Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....