Homeಮುಖಪುಟಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಲೂಧಿಯಾನದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ನನ್ನ ನಿರ್ಧಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಪಂಜಾಬ್ ಸಿಎಂ ಬಡ ಕುಟುಂಬದಿಂದ ಬಂದಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟೆಲಿಪೋಲ್‌ನ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಈಗ ಹಾಲಿ ಮುಖ್ಯಮಂತ್ರಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಇದರಿಂದ ಮತ್ತೆ ರಾಜ್ಯ ಘಟಕದಲ್ಲಿ ಬಿಕ್ಕಟ್ಟು ಉಂಟಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದ ನವಜೋತ್ ಸಿಂಗ್ ಸಿಧು ಅಂದಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸುತ್ತಿದ್ದಾರೆ. ಹೊರಗಡೆ ರಾಹುಲ್ ಗಾಂಧಿಯವರ ಅಭಿಪ್ರಾಯಗಳಿಗೆ ಬದ್ಧ ಎಂದು ಹೇಳಿದ್ದರೂ ಕೂಡ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ಪಂಜಾಬ್ ಕಾಂಗ್ರೆಸ್‌ನಲ್ಲಿದೆ.

ಕಾಂಗ್ರೆಸ್ ನಿರ್ಧಾರಕ್ಕೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್‌ ಚನ್ನಿ ಧನ್ಯವಾದ ತಿಳಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಜನತೆಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಕಳೆದ 111 ದಿನಗಳಲ್ಲಿ ನಾವು ತುಂಬಾ ಶ್ರಮಿಸುತ್ತಿರುವುದನ್ನು ನೀವು ನೋಡಿದ್ದೀರಿ. ಹೀಗೆಯೇ ಹೊಸ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಪಂಜಾಬ್ ಮತ್ತು ಪಂಜಾಬಿಗಳನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುವ ಭರವಸೆಯನ್ನು ನಿಮಗೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಂದು ಮುಂಜಾನೆ ತಿಳಿಸಿದ್ದರು.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ಟ್ವೀಟ್ ಮಾಡಿದ್ದರು.

ಇನ್ನು, ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಎರಡು ಸ್ಥಾನಗಳಿಂದ ಕಣಕ್ಕಿಳಿಸಿದೆ. ಜೊತೆಗೆ ಉತ್ತರಾಖಂಡದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿದೆ. ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...