Homeಅಂತರಾಷ್ಟ್ರೀಯಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

ಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

- Advertisement -
- Advertisement -

ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್‌, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್‌ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯು ಸರ್ಬಿಯಾದ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸಿದೆ. ಅಲ್ಲಿನ ಸರ್ಕಾರ ಹಲವು ತಿಂಗಳುಗಳಿಂದ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಇಕ್ಕಟ್ಟಿಗೆ ಸಿಲುಕಿದೆ.

ಸಂಸತ್‌ನಲ್ಲಿ ಆಗಿದ್ದೇನು?

ಮಂಗಳವಾರ ಸಂಸತ್ತಿನ ಅಧಿವೇಶನ ಪ್ರಾರಂಭವಾದಾಗ, ಸರ್ಬಿಯನ್ ಪ್ರೋಗ್ರೆಸ್ಸಿವ್ ಪಾರ್ಟಿ (ಎಸ್‌ಎನ್‌ಎಸ್) ನೇತೃತ್ವದ ಆಡಳಿತ ಪಕ್ಷವು ಕಾರ್ಯಸೂಚಿಯನ್ನು ಅನುಮೋದಿಸಿದ ನಂತರ, ಕೆಲವು ವಿರೋಧ ಪಕ್ಷದ ನಾಯಕರು ತಮ್ಮ ಸ್ಥಾನಗಳಿಂದ ಎದ್ದು ಸ್ಪೀಕರ್ ಕಡೆಗೆ ಓಡಿಹೋಗಿ ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ. ಇನ್ನೂ ಕೆಲವರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿ ಎಸೆದಿದ್ದಾರೆ.

ಸರ್ಬಿಯಾದಲ್ಲಿ 1990ರಲ್ಲಿ ಬಹು-ಪಕ್ಷ ಪ್ರಜಾಪ್ರಭುತ್ವವನ್ನು ಪರಿಚಯಿಸಿದ ನಂತರ ಈ ರೀತಿ ಘಟನೆ ನಡೆದಿರುವುದು ಇದೇ ಮೊದಲು ಎಂದು ವರದಿಗಳು ಹೇಳಿವೆ.

ಘಟನೆಯಲ್ಲಿ ಇಬ್ಬರು ಸಂಸದರು ಗಾಯಗೊಂಡಿದ್ದಾರೆ ಮತ್ತು ಎಸ್‌ಎನ್‌ಎಸ್ ಪಕ್ಷದ ಜಾಸ್ಮಿನಾ ಒಬ್ರಡೋವಿಕ್ ಎಂಬುವವರು ಪಾರ್ಶ್ವವಾಯುವಿಗೆ ಒಳಗಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಪೀಕರ್ ಅನಾ ಬ್ರನಾಬಿಕ್ ತಿಳಿಸಿದ್ದಾರೆ.

ಸರ್ಕಾರದ ವಿರುದ್ದ ಪ್ರತಿಭಟನೆ

ನವೆಂಬರ್ 1, 2024ರಂದು ಎರಡನೇ ಅತಿದೊಡ್ಡ ನಗರವಾದ ನೋವಿ ಸ್ಯಾಡ್‌ನಲ್ಲಿ ಹೊಸದಾಗಿ ನವೀಕರಿಸಿದ ರೈಲು ನಿಲ್ದಾಣದ ಛಾವಣಿ ಕುಸಿದು 15 ಜನರು ಸಾವನ್ನಪ್ಪಿದರು ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು.

ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ದ ಡಿಸೆಂಬರ್‌ನಲ್ಲಿ ದೇಶದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಪ್ರಾರಂಭಿಸಿದ್ದರು. ಈಗ ಆ ಪ್ರತಿಭಟನೆಗೆ ಶಿಕ್ಷಕರು, ರೈತರು ಮತ್ತು ಇತರ ಕಾರ್ಮಿಕರು ಕೈ ಜೋಡಿಸಿದ್ದಾರೆ.

ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದಶಕದ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರವೇ ಈ ಛಾವಣಿ ಕುಸಿತ ದುರಂತಕ್ಕೆ ಕಾರಣ ಎಂದು ಪ್ರತಿಭಟನಾ ನಿರತರು ಸೇರಿದಂತೆ ಸರ್ಬಿಯನ್ನರು ಆರೋಪಿಸಿದ್ದಾರೆ.

ಈಗಾಗಲೇ ರಾಷ್ಟ್ರದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಮತ್ತು ದೇಶದಾದ್ಯಂತದ ಪಟ್ಟಣಗಳಲ್ಲಿ ನಡೆದ ಪ್ರತಿಭಟನೆಗಳು ಪ್ರಧಾನಿ ಮಿಲೋಸ್ ವುಸೆವಿಕ್ ಮತ್ತು ಇತರ ಇಬ್ಬರು ಮಂತ್ರಿಗಳ ರಾಜೀನಾಮೆಗೆ ಕಾರಣವಾಗಿವೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...