Homeಕರ್ನಾಟಕಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

- Advertisement -
- Advertisement -

ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಇತರರ ವಿರುದ್ದ ನೀಡಲಾಗಿದ್ದ ದೂರಿಗೆ ಎಫ್‌ಐಆರ್‌ ದಾಖಲಿಸದ ಪೊಲೀಸ್ ಅಧಿಕಾರಿಗೆ ನೋಡಿಸ್ ನೀಡಲಾಗಿದೆ. ವಿಜಯೇಂದ್ರ ವಿರುದ್ಧ ನೀಡಿದ್ದ ದೂರನ್ನು ಕ್ಲೋಸ್ ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ 65 ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ನೋಟೀಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದರು. ಹೀಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎಪ್ರಿಲ್ 7 ಕ್ಕೆ ಮುಂದೂಡಿದೆ. ಆರೋಪಿಗಳ ವಿರುದ್ದ ಲಂಚ ಆರೋಪವಿದ್ದರೂ ಯಾವುದೆ ದೂರು ದಾಖಲಿಸದೆ ಮುಕ್ತಾಯಗೊಳಿಸಿದ್ದಕ್ಕೆ ಜನಾಧಿಕಾರ ಸಂಘರ್ಷ ಪರಿಷತ್‌ ಮಾರ್ಚ್ 3 ರಂದು ದೂರು ದಾಖಲಿಸಿತ್ತು.

ಶೇಷಾದ್ರಿಪುರಂ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ ಜನಾಧಿಕಾರ ಸ೦ಘರ್ಷ ಪರಿಷತ್ 2020 ರ ಸೆಪ್ಟ೦ಬರ್‌ 25 ರಂದು ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ದೂರು ಸಲ್ಲಿಸಿತ್ತು. ನಿಯಮದಂತೆ ಇಂತಹ ದೂರು ಸಲ್ಲಿಕೆಯಾದರೆ, ದೂರು ಸಲ್ಲಿಕೆಯಾದ 24 ಗ೦ಟೆಯೊಳಗೆ ಆರೋಪಿತರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ಅವರು ಈ ನಿಮಯವನ್ನು ಉಲ್ಲಂಘಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...

ಹೈದರಾಬಾದ್ : ಡಿಜಿಟಲೀಕರಣಗೊಂಡ ಶೇ. 21ರಷ್ಟು ಮತದಾರರಿಗೆ SIR ನೋಟಿಸ್

ಹೈದರಾಬಾದ್ ಜಿಲ್ಲಾ ಚುನಾವಣಾ ಪ್ರಾಧಿಕಾರವು (ಡಿಇಎ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) 2026ರ ಅಡಿಯಲ್ಲಿ ಸೋಮವಾರ (ಆ. 17) ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, 5.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ...

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...