Homeಕರ್ನಾಟಕಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

- Advertisement -
- Advertisement -

ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಇತರರ ವಿರುದ್ದ ನೀಡಲಾಗಿದ್ದ ದೂರಿಗೆ ಎಫ್‌ಐಆರ್‌ ದಾಖಲಿಸದ ಪೊಲೀಸ್ ಅಧಿಕಾರಿಗೆ ನೋಡಿಸ್ ನೀಡಲಾಗಿದೆ. ವಿಜಯೇಂದ್ರ ವಿರುದ್ಧ ನೀಡಿದ್ದ ದೂರನ್ನು ಕ್ಲೋಸ್ ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ 65 ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ನೋಟೀಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದರು. ಹೀಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎಪ್ರಿಲ್ 7 ಕ್ಕೆ ಮುಂದೂಡಿದೆ. ಆರೋಪಿಗಳ ವಿರುದ್ದ ಲಂಚ ಆರೋಪವಿದ್ದರೂ ಯಾವುದೆ ದೂರು ದಾಖಲಿಸದೆ ಮುಕ್ತಾಯಗೊಳಿಸಿದ್ದಕ್ಕೆ ಜನಾಧಿಕಾರ ಸಂಘರ್ಷ ಪರಿಷತ್‌ ಮಾರ್ಚ್ 3 ರಂದು ದೂರು ದಾಖಲಿಸಿತ್ತು.

ಶೇಷಾದ್ರಿಪುರಂ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ ಜನಾಧಿಕಾರ ಸ೦ಘರ್ಷ ಪರಿಷತ್ 2020 ರ ಸೆಪ್ಟ೦ಬರ್‌ 25 ರಂದು ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ದೂರು ಸಲ್ಲಿಸಿತ್ತು. ನಿಯಮದಂತೆ ಇಂತಹ ದೂರು ಸಲ್ಲಿಕೆಯಾದರೆ, ದೂರು ಸಲ್ಲಿಕೆಯಾದ 24 ಗ೦ಟೆಯೊಳಗೆ ಆರೋಪಿತರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ಅವರು ಈ ನಿಮಯವನ್ನು ಉಲ್ಲಂಘಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...