Homeಮುಖಪುಟಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ - ಕಾರಣ ಬಹಿರಂಗಪಡಿಸದ ಸಿಬಿಐ!

ಬಿಹಾರದಲ್ಲಿ ಜಡ್ಜ್‌ ಕೊಲೆ ಆರೋಪಿಗಳ ಮೇಲೆ ಚಾರ್ಜ್‌ಶೀಟ್ – ಕಾರಣ ಬಹಿರಂಗಪಡಿಸದ ಸಿಬಿಐ!

- Advertisement -
- Advertisement -

ಜುಲೈ 28 ರಂದು ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ಆಟೋದಲ್ಲಿ ಗುದ್ದಿ ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಅಕ್ಟೋಬರ್ 20 ರಂದು ಚಾರ್ಜ್ ಶೀಟ್‌ ಸಲ್ಲಿಸಿರುವ ಸಿಬಿಐ, ಕೊಲೆಯ ಪ್ರಧಾನ ಆರೋಪಿಯಾದ ರಾಹುಲ್ ಕುಮಾರ್ ಓರ್ವ ವೃತ್ತಿಪರ ಕಳ್ಳನಾಗಿದ್ದಾನೆ. ಆತ ಯಾವಾಗಲೂ ದುರ್ಬಲ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ. ಆತನ ಸಹವರ್ತಿ ಕಳ್ಳ ಲಖನ್ ವರ್ಮಾ ತನ್ನ ಯೋಜನೆಯನ್ನು ಜಾರಿಗೊಳಿಸಲು ಸಮಯಕ್ಕಾಗಿ ಕಾಯುತ್ತಿದ್ದ ಎಂದು ಸಿಬಿಐ ತಿಳಿಸಿದೆ. ಆದರೆ ಆ ಯೋಜನೆ ಏನು ಮತ್ತು ಕೊಲೆಯ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಸಿಬಿಐ ಏನನ್ನೂ ಹೇಳಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉದ್ದೇಶಪೂರ್ವಕವಾಗಿ ತೀವ್ರ ದೈಹಿಕ ಗಾಯಗಳನ್ನು ಉಂಟು ಮಾಡಿದ್ದಾರೆ. ತೀವ್ರ ದೈಹಿಕ ಹಲ್ಲೆಯಿಂದಾಗಿ ನ್ಯಾಯಾಧೀಶರು ಸಾವನಪ್ಪಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. ಸಿಬಿಐ ಸ್ಪಷ್ಟವಾಗಿ ವಿಚಾರಣೆ ನಡೆಸುತ್ತಿಲ್ಲ ಎಂದು ಈ ಹಿಂದೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಇಬ್ಬರೂ ಆರೋಪಿಗಳು ಆಟೋವೊಂದನ್ನು ಕದ್ದು ಬಲಿಯಾಪುರ ಕಡೆ ಚಲಾಯಿಸಿದ್ದರು. ಹಿಂದಿನ ನಂಬರ್ ಪ್ಲೇಟ್‌ ಅನ್ನು ಬದಲಿಸಿದ್ದರು ಮತ್ತು ಮುಂದಿನದ್ದನ್ನು ಕಾಣದ ಹಾಗೆ ತಿರುಚಿದ್ದರು. ಕೆಲ ಸಮಯ ಸುಮ್ಮನೆ ಅಡ್ಡಾಡಿ ಸಮಯ ಕಳೆದಿದ್ದರು ಎಂದು ಸಿಬಿಐ ಹೇಳಿದೆ.

ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಇದರ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಧನಬಾದ್ ಪೊಲೀಸರು ಆರಂಭದಲ್ಲಿ ತನಿಖೆ ನಡೆಸಿ ನಂತರ ಸಿಬಿಐಗೆ ಒಪ್ಪಿಸಿದ್ದರು. ಆರೋಪಿಗಳು ಉದ್ದೇಶಪೂರ್ವಕವಾಗಿ ಜಡ್ಜ್‌ ಮೇಲೆ ಆಟೋ ಹರಿಸಿದ್ದಾರೆ. ನಂತರ ನಿಲ್ಲಿಸದೇ ಅದೇ ವೇಗದಲ್ಲಿ ಮುಂದುವರೆದಿದ್ದಾರೆ. ಮುಂದೆ ಒಬ್ಬ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಆತನಿಗೆ ಗುದ್ದದೆ ಬಲಕ್ಕೆ ಆಟೋ ಚಲಾಯಿಸಿದ್ದಾರೆ. ಅಂದರೆ ಅವರು ಮಾನಸಿಕವಾಗಿ ಸ್ಥಿಮಿತದಲ್ಲಿದ್ದಾರೆ ಮತ್ತು ಬೇಕಂತಲೇ ಈ ಕೃತ್ಯ ಎಸಗಿಸಿದ್ದಾರೆ ಎಂದು ಸಿಬಿಐ ಹೇಳಿದೆ. ಆದರೆ ಯಾವ ಕಾರಣಕ್ಕಾಗಿ ಕೊಂದರು ಎಂಬುದನ್ನು ಬಹಿರಂಗಪಡಿಸಿಲ್ಲ.

ಈ ಮೊದಲು ಜಾಮೀನು ನಿರಾಕರಿಸಿದ ಕಾರಣಕ್ಕೆ ನ್ಯಾಯಾಧೀಶರ ಕೊಲೆಯಾಗಿದೆ ಎಂದು ಶಂಕಿಸಲಾಗಿತ್ತು. ಸುಪ್ರೀಂ ಕೋರ್ಟ್ ಸುಮೋಟೊ ಪ್ರಕರಣ ದಾಖಲಿಸಿತ್ತು.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...