Homeಮುಖಪುಟಚನ್ನಗಿರಿ ಬಿಜೆಪಿ ರೋಡ್‌ಶೋನಲ್ಲಿ ಗಲಾಟೆ: ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ಮೊಟಕು

ಚನ್ನಗಿರಿ ಬಿಜೆಪಿ ರೋಡ್‌ಶೋನಲ್ಲಿ ಗಲಾಟೆ: ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ಮೊಟಕು

- Advertisement -
- Advertisement -

ಭಾನುವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಭಾಗವಾಗಿ ನಡೆಯುತ್ತಿದ್ದ ಬಿಜೆಪಿ ರೋಡ್‌ಶೋ ವೇಳೆ ಬಿಜೆಪಿಯ ಎರಡು ಬಣಗಳ ನಡುವೆ ಗಲಾಟೆ ನಡೆದ ಪರಿಣಾಮ ರೋಡ್‌ ಶೋ ಮತ್ತು ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

ಇತ್ತೀಚಿಗೆ ಭಾರೀ ಭ್ರಷ್ಟಾಚಾರ ನಡೆಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಮತ್ತು ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್ ಬಣದ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿ, ಕೈಕೈ ಮಿಲಾಯಿಸಿದ ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದ ನಂತರ ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಶಿವಕುಮಾರ್‌ರವರು ತಮಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ ಭ್ರಷ್ಟಾಚಾರದ ಪ್ರಮುಖ ಆರೋಪಿ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದಾರೆ.

ಭಾನುವಾರ ಚನ್ನಗಿರಿಯಲ್ಲಿ ನಡೆಯುತ್ತಿದ್ದ ವಿಜಯ ಸಂಕಲ್ಪ ಯಾತ್ರೆ ರೋಡ್‌ ಶೋನಲ್ಲಿ ಜಿಲ್ಲೆಯ ಸಂಸದ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಎಂಎಲ್‌ಸಿ ರವಿಕುಮಾರ್ ಮತ್ತು ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಭಾಗವಹಿಸಿದ್ದರು. ಪ್ರಚಾರ ವಾಹನದಲ್ಲಿ ಮಲ್ಲಿಕಾರ್ಜುನ್ ಇದ್ದುದರಿಂದ ನಮ್ಮ ನಾಯಕರಿಗೂ ಅವಕಾಶ ನೀಡಬೇಕೆಂದು ಶಿವಕುಮಾರ್ ಬಣದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಅದಕ್ಕೆ ಅಲ್ಲಿದ್ದವರು ಸೊಪ್ಪು ಹಾಕದಿದ್ದಾಗ ಗಲಾಟೆ ಆರಂಭವಾಗಿದೆ. ರೋಡ್‌ ಶೋ ತಡೆಯಲಾಗಿದೆ.

ಇದರಿಂದ ಸಿಟ್ಟಿಗೆದ್ದ ಸಂಸದ ಜಿ.ಎಂ ಸಿದ್ದೇಶ್ವರ ರೋಡ್‌ ಶೋ ನಿಲ್ಲಿಸಿ ಕಾರು ಹತ್ತಿದ್ದಾರೆ. ಅಲ್ಲಿಗೂ ಲಗ್ಗೆಯಿಟ್ಟ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದರ ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಫ್ಲೆಕ್ಸ್ ಪೈಪೋಟಿ

ಇನ್ನು ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಫ್ಲೆಕ್ಸ್‌ ಪೈಪೋಟಿ ಆರಂಭವಾಗಿದೆ. ಶಿವಕುಮಾರ್ ಮತ್ತು ಮಾಡಾಳ್ ವಿರೂಪಾಕ್ಷಪ್ಪ ಬಣದವರು ವಿಜಯ ಸಂಕಲ್ಪ ಯಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ. ಶಿವಕುಮಾರ್‌ರವರ ಫ್ಲೆಕ್ಸ್ ಹರಿದಿದ್ದು ಗಲಾಟೆಗೆ ತಾರಕಕ್ಕೇರಲು ಕಾರಣವಾಗಿದೆ.

ಈ ಕುರಿತು ಟೀಕಿಸಿರುವ ಕಾಂಗ್ರೆಸ್, “ಬಿಜೆಪಿಯ “U ಟರ್ನ್ ಸಂಕಲ್ಪ ಯಾತ್ರೆ” ಮುಂದುವರೆದಿದೆ! ಈಗ ಚನ್ನಾಗಿರಿಯಲ್ಲೂ ಬಿಜೆಪಿ ನಾಯಕರು ಯಾತ್ರೆ ನಡೆಸಲಾಗದೆ U ಟರ್ನ್ ಮಾಡಿಕೊಂಡು ವಾಪಸಾಗಿದ್ದಾರೆ. ಕಾರ್ಯಕರ್ತರೇ ಯಾತ್ರೆ ತಡೆಯುವ ಮೂಲಕ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಕಲಹ ಮತ್ತೊಂದು ಹಂತಕ್ಕೆ ಮೇಲೇರಿದೆ! ಜನಾಕ್ರೋಶ ಇರಲಿ, ಕಾರ್ಯಕರ್ತರ ಆಕ್ರೋಶವನ್ನೇ ಎದುರಿಸಲು ಬಿಜೆಪಿಗೆ ಶಕ್ತಿ ಇಲ್ಲ” ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದೆ.

ಇದನ್ನೂ ಓದಿ; ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...