Homeಅಂತರಾಷ್ಟ್ರೀಯಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

ಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

- Advertisement -
- Advertisement -

ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್‌, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್‌ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯು ಸರ್ಬಿಯಾದ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸಿದೆ. ಅಲ್ಲಿನ ಸರ್ಕಾರ ಹಲವು ತಿಂಗಳುಗಳಿಂದ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಇಕ್ಕಟ್ಟಿಗೆ ಸಿಲುಕಿದೆ.

ಸಂಸತ್‌ನಲ್ಲಿ ಆಗಿದ್ದೇನು?

ಮಂಗಳವಾರ ಸಂಸತ್ತಿನ ಅಧಿವೇಶನ ಪ್ರಾರಂಭವಾದಾಗ, ಸರ್ಬಿಯನ್ ಪ್ರೋಗ್ರೆಸ್ಸಿವ್ ಪಾರ್ಟಿ (ಎಸ್‌ಎನ್‌ಎಸ್) ನೇತೃತ್ವದ ಆಡಳಿತ ಪಕ್ಷವು ಕಾರ್ಯಸೂಚಿಯನ್ನು ಅನುಮೋದಿಸಿದ ನಂತರ, ಕೆಲವು ವಿರೋಧ ಪಕ್ಷದ ನಾಯಕರು ತಮ್ಮ ಸ್ಥಾನಗಳಿಂದ ಎದ್ದು ಸ್ಪೀಕರ್ ಕಡೆಗೆ ಓಡಿಹೋಗಿ ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ. ಇನ್ನೂ ಕೆಲವರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿ ಎಸೆದಿದ್ದಾರೆ.

ಸರ್ಬಿಯಾದಲ್ಲಿ 1990ರಲ್ಲಿ ಬಹು-ಪಕ್ಷ ಪ್ರಜಾಪ್ರಭುತ್ವವನ್ನು ಪರಿಚಯಿಸಿದ ನಂತರ ಈ ರೀತಿ ಘಟನೆ ನಡೆದಿರುವುದು ಇದೇ ಮೊದಲು ಎಂದು ವರದಿಗಳು ಹೇಳಿವೆ.

ಘಟನೆಯಲ್ಲಿ ಇಬ್ಬರು ಸಂಸದರು ಗಾಯಗೊಂಡಿದ್ದಾರೆ ಮತ್ತು ಎಸ್‌ಎನ್‌ಎಸ್ ಪಕ್ಷದ ಜಾಸ್ಮಿನಾ ಒಬ್ರಡೋವಿಕ್ ಎಂಬುವವರು ಪಾರ್ಶ್ವವಾಯುವಿಗೆ ಒಳಗಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಪೀಕರ್ ಅನಾ ಬ್ರನಾಬಿಕ್ ತಿಳಿಸಿದ್ದಾರೆ.

ಸರ್ಕಾರದ ವಿರುದ್ದ ಪ್ರತಿಭಟನೆ

ನವೆಂಬರ್ 1, 2024ರಂದು ಎರಡನೇ ಅತಿದೊಡ್ಡ ನಗರವಾದ ನೋವಿ ಸ್ಯಾಡ್‌ನಲ್ಲಿ ಹೊಸದಾಗಿ ನವೀಕರಿಸಿದ ರೈಲು ನಿಲ್ದಾಣದ ಛಾವಣಿ ಕುಸಿದು 15 ಜನರು ಸಾವನ್ನಪ್ಪಿದರು ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು.

ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ದ ಡಿಸೆಂಬರ್‌ನಲ್ಲಿ ದೇಶದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಪ್ರಾರಂಭಿಸಿದ್ದರು. ಈಗ ಆ ಪ್ರತಿಭಟನೆಗೆ ಶಿಕ್ಷಕರು, ರೈತರು ಮತ್ತು ಇತರ ಕಾರ್ಮಿಕರು ಕೈ ಜೋಡಿಸಿದ್ದಾರೆ.

ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದಶಕದ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರವೇ ಈ ಛಾವಣಿ ಕುಸಿತ ದುರಂತಕ್ಕೆ ಕಾರಣ ಎಂದು ಪ್ರತಿಭಟನಾ ನಿರತರು ಸೇರಿದಂತೆ ಸರ್ಬಿಯನ್ನರು ಆರೋಪಿಸಿದ್ದಾರೆ.

ಈಗಾಗಲೇ ರಾಷ್ಟ್ರದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಮತ್ತು ದೇಶದಾದ್ಯಂತದ ಪಟ್ಟಣಗಳಲ್ಲಿ ನಡೆದ ಪ್ರತಿಭಟನೆಗಳು ಪ್ರಧಾನಿ ಮಿಲೋಸ್ ವುಸೆವಿಕ್ ಮತ್ತು ಇತರ ಇಬ್ಬರು ಮಂತ್ರಿಗಳ ರಾಜೀನಾಮೆಗೆ ಕಾರಣವಾಗಿವೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...