Homeಮುಖಪುಟಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ - ಕಾರಣ ಬಹಿರಂಗಪಡಿಸದ ಸಿಬಿಐ!

ಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ – ಕಾರಣ ಬಹಿರಂಗಪಡಿಸದ ಸಿಬಿಐ!

- Advertisement -
- Advertisement -

ಜುಲೈ 28 ರಂದು ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ಆಟೋದಲ್ಲಿ ಗುದ್ದಿ ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಅಕ್ಟೋಬರ್ 20 ರಂದು ಚಾರ್ಜ್ ಶೀಟ್‌ ಸಲ್ಲಿಸಿರುವ ಸಿಬಿಐ, ಕೊಲೆಯ ಪ್ರಧಾನ ಆರೋಪಿಯಾದ ರಾಹುಲ್ ಕುಮಾರ್ ಓರ್ವ ವೃತ್ತಿಪರ ಕಳ್ಳನಾಗಿದ್ದಾನೆ. ಆತ ಯಾವಾಗಲೂ ದುರ್ಬಲ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ. ಆತನ ಸಹವರ್ತಿ ಕಳ್ಳ ಲಖನ್ ವರ್ಮಾ ತನ್ನ ಯೋಜನೆಯನ್ನು ಜಾರಿಗೊಳಿಸಲು ಸಮಯಕ್ಕಾಗಿ ಕಾಯುತ್ತಿದ್ದ ಎಂದು ಸಿಬಿಐ ತಿಳಿಸಿದೆ. ಆದರೆ ಆ ಯೋಜನೆ ಏನು ಮತ್ತು ಕೊಲೆಯ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಸಿಬಿಐ ಏನನ್ನೂ ಹೇಳಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉದ್ದೇಶಪೂರ್ವಕವಾಗಿ ತೀವ್ರ ದೈಹಿಕ ಗಾಯಗಳನ್ನು ಉಂಟು ಮಾಡಿದ್ದಾರೆ. ತೀವ್ರ ದೈಹಿಕ ಹಲ್ಲೆಯಿಂದಾಗಿ ನ್ಯಾಯಾಧೀಶರು ಸಾವನಪ್ಪಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. ಸಿಬಿಐ ಸ್ಪಷ್ಟವಾಗಿ ವಿಚಾರಣೆ ನಡೆಸುತ್ತಿಲ್ಲ ಎಂದು ಈ ಹಿಂದೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಇಬ್ಬರೂ ಆರೋಪಿಗಳು ಆಟೋವೊಂದನ್ನು ಕದ್ದು ಬಲಿಯಾಪುರ ಕಡೆ ಚಲಾಯಿಸಿದ್ದರು. ಹಿಂದಿನ ನಂಬರ್ ಪ್ಲೇಟ್‌ ಅನ್ನು ಬದಲಿಸಿದ್ದರು ಮತ್ತು ಮುಂದಿನದ್ದನ್ನು ಕಾಣದ ಹಾಗೆ ತಿರುಚಿದ್ದರು. ಕೆಲ ಸಮಯ ಸುಮ್ಮನೆ ಅಡ್ಡಾಡಿ ಸಮಯ ಕಳೆದಿದ್ದರು ಎಂದು ಸಿಬಿಐ ಹೇಳಿದೆ.

ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಧನಬಾದ್ ಪೊಲೀಸರು ಆರಂಭದಲ್ಲಿ ತನಿಖೆ ನಡೆಸಿ ನಂತರ ಸಿಬಿಐಗೆ ಒಪ್ಪಿಸಿದ್ದರು. ಆರೋಪಿಗಳು ಉದ್ದೇಶಪೂರ್ವಕವಾಗಿ ಜಡ್ಜ್‌ ಮೇಲೆ ಆಟೋ ಹರಿಸಿದ್ದಾರೆ. ನಂತರ ನಿಲ್ಲಿಸದೇ ಅದೇ ವೇಗದಲ್ಲಿ ಮುಂದುವರೆದಿದ್ದಾರೆ. ಮುಂದೆ ಒಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಆತನಿಗೆ ಗುದ್ದದೆ ಬಲಕ್ಕೆ ಆಟೋ ಚಲಾಯಿಸಿದ್ದಾರೆ. ಅಂದರೆ ಅವರು ಮಾನಸಿಕವಾಗಿ ಸ್ಥಿಮಿತದಲ್ಲಿದ್ದಾರೆ ಮತ್ತು ಬೇಕಂತಲೇ ಈ ಕೃತ್ಯ ಎಸಗಿಸಿದ್ದಾರೆ ಎಂದು ಸಿಬಿಐ ಹೇಳಿದೆ. ಆದರೆ ಯಾವ ಕಾರಣಕ್ಕಾಗಿ ಕೊಂದರು ಎಂಬುದನ್ನು ಬಹಿರಂಗಪಡಿಸಿಲ್ಲ.

ಈ ಮೊದಲು ಜಾಮೀನು ನಿರಾಕರಿಸಿದ ಕಾರಣಕ್ಕೆ ನ್ಯಾಯಾಧೀಶರ ಕೊಲೆಯಾಗಿದೆ ಎಂದು ಶಂಕಿಸಲಾಗಿತ್ತು. ಸುಪ್ರೀಂ ಕೋರ್ಟ್ ಸುಮೋಟೊ ಪ್ರಕರಣ ದಾಖಲಿಸಿತ್ತು.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...