Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...