Homeಮುಖಪುಟಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

ಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

- Advertisement -
- Advertisement -

“ನಮ್ಮ ಮನೆಗೆ ಕಾಲಿಂಗ್ ಬೆಲ್ ಅವಶ್ಯಕತೆಯೇ ಇಲ್ಲ. ಬಂದವರು ‘ಮೋದಿ ಮೋದಿ’ ಎಂದು ಕೂಗಿದರೆ ಸಾಕು ನಾವು ಬಾಗಿಲು ತೆರೆಯುತ್ತೇವೆ”. ಮನೆಯ ಮುಂದೆ ಅಂಟಿಸಿದ್ದ ಹೀಗೊಂದು ಪೋಸ್ಟರ್ ಕೆಲದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಕೆಲ ಬಿಜೆಪಿಗರು ತಮ್ಮ ಕ್ರೆಡಿಟ್‍ಗಾಗಿಯೂ ಬಳಸಿದ್ದರು. ಈಗ ಅದೇ ಐಡಿಯಾ ಬಳಸಿಕೊಂಡು ‘ಮೋದಿ ಮೋದಿ’ ಎಂಬ ಪದ ಲಕ್ಷಾಂತರ ರೂ ಕಳ್ಳತನಕ್ಕೆ ಅವಕಾಶವಾಗಿದೆ ಎಂದರೆ ನೀವು ನಂಬಲೇಬೇಕು.

ಬಿಹಾರದ ಶಿವಾನ್‍ನಲ್ಲಿ ಈ ರೀತಿಯ ಆಶ್ಚರ್ಯಕರ ಘಟನೆ ಜರುಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಾಣಾಕ್ಷ ಡಕಾಯಿತರು ರಾತ್ರಿ ವೇಳೆ ಮನೆ ಮುಂದೆ ನಿಂತು ‘ಮೋದಿ ಮೋದಿ’ ಎಂದೂ ಕೂಗಿದ್ದಾರೆ. ಆ ಮನೆಯವರು ಯಾರೋ ಬಿಜೆಪಿಯವರು ಬಂದಿರಬೇಕೆಂದು ಬಾಗಿಲು ತೆರೆದಿದ್ದೆ ತಡ, ಒಳನುಗ್ಗಿದ ಡಕಾಯಿತರು ಲೂಟಿ ಮಾಡಿದ್ದಲ್ಲದೇ ಪ್ರತಿರೋಧ ವ್ಯಕ್ತಪಡಿಸಿದ ಮನೆಯವರಿಗೆ ಥಳಿಸಿದ್ದಾರೆ.

ಶಿವಾನ್‍ನ ಗುರ್ಗಾತ್ ಪ್ರದೇಶದ ಸ್ಥಳೀಯ ಪೊಲೀಸ್ ಠಾಣೆಯ ಹತ್ತಿರದಲ್ಲೇ ಈ ಘಟನೆ ನಡೆದಿರುವುದು ಇನ್ನೂ ಕುತೂಹಲವಾಗಿದೆ. “ಮೋದಿ ಮೋದಿ ಎಂಬ ಶಬ್ದ ಕೇಳಿದಾಗ, ಬಿಜೆಪಿಯ ಕಾರ್ಯಕರ್ತರಿರಬೇಕು ಓಟು ಕೇಳು ಬಂದಿದ್ದಾರೆ ಎಂದು ತಿಳಿದು ಬಾಗಿಲು ತೆಗೆದೆವು. ಆದರೆ ನಮಗೆ ಅಘಾತವಾಯಿತು. ಒಳನುಗ್ಗಿದ ಅವರು ಎಲ್ಲರಿಗೂ ಥಳಿಸಿರು, ನಮ್ಮ ಕಣ್ಣೆದುರಿಗೆ ಲಕ್ಷಾಂತರ ರೂಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದರು. ಇದರಿಂದ ನಮ್ಮ ಕುಟುಂಬದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ”. ಎನ್ನುತ್ತಾರೆ ಮನೆಯ ನಿವಾಸಿ ಉಪೇಂದ್ರ ರಾಜ್‍ರವರು.

ಕರ್ತವ್ಯನಿರತ ಶಿವಾನ್ ಪೊಲೀಸ್ ಅಧಿಕಾರಿ ಸಂತ್ರಸ್ತ ಕುಟುಂಬದ ಹೇಳಿಕೆಗಳನ್ನು ಪಡೆದು ಪ್ರಕರಣ ದಾಖಲಿಸಿಕೊಂಡು ‘ಮೋದಿ ಮೋದಿ’ ಎಂದು ಕೂಗುತ್ತಿದ್ದ ಮತ್ತು ಕೂಗುತ್ತಿರುವವರ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದುವರೆಗೂ ಈ ಪ್ರಕರಣದ ಕುರಿತು ಯಾರನ್ನು ಬಂಧಿಸಿಲ್ಲ.

ಮೋದಿ ಮೋದಿ ಎಂಬ ಎಂಬ ಪದ ಇಷ್ಟೆಲ್ಲಾ ರಾಧ್ದಾಂತಗಳಿಗೆ ಕಾರಣವಾಗುತ್ತದೆ ಎಂದು ನಾವ್ಯಾರೂ ಊಹಿಸಿರಲಿಲ್ಲ. ಈ ವಿಚಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವಾರು ತಮಾಷೆಯ ಜೋಕ್‍ಗಳು ಹರಿದಾಡುತ್ತಿವೆ. ಈ ಘಟನೆ ಮುಂಚೆ ಮನೆ ಬಾಗಿಲಿಗೆ ಮೋದಿ ಮೋದಿ ಎಂಬ ಪೋಸ್ಟರ್ ಅನ್ನು ಷೇರ್ ಮಾಡಿದವರನ್ನು ಪೇಚಿಗೆ ಸಿಲುಕಿಸಿದೆ.

ಇದನ್ನು ಓದಿ: ಬಿಜೆಪಿ ಪೋಸ್ಟ್ ಅನ್ನು ಯಥಾವತ್ತು ಕಾಪಿ ಪೇಸ್ಟ್ ಮಾಡಿದರೆ 3ರೂ, ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ 100ರೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...