Homeಕರ್ನಾಟಕಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

- Advertisement -
- Advertisement -

ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಇತರರ ವಿರುದ್ದ ನೀಡಲಾಗಿದ್ದ ದೂರಿಗೆ ಎಫ್‌ಐಆರ್‌ ದಾಖಲಿಸದ ಪೊಲೀಸ್ ಅಧಿಕಾರಿಗೆ ನೋಡಿಸ್ ನೀಡಲಾಗಿದೆ. ವಿಜಯೇಂದ್ರ ವಿರುದ್ಧ ನೀಡಿದ್ದ ದೂರನ್ನು ಕ್ಲೋಸ್ ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ 65 ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ನೋಟೀಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದರು. ಹೀಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎಪ್ರಿಲ್ 7 ಕ್ಕೆ ಮುಂದೂಡಿದೆ. ಆರೋಪಿಗಳ ವಿರುದ್ದ ಲಂಚ ಆರೋಪವಿದ್ದರೂ ಯಾವುದೆ ದೂರು ದಾಖಲಿಸದೆ ಮುಕ್ತಾಯಗೊಳಿಸಿದ್ದಕ್ಕೆ ಜನಾಧಿಕಾರ ಸಂಘರ್ಷ ಪರಿಷತ್‌ ಮಾರ್ಚ್ 3 ರಂದು ದೂರು ದಾಖಲಿಸಿತ್ತು.

ಶೇಷಾದ್ರಿಪುರಂ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ ಜನಾಧಿಕಾರ ಸ೦ಘರ್ಷ ಪರಿಷತ್ 2020 ರ ಸೆಪ್ಟ೦ಬರ್‌ 25 ರಂದು ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ದೂರು ಸಲ್ಲಿಸಿತ್ತು. ನಿಯಮದಂತೆ ಇಂತಹ ದೂರು ಸಲ್ಲಿಕೆಯಾದರೆ, ದೂರು ಸಲ್ಲಿಕೆಯಾದ 24 ಗ೦ಟೆಯೊಳಗೆ ಆರೋಪಿತರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ಅವರು ಈ ನಿಮಯವನ್ನು ಉಲ್ಲಂಘಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...