Homeಮುಖಪುಟಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

ಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

- Advertisement -
- Advertisement -

“ನಮ್ಮ ಮನೆಗೆ ಕಾಲಿಂಗ್ ಬೆಲ್ ಅವಶ್ಯಕತೆಯೇ ಇಲ್ಲ. ಬಂದವರು ‘ಮೋದಿ ಮೋದಿ’ ಎಂದು ಕೂಗಿದರೆ ಸಾಕು ನಾವು ಬಾಗಿಲು ತೆರೆಯುತ್ತೇವೆ”. ಮನೆಯ ಮುಂದೆ ಅಂಟಿಸಿದ್ದ ಹೀಗೊಂದು ಪೋಸ್ಟರ್ ಕೆಲದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಕೆಲ ಬಿಜೆಪಿಗರು ತಮ್ಮ ಕ್ರೆಡಿಟ್‍ಗಾಗಿಯೂ ಬಳಸಿದ್ದರು. ಈಗ ಅದೇ ಐಡಿಯಾ ಬಳಸಿಕೊಂಡು ‘ಮೋದಿ ಮೋದಿ’ ಎಂಬ ಪದ ಲಕ್ಷಾಂತರ ರೂ ಕಳ್ಳತನಕ್ಕೆ ಅವಕಾಶವಾಗಿದೆ ಎಂದರೆ ನೀವು ನಂಬಲೇಬೇಕು.

ಬಿಹಾರದ ಶಿವಾನ್‍ನಲ್ಲಿ ಈ ರೀತಿಯ ಆಶ್ಚರ್ಯಕರ ಘಟನೆ ಜರುಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಾಣಾಕ್ಷ ಡಕಾಯಿತರು ರಾತ್ರಿ ವೇಳೆ ಮನೆ ಮುಂದೆ ನಿಂತು ‘ಮೋದಿ ಮೋದಿ’ ಎಂದೂ ಕೂಗಿದ್ದಾರೆ. ಆ ಮನೆಯವರು ಯಾರೋ ಬಿಜೆಪಿಯವರು ಬಂದಿರಬೇಕೆಂದು ಬಾಗಿಲು ತೆರೆದಿದ್ದೆ ತಡ, ಒಳನುಗ್ಗಿದ ಡಕಾಯಿತರು ಲೂಟಿ ಮಾಡಿದ್ದಲ್ಲದೇ ಪ್ರತಿರೋಧ ವ್ಯಕ್ತಪಡಿಸಿದ ಮನೆಯವರಿಗೆ ಥಳಿಸಿದ್ದಾರೆ.

ಶಿವಾನ್‍ನ ಗುರ್ಗಾತ್ ಪ್ರದೇಶದ ಸ್ಥಳೀಯ ಪೊಲೀಸ್ ಠಾಣೆಯ ಹತ್ತಿರದಲ್ಲೇ ಈ ಘಟನೆ ನಡೆದಿರುವುದು ಇನ್ನೂ ಕುತೂಹಲವಾಗಿದೆ. “ಮೋದಿ ಮೋದಿ ಎಂಬ ಶಬ್ದ ಕೇಳಿದಾಗ, ಬಿಜೆಪಿಯ ಕಾರ್ಯಕರ್ತರಿರಬೇಕು ಓಟು ಕೇಳು ಬಂದಿದ್ದಾರೆ ಎಂದು ತಿಳಿದು ಬಾಗಿಲು ತೆಗೆದೆವು. ಆದರೆ ನಮಗೆ ಅಘಾತವಾಯಿತು. ಒಳನುಗ್ಗಿದ ಅವರು ಎಲ್ಲರಿಗೂ ಥಳಿಸಿರು, ನಮ್ಮ ಕಣ್ಣೆದುರಿಗೆ ಲಕ್ಷಾಂತರ ರೂಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದರು. ಇದರಿಂದ ನಮ್ಮ ಕುಟುಂಬದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ”. ಎನ್ನುತ್ತಾರೆ ಮನೆಯ ನಿವಾಸಿ ಉಪೇಂದ್ರ ರಾಜ್‍ರವರು.

ಕರ್ತವ್ಯನಿರತ ಶಿವಾನ್ ಪೊಲೀಸ್ ಅಧಿಕಾರಿ ಸಂತ್ರಸ್ತ ಕುಟುಂಬದ ಹೇಳಿಕೆಗಳನ್ನು ಪಡೆದು ಪ್ರಕರಣ ದಾಖಲಿಸಿಕೊಂಡು ‘ಮೋದಿ ಮೋದಿ’ ಎಂದು ಕೂಗುತ್ತಿದ್ದ ಮತ್ತು ಕೂಗುತ್ತಿರುವವರ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದುವರೆಗೂ ಈ ಪ್ರಕರಣದ ಕುರಿತು ಯಾರನ್ನು ಬಂಧಿಸಿಲ್ಲ.

ಮೋದಿ ಮೋದಿ ಎಂಬ ಎಂಬ ಪದ ಇಷ್ಟೆಲ್ಲಾ ರಾಧ್ದಾಂತಗಳಿಗೆ ಕಾರಣವಾಗುತ್ತದೆ ಎಂದು ನಾವ್ಯಾರೂ ಊಹಿಸಿರಲಿಲ್ಲ. ಈ ವಿಚಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವಾರು ತಮಾಷೆಯ ಜೋಕ್‍ಗಳು ಹರಿದಾಡುತ್ತಿವೆ. ಈ ಘಟನೆ ಮುಂಚೆ ಮನೆ ಬಾಗಿಲಿಗೆ ಮೋದಿ ಮೋದಿ ಎಂಬ ಪೋಸ್ಟರ್ ಅನ್ನು ಷೇರ್ ಮಾಡಿದವರನ್ನು ಪೇಚಿಗೆ ಸಿಲುಕಿಸಿದೆ.

ಇದನ್ನು ಓದಿ: ಬಿಜೆಪಿ ಪೋಸ್ಟ್ ಅನ್ನು ಯಥಾವತ್ತು ಕಾಪಿ ಪೇಸ್ಟ್ ಮಾಡಿದರೆ 3ರೂ, ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ 100ರೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...