Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...