Homeಮುಖಪುಟಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

ಮೋದಿ ಮೋದಿ ಎಂದು ಕೂಗಿ ಲಕ್ಷಾಂತರ ಹಣ ದೋಚಿದ ಡಕಾಯಿತರು

- Advertisement -
- Advertisement -

“ನಮ್ಮ ಮನೆಗೆ ಕಾಲಿಂಗ್ ಬೆಲ್ ಅವಶ್ಯಕತೆಯೇ ಇಲ್ಲ. ಬಂದವರು ‘ಮೋದಿ ಮೋದಿ’ ಎಂದು ಕೂಗಿದರೆ ಸಾಕು ನಾವು ಬಾಗಿಲು ತೆರೆಯುತ್ತೇವೆ”. ಮನೆಯ ಮುಂದೆ ಅಂಟಿಸಿದ್ದ ಹೀಗೊಂದು ಪೋಸ್ಟರ್ ಕೆಲದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಕೆಲ ಬಿಜೆಪಿಗರು ತಮ್ಮ ಕ್ರೆಡಿಟ್‍ಗಾಗಿಯೂ ಬಳಸಿದ್ದರು. ಈಗ ಅದೇ ಐಡಿಯಾ ಬಳಸಿಕೊಂಡು ‘ಮೋದಿ ಮೋದಿ’ ಎಂಬ ಪದ ಲಕ್ಷಾಂತರ ರೂ ಕಳ್ಳತನಕ್ಕೆ ಅವಕಾಶವಾಗಿದೆ ಎಂದರೆ ನೀವು ನಂಬಲೇಬೇಕು.

ಬಿಹಾರದ ಶಿವಾನ್‍ನಲ್ಲಿ ಈ ರೀತಿಯ ಆಶ್ಚರ್ಯಕರ ಘಟನೆ ಜರುಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಾಣಾಕ್ಷ ಡಕಾಯಿತರು ರಾತ್ರಿ ವೇಳೆ ಮನೆ ಮುಂದೆ ನಿಂತು ‘ಮೋದಿ ಮೋದಿ’ ಎಂದೂ ಕೂಗಿದ್ದಾರೆ. ಆ ಮನೆಯವರು ಯಾರೋ ಬಿಜೆಪಿಯವರು ಬಂದಿರಬೇಕೆಂದು ಬಾಗಿಲು ತೆರೆದಿದ್ದೆ ತಡ, ಒಳನುಗ್ಗಿದ ಡಕಾಯಿತರು ಲೂಟಿ ಮಾಡಿದ್ದಲ್ಲದೇ ಪ್ರತಿರೋಧ ವ್ಯಕ್ತಪಡಿಸಿದ ಮನೆಯವರಿಗೆ ಥಳಿಸಿದ್ದಾರೆ.

ಶಿವಾನ್‍ನ ಗುರ್ಗಾತ್ ಪ್ರದೇಶದ ಸ್ಥಳೀಯ ಪೊಲೀಸ್ ಠಾಣೆಯ ಹತ್ತಿರದಲ್ಲೇ ಈ ಘಟನೆ ನಡೆದಿರುವುದು ಇನ್ನೂ ಕುತೂಹಲವಾಗಿದೆ. “ಮೋದಿ ಮೋದಿ ಎಂಬ ಶಬ್ದ ಕೇಳಿದಾಗ, ಬಿಜೆಪಿಯ ಕಾರ್ಯಕರ್ತರಿರಬೇಕು ಓಟು ಕೇಳು ಬಂದಿದ್ದಾರೆ ಎಂದು ತಿಳಿದು ಬಾಗಿಲು ತೆಗೆದೆವು. ಆದರೆ ನಮಗೆ ಅಘಾತವಾಯಿತು. ಒಳನುಗ್ಗಿದ ಅವರು ಎಲ್ಲರಿಗೂ ಥಳಿಸಿರು, ನಮ್ಮ ಕಣ್ಣೆದುರಿಗೆ ಲಕ್ಷಾಂತರ ರೂಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದರು. ಇದರಿಂದ ನಮ್ಮ ಕುಟುಂಬದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ”. ಎನ್ನುತ್ತಾರೆ ಮನೆಯ ನಿವಾಸಿ ಉಪೇಂದ್ರ ರಾಜ್‍ರವರು.

ಕರ್ತವ್ಯನಿರತ ಶಿವಾನ್ ಪೊಲೀಸ್ ಅಧಿಕಾರಿ ಸಂತ್ರಸ್ತ ಕುಟುಂಬದ ಹೇಳಿಕೆಗಳನ್ನು ಪಡೆದು ಪ್ರಕರಣ ದಾಖಲಿಸಿಕೊಂಡು ‘ಮೋದಿ ಮೋದಿ’ ಎಂದು ಕೂಗುತ್ತಿದ್ದ ಮತ್ತು ಕೂಗುತ್ತಿರುವವರ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದುವರೆಗೂ ಈ ಪ್ರಕರಣದ ಕುರಿತು ಯಾರನ್ನು ಬಂಧಿಸಿಲ್ಲ.

ಮೋದಿ ಮೋದಿ ಎಂಬ ಎಂಬ ಪದ ಇಷ್ಟೆಲ್ಲಾ ರಾಧ್ದಾಂತಗಳಿಗೆ ಕಾರಣವಾಗುತ್ತದೆ ಎಂದು ನಾವ್ಯಾರೂ ಊಹಿಸಿರಲಿಲ್ಲ. ಈ ವಿಚಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವಾರು ತಮಾಷೆಯ ಜೋಕ್‍ಗಳು ಹರಿದಾಡುತ್ತಿವೆ. ಈ ಘಟನೆ ಮುಂಚೆ ಮನೆ ಬಾಗಿಲಿಗೆ ಮೋದಿ ಮೋದಿ ಎಂಬ ಪೋಸ್ಟರ್ ಅನ್ನು ಷೇರ್ ಮಾಡಿದವರನ್ನು ಪೇಚಿಗೆ ಸಿಲುಕಿಸಿದೆ.

ಇದನ್ನು ಓದಿ: ಬಿಜೆಪಿ ಪೋಸ್ಟ್ ಅನ್ನು ಯಥಾವತ್ತು ಕಾಪಿ ಪೇಸ್ಟ್ ಮಾಡಿದರೆ 3ರೂ, ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ 100ರೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...