯನ್ನು ಬೆಂಬಲಿಸಿ ಚಿಪ್ ಸಂಶೋಧನೆ ಮಾಡಿದ ಪರಿಯಲ್ಲೇ ಇದರ ಬೆಂಬಲಕ್ಕೂ ನಿಂತರು. ಟಿವಿ 9ನ ರಂಗನಾಥ ಭಾರದ್ವಾಜರಂತೂ ಧ್ವಜ ಹಿಡಿದು ಕುಣಿದಾಡುವುದೊಂದೇ ಬಾಕಿಯಿತ್ತು. ಬಿಟಿವಿ, ಪವರ್ ಟಿವಿ, ಟಿವಿ5…. ಎಲ್ಲದರಲ್ಲೂ ‘370 ರದ್ದತಿಯ ದೇಶಭಕ್ತಿಯದ್ದೇ ಭರಾಟೆ.

ಇದೆಲ್ಲದರ ನಡುವೆ ವಿಭಿನ್ನವಾಗಿ ಕಾರ್ಯಕ್ರಮ ನಡೆಸಿ ಕೊಟ್ಟಿದ್ದು ರಾಜ್‍ನ್ಯೂಸ್‍ನ ಮಂಜುಳಾ ಮಾಸ್ತಿಕಟ್ಟೆಯವರೊಬ್ಬರೇ. ಅವರು ಕಾಶ್ಮೀರದ ಜನರ ಪ್ರಸ್ತುತ ಸಂಕಷ್ಟವನ್ನು ತೆರೆದಿಟ್ಟರಲ್ಲದೇ, ದೆಹಲಿ ಆಡಳಿತ ಕಾಶ್ಮೀರದ ಮೇಲೆ 70 ವರ್ಷಗಳಿಂದ ಎಸಗುತ್ತ ಬಂದಿರುವ ದೌರ್ಜನ್ಯವನ್ನು, ಈಗ ಅದನ್ನು ಮೀರಿಸುವಂತೆ ಬಿಜೆಪಿ-ಸಂಘ ಪರಿವಾರ ಕಾಶ್ಮೀರದ ಮೇಲೆ ಮಿಲಿಟರಿ ಆಡಳಿತವನ್ನು ಹೇರುತ್ತಿದೆ ಎಂಬುದನ್ನು ತಮ್ಮ ಪ್ರಶ್ನೆಗಳ ನಡು ನಡುವೆಯೇ ವಿವರಿಸುತ್ತ ಬಂದರು.

ದೇಶದ ಆರ್ಥಿಕತೆ ಎಕ್ಕ ಹಿಡಿದು ಹೋಗುತ್ತಿರುವಾಗ ಮತ್ತದೇ ಕಾಶ್ಮೀರ ಮತ್ತು ಪಾಕಿಸ್ತಾನವೇ ಇವರ ಬಂಡವಾಳವಾಯಿತೇ ಎಂಬ ಪ್ರಶ್ನೆಯನ್ನೂ ಈ ಚಾನೆಲ್‍ಗಳು ಕೇಳಿಕೊಳ್ಳಲಿಲ್ಲ. ಅಂದ ಹಾಗೆ ದೇಶದ ಆರ್ಥಿಕ ಸ್ಥಿತಿ ಸರಿಯಾಗಿಯೇ ಇದೆ ಎಂಬುದೇ ಅವುಗಳ ಅಭಿಪ್ರಾಯವೂ ಆಗಿದೆಯಲ್ಲ?

ಅಂದಂತೆ ಇದೇ ಚಾನೆಲ್‍ಗಳು ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಯಾಕಾಗ್ತಿಲ್ಲ ಎಂಬ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಅನ್ನಲು ಆಗಲ್ಲ, ಆ ಬಗ್ಗೆ ಅವು ವರದಿ ಮಾಡುತ್ತಿವೆ. ಎಲ್ಲ ದೆಹಲಿಯಲ್ಲೇ ನಿರ್ಧಾರವಾಗುತ್ತೆ ಎಂಬುದನ್ನು ಪಾಸಿಟಿವ್ ಎಂಬಂತೆ ಅವು ಬಿಂಬಿಸುತ್ತಿರುವುದು ನಾಚಿಕೆಗೇಡು. ಹಾಗೆಯೇ, ಕೇಂದ್ರದ ಇಬ್ಬರು ಐಎಎಸ್‍ಗಳನ್ನು ಇಲ್ಲಿ ನೇಮಿಸಲಾಗುತ್ತಂತೆ, ಅವರು ಸರ್ಕಾರದ ಮೇಲೆ ಹದ್ದಿನ ಕಣ್ಣು ಇಡುತ್ತಾರಂತೆ, ಇದು ಚಾಣಕ್ಯನ ತಂತ್ರವಂತೆ! ಇದು ಕೂಡ ಚಾನೆಲ್‍ಗಳ ಪಾಲಿಗೆ ಪಾಸಿಟಿವ್ ನ್ಯೂಸ್! ಜನರನ್ನು ಅವು ಹಾಗೆ ದಾರಿ ತಪ್ಪಿಸುತ್ತಲೂ ಇವೆ.

ಜನರಿಂದ ಚುನಾಯಿತ ಸರ್ಕಾರವೊಂದರ ಮೇಲೆ ಅಧಿಕಾರಿಗಳ ಮೂಲಕ ನಿಯಂತ್ರಣ ಸಾಧಿಸುವುದು ಈ ದೇಶದ ಒಕ್ಕೂಟ ವ್ಯವಸ್ಥೆಗೇ ಮಾಡಿದ ದ್ರೋಹ ಎಂಬ ಅರಿವು ಇದ್ದೂ ಈ ಚಾನೆಲ್‍ಗಳು ‘ಚಾಣಕ್ಯ’ನ ಪರ ನಿಲ್ಲುತ್ತವೆ ಅಂದರೆ, ಇವುಗಳ ಮಾಲಿಕರು ಅವನ ಮುಂದೆ ಮಂಡಿಯೂರಿ ಕುಳಿತಿದ್ದಾರೆ ಎಂದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ya,,,, absolutely u said it right,,, I always watch Raj news,,,,lts so humble channel,,& I really love the anchor Manjula,,,,& I watch NDTV India & NDTV that s it,, I don’t understand y people are mad about other godi media’s,,

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...