Homeಮುಖಪುಟಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಲೂಧಿಯಾನದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ನನ್ನ ನಿರ್ಧಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಪಂಜಾಬ್ ಸಿಎಂ ಬಡ ಕುಟುಂಬದಿಂದ ಬಂದಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟೆಲಿಪೋಲ್‌ನ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಈಗ ಹಾಲಿ ಮುಖ್ಯಮಂತ್ರಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಇದರಿಂದ ಮತ್ತೆ ರಾಜ್ಯ ಘಟಕದಲ್ಲಿ ಬಿಕ್ಕಟ್ಟು ಉಂಟಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದ ನವಜೋತ್ ಸಿಂಗ್ ಸಿಧು ಅಂದಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸುತ್ತಿದ್ದಾರೆ. ಹೊರಗಡೆ ರಾಹುಲ್ ಗಾಂಧಿಯವರ ಅಭಿಪ್ರಾಯಗಳಿಗೆ ಬದ್ಧ ಎಂದು ಹೇಳಿದ್ದರೂ ಕೂಡ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ಪಂಜಾಬ್ ಕಾಂಗ್ರೆಸ್‌ನಲ್ಲಿದೆ.

ಕಾಂಗ್ರೆಸ್ ನಿರ್ಧಾರಕ್ಕೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್‌ ಚನ್ನಿ ಧನ್ಯವಾದ ತಿಳಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಜನತೆಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಕಳೆದ 111 ದಿನಗಳಲ್ಲಿ ನಾವು ತುಂಬಾ ಶ್ರಮಿಸುತ್ತಿರುವುದನ್ನು ನೀವು ನೋಡಿದ್ದೀರಿ. ಹೀಗೆಯೇ ಹೊಸ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಪಂಜಾಬ್ ಮತ್ತು ಪಂಜಾಬಿಗಳನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುವ ಭರವಸೆಯನ್ನು ನಿಮಗೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಂದು ಮುಂಜಾನೆ ತಿಳಿಸಿದ್ದರು.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ಟ್ವೀಟ್ ಮಾಡಿದ್ದರು.

ಇನ್ನು, ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಎರಡು ಸ್ಥಾನಗಳಿಂದ ಕಣಕ್ಕಿಳಿಸಿದೆ. ಜೊತೆಗೆ ಉತ್ತರಾಖಂಡದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿದೆ. ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....