Homeಮುಖಪುಟಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಲೂಧಿಯಾನದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ನನ್ನ ನಿರ್ಧಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಪಂಜಾಬ್ ಸಿಎಂ ಬಡ ಕುಟುಂಬದಿಂದ ಬಂದಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚನ್ನಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟೆಲಿಪೋಲ್‌ನ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಈಗ ಹಾಲಿ ಮುಖ್ಯಮಂತ್ರಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಇದರಿಂದ ಮತ್ತೆ ರಾಜ್ಯ ಘಟಕದಲ್ಲಿ ಬಿಕ್ಕಟ್ಟು ಉಂಟಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದ ನವಜೋತ್ ಸಿಂಗ್ ಸಿಧು ಅಂದಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸುತ್ತಿದ್ದಾರೆ. ಹೊರಗಡೆ ರಾಹುಲ್ ಗಾಂಧಿಯವರ ಅಭಿಪ್ರಾಯಗಳಿಗೆ ಬದ್ಧ ಎಂದು ಹೇಳಿದ್ದರೂ ಕೂಡ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ಪಂಜಾಬ್ ಕಾಂಗ್ರೆಸ್‌ನಲ್ಲಿದೆ.

ಕಾಂಗ್ರೆಸ್ ನಿರ್ಧಾರಕ್ಕೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್‌ ಚನ್ನಿ ಧನ್ಯವಾದ ತಿಳಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಜನತೆಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಕಳೆದ 111 ದಿನಗಳಲ್ಲಿ ನಾವು ತುಂಬಾ ಶ್ರಮಿಸುತ್ತಿರುವುದನ್ನು ನೀವು ನೋಡಿದ್ದೀರಿ. ಹೀಗೆಯೇ ಹೊಸ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಪಂಜಾಬ್ ಮತ್ತು ಪಂಜಾಬಿಗಳನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುವ ಭರವಸೆಯನ್ನು ನಿಮಗೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಂದು ಮುಂಜಾನೆ ತಿಳಿಸಿದ್ದರು.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ಟ್ವೀಟ್ ಮಾಡಿದ್ದರು.

ಇನ್ನು, ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಎರಡು ಸ್ಥಾನಗಳಿಂದ ಕಣಕ್ಕಿಳಿಸಿದೆ. ಜೊತೆಗೆ ಉತ್ತರಾಖಂಡದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿದೆ. ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...